ಭಾರೀ ಮಳೆ: ದ.ಕ. ಜಿಲ್ಲೆಯ ಪಿಯು, ಪದವಿ ಕಾಲೇಜುಗಳಿಗೆ ಇಂದು (ಜೂ.30) ರಜೆ ಘೋಷಣೆ
ಮಂಗಳೂರು, ಜೂ.30: ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಮಳೆ ಬಿರುಸುಗೊಂಡಿರುವ ಕಾರಣ ಜಿಲ್ಲೆಯ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಇಂದು (ಜೂ.30) ರಜೆ ಘೋಷಿಸಲಾಗಿದೆ.
ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.
ಮಂಗಳೂರು ನಗರ ಪಾಲಿಕೆ ವ್ಯಾಪ್ತಿಯಲ್ಲಿ ಈಗಾಗಲೆ ಮಕ್ಕಳು ಶಾಲೆಗಳಿಗೆ ಬಂದಿದ್ದಲ್ಲಿ ಎಲ್ಲಾ ಮುಂಜಾಗೃತೆ ವಹಿಸಿ ಕಾರ್ಯ ನಿರ್ವಹಿಸುವುದು, ಶಾಲೆಗೆ ಬರಲು ಅನಾನುಕುಲವಾದ ಪ್ರದೇಶದಲ್ಲಿ ಅಂತಹ ಮಕ್ಕಳಿಗೆ ಈ ದಿನ ರಜೆ ಸಾರಲಾಗಿದೆ. ಶಿಕ್ಷಣ ಇಲಾಖಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲಾ ಮಕ್ಕಳ ಸುರಕ್ಷತೆ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ದ.ಕ. ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಇದೇರೀತಿ ಮಳೆ ಮುಂದುವರಿದರೆ, ಶುಕ್ರವಾರ ಬೆಳಗ್ಗೆ ಪರಿಸ್ಥಿತಿಯನ್ನು ಅವಲೋಕಿಸಿ ಶಾಲೆಗಳಿಗೆ ರಜೆ ನೀಡುವ ಬಗ್ಗೆ ನಿರ್ಧರಿಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Next Story