ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ: ಸುಪ್ರೀಂ ಕೋರ್ಟ್ ಆದೇಶ ಪಾಲಿಸಲು ಖಾಝಿ ತ್ವಾಖಾ ಉಸ್ತಾದ್ ಕರೆ
ಮಂಗಳೂರು, ಜು.2: ಮಸೀದಿಗಳಲ್ಲಿ ಧ್ವನಿವರ್ಧಕ ಬಳಕೆ ಕುರಿತಂತೆ ಯಾವುದೇ ಗೊಂದಲ ಬೇಡ, ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಿರಿ ಎಂದು ದ.ಕ. ಜಿಲ್ಲಾ ಖಾಝಿ ಶೈಖುನಾ ಅಲ್ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ಕರೆ ನೀಡಿದ್ದಾರೆ.
ಮಸೀದಿಗಳಲ್ಲಿ ಧ್ವನಿವರ್ಧಕ ಬಳಸುವ ಕುರಿತು ಗೊಂದಲ ವಾತಾವರಣ ಉಂಟಾಗಿದ್ದು, ಈ ಬಗ್ಗೆ ಯಾರು ಗೊಂದಲಕ್ಕೆ ಒಳಪಡದೆ ಸಂಯಮ ಪಾಲಿಸಿರಿ ಹಾಗೂ ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸುವಂತೆ ಅವರು ಸೂಚಿಸಿದ್ದಾರೆ.
Next Story