ಮಂಗಳೂರು | ಅಗ್ನಿಪಥ್ ಯೋಜನೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ
ಮಂಗಳೂರು, ಜು.2: ಮಂಗಳೂರು ದಕ್ಷಿಣ ಬ್ಲಾಕ್ ಹಾಗೂ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕೇಂದ್ರ ಸರಕಾರದ 'ಅಗ್ನಿಪಥ್ ಯೋಜನೆ' ವಿರುದ್ಧ ನಗರದ ಮಂಗಳೂರು ಮಿನಿ ವಿಧಾನಸೌಧ (ತಾಲೂಕು ಕಚೇರಿ ) ಮುಂಭಾಗದಲ್ಲಿ ಶನಿವಾರ ಪ್ರತಿಭಟನೆ ನಡೆಯಿತು.
ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಜೆ.ಆರ್.ಲೋಬೊ, ಐವನ್ ಡಿಸೋಜ, ಪಕ್ಷದ ಮುಖಂಡರಾದ ಶಶಿಧರ್ ಹೆಗ್ಡೆ, ಅಬ್ದುಲ್ ಸಲಿಂ, ಪ್ರಕಾಶ್ ಸಾಲ್ಯಾನ್, ವಿಶ್ವಾಸ್ ದಾಸ್, ಪದ್ಮನಾಭ ಅಮೀನ್, ಸುನೀಲ್ ಪೂಜಾರಿ, ರಾಕೇಶ್ ದೇವಾಡಿಗ, ಗಿರೀಶ್ ಶೆಟ್ಟಿ, ಮಂಜುಳಾ ನಾಯಕ್, ಆಸಿಫ್ ಬೆಂಗ್ರೆ ಚೇತನ್ ಬೆಂಗ್ರೆ, ಹೈದರ್ ಆಲಿ, ಲಕ್ಷ್ಮಣ್ ಶೆಟ್ಟಿ, ಕೃತಿನ್ ಕುಮಾರ್, ಉದಯ್ ಕುಂದರ್, ಯೋಗೇಶ್ ಆಚಾರ್ಯ, ಶಾನ್ ಡಿಸೋಜ ಮೊದಲಾದವರು ಭಾಗವಹಿಸಿದ್ದರು.
Next Story