ಸುಳ್ಯ ನಗರ ಪಂಚಾಯತ್ ಪೌರ ಕಾರ್ಮಿಕ ಆತ್ಮಹತ್ಯೆ
ದೇವನಾಥ
ಸುಳ್ಯ: ನಗರ ಪಂಚಾಯತ್ ನಲ್ಲಿ ಕಸ ಸಂಗ್ರಹ ಹಾಗೂ ವಿಲೇವಾರಿ ಘಟಕದಲ್ಲಿ ಪೌರಕಾರ್ಮಿಕರಾಗಿ ಕಾರ್ಯನಿರ್ವಹಿಸುತ್ತಿದ್ದ ದುಗಲಡ್ಕದ ನೀರಬಿದಿರೆ ನಿವಾಸಿ ದೇವನಾಥ (33) ಎಂಬವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸೋಮವಾರ ಮಧ್ಯಾಹ್ನ ಸುಳ್ಯದ ಕೊಡಿಯಾಲಬೈಲು ಸೇತುವೆಯಲ್ಲಿ ಕುಳಿತು ವಿಷ ಸೇವಿಸುತ್ತಿರುವುದಾಗಿ ಮಾಹಿತಿ ದೊರೆತ ಅವರ ಗೆಳೆಯರು ಧಾವಿಸಿ ಕುಡಿದ ವಿಷವನ್ನು ಹೊರ ಹಾಕುವ ಪ್ರಯತ್ನ ಮಾಡಿ, ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.
ನಂತರ ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಮೃತರು ತಾಯಿ, ಸಹೋದರ, ಸಹೋದರಿ, ಅತ್ತಿಗೆ ನ.ಪಂ.ಸದಸ್ಯೆ ಶಶಿಕಲಾ ನೀರಬಿದಿರೆ ಅವರನ್ನು ಅಗಲಿದ್ದಾರೆ.
Next Story