ಸೇತುವೆ ಮೇಲೆ ಬೈಕ್ ನಿಲ್ಲಿಸಿ ಸವಾರ ನಾಪತ್ತೆ: ದೂರು
ಮಂಗಳೂರು : ಬಜ್ಪೆ ಸಮೀಪದ ಮರವೂರು ಸೇತುವೆಯಲ್ಲಿ ಬೈಕ್ ನಿಲ್ಲಿಸಿದ ಸವಾರನೊಬ್ಬ ಕಾಣೆಯಾದ ಬಗ್ಗೆ ಪ್ರಕರಣ ದಾಖಲಾಗಿದೆ.
ಕದ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ವ್ಯಾಸನಗರದ ವಿವೇಕ ಪ್ರಭು (42) ಕಾಣೆಯಾದ ವ್ಯಕ್ತಿ. ಫಳ್ನೀರ್ನ ಪೆಟ್ರೋಲ್ ಪಂಪ್ವೊಂದರಲ್ಲಿ ಉದ್ಯೋಗಿಯಾಗಿದ್ದ ವಿವೇಕ್ ಮಂಗಳವಾರ ಮಧ್ಯರಾತ್ರಿ ಮನೆಯಿಂದ ಹೊರ ಹೋಗಿದ್ದರು. ಮುಂಜಾನೆ ಮನೆಯವರು ಎದ್ದಾಗ ವಿವೇಕ್ ಪ್ರಭು ಕಾಣಿಸಲಿಲ್ಲ. ಆದರೆ ಬುಧವಾರ ಬೆಳಗ್ಗೆ ಅವರ ಬೈಕ್ ಬಜ್ಪೆ ಸಮೀಪದ ಮರವೂರು ಸೇತುವೆ ಮೇಲೆ ಪತ್ತೆಯಾಗಿದೆ.
ಕೌಟುಂಬಿಕ ಕಲಹದ ಕಾರಣ ಮನೆ ಬಿಟ್ಟು ಹೋಗಿದ್ದಾರೆ ಎನ್ನಲಾಗಿದೆ. ಇವರು ಸೇತುವೆಯಲ್ಲಿ ಬೈಕ್ ನಿಲ್ಲಿಸಿ ಎಲ್ಲಿಗೆ ಹೋಗಿದ್ದಾರೆ ಎಂದು ತಿಳಿದು ಬಂದಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿವೇಕ್ರ ಪತ್ನಿ ಕದ್ರಿ ಠಾಣೆಗೆ ನೀಡಿರುವ ದೂರಿನಂತೆ ನಾಪತ್ತೆ ಪ್ರಕರಣ ದಾಖಲಾಗಿದೆ.
Next Story