Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಳ್ಳಾಲ : ತೀವ್ರಗೊಂಡ ಕಡಲ್ಕೊರೆತ;...

ಉಳ್ಳಾಲ : ತೀವ್ರಗೊಂಡ ಕಡಲ್ಕೊರೆತ; ಸಚಿವರು ಭೇಟಿ

ವಾರ್ತಾಭಾರತಿವಾರ್ತಾಭಾರತಿ7 July 2022 10:15 PM IST
share
ಉಳ್ಳಾಲ : ತೀವ್ರಗೊಂಡ ಕಡಲ್ಕೊರೆತ; ಸಚಿವರು ಭೇಟಿ

ಉಳ್ಳಾಲ: ಸೋಮೇಶ್ವರ, ಉಚ್ಚಿಲ ಬಟ್ಟಪ್ಪಾಡಿ, ಉಳ್ಳಾಲದ ಮೊಗವೀರ ಪಟ್ಣ  ಕಡಲ್ಕೊರೆತ ಪೀಡಿತ ಪ್ರದೇಶಗಳಿಗೆ ಕಂದಾಯ ಸಚಿವ ಆರ್ ಅಶೋಕ್, ಇಂಧನ ಸಚಿವ ಸುನಿಲ್ ಕುಮಾರ್ ಗುರುವಾರ ಭೇಟಿ ನೀಡಿದರು.

ಕಡಲ್ಕೊರೆತ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮದ ಜೊತೆ ಮಾತನಾಡಿದ ಸಚಿವ ಆರ್ ಅಶೋಕ್ ಅವರು, ಉಳ್ಳಾಲದಲ್ಲೂ ಕೂಡ ಕಡಲ್ಕೊರೆತ ಆಗಿ ಮೀನುಗಾರರ ಮನೆ ಬಿದ್ದು ಹೋಗಿದೆ. ಶಾಶ್ವತ ತಡೆಗೋಡೆ ಬಗ್ಗೆ ಸ್ಥಳೀಯರು ಬೇಡಿಕೆ ಇಟ್ಟಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಜತೆ ಚರ್ಚೆ ಮಾಡಿ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಈಗಾಗಲೇ ಒಂದು ಬಾರಿ ತಡೆಗೋಡೆ ವ್ಯವಸ್ಥೆ ಆಗಿದೆ. ಇದರ ಬಳಿಕ ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಯಾವ ರೀತಿ ನಡೆಸಿದೆ ಎಂಬುದರ ಬಗ್ಗೆ  ತಿಳಿದು ಕ್ರಮ ಕೈಗೊಳ್ಳಲಾಗುವುದು. ಕಡಲು ವೇಗದಿಂದ ಕೊರೆಯುತ್ತಿದೆ. ಇದರಿಂದ ಮೀನುಗಾರರ ಸಹಿತ ವಾಸದ ಮನೆಗಳ ರಕ್ಷಣೆ ಆಗಬೇಕು. ಗೆಸ್ಟ್ ಹೌಸ್ ಗಿಂತ ಹೆಚ್ಚು ಮನೆಗಳ ರಕ್ಷಣೆಗೆ ಒತ್ತು ನೀಡಬೇಕು. ಮಳೆಗೆ ಹಾನಿಯಾದ ಮನೆಗೆ ತುರ್ತು ಪರಿಹಾರ ನೀಡಲು ಜಿಲ್ಲಾಧಿಕಾರಿಗಳಿಗೆ ತಿಳಿಸಿದ್ದೇನೆ. ಏಳು ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ ಮಳೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಕಾರಣ ದಿಂದ ಏಳು ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಹಾನಿಯಾದರೆ ಸೂಕ್ತ ಪರಿಹಾರ ವ್ಯವಸ್ಥೆ ಒದಗಿಸಲು ಸೂಚನೆ ನೀಡಿದ್ದೇನೆ. ಮನೆ ಸಂಪೂರ್ಣ ಹಾನಿಯಾದರೆ ಐದು ಲಕ್ಷ ಪರಿಹಾರ ವ್ಯವಸ್ಥೆ ಸರ್ಕಾರ ಮಾಡಲಿದೆ. ಮನೆ ಕೇಳಿಕೊಂಡವರಿಗೆ ಪರ್ಯಾಯ ವ್ಯವಸ್ಥೆ ಸರ್ಕಾರ ಮಾಡಲಿದೆ. ಮನೆ ಕಳಕೊಂಡವರಿಗೆ NDRF ನ ನಿಯಮ ಪ್ರಕಾರ ಈ ಹಿಂದೆ 95,000 ಪರಿಹಾರ ಇದ್ದು ಮುಖ್ಯಂತ್ರಿಗಳಲ್ಲಿ ಮಾತನಾಡಿ ಅದನ್ನ 5 ಲಕ್ಷಕ್ಕೆ ಏರಿಸಿದ್ದೇವೆ. ಸಂತ್ರಸ್ತರಿಗೆ ಶೀಘ್ರ ಪರಿಹಾರ ಒದಗಿಸುವಂತೆ ಆದೇಶಿಸಿರುವುದಾಗಿ ಹೇಳಿದರು ಎಂದರು.

ಕಡಲ್ಕೊರೆತ ವಿಷಯಕ್ಕೆ ಸಂಬಂಧಿಸಿ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಕ್ಷೇತ್ರದ ಶಾಸಕ ಯುಟಿ ಖಾದರ್ ಆರೋಪಿಸುತ್ತಾರೆ ಎಂದು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಸರ್ಕಾರ ಬಂದು ಕೆಲವು ವರ್ಷಗಳು ಮಾತ್ರ ಆದದ್ದು. 60 ವರ್ಷಗಳ ಕಾಲ ಕಾಂಗ್ರೆಸ್ ಸರ್ಕಾರ ಇತ್ತು. ಆಗ ಕಡಲು ಇತ್ತು, ಕೊರೆಯುತ್ತಿತ್ತು. ಎನ್‌ಡಿಆರ್‌ಎಫ್ ಫಂಡ್ ನಿಂದ ಏನೆಲ್ಲಾ ಮಾಡಲು ಆಗುತ್ತದೆಯೇ ಅದನ್ನೆಲ್ಲ ಮಾಡುತ್ತೇವೆ. ಇದಕ್ಕೆ ಆಡಳಿತ ಪಕ್ಷ, ವಿರೋಧ ಪಕ್ಷ ಎಂಬುದಿಲ್ಲ. ಉಳ್ಳಾಲದ ಶಾಸಕ ಯು.ಟಿ.ಖಾದರ್ ಅವರು ಚುನಾವಣೆ ದೃಷ್ಟಿ ಮುಂದಿಟ್ಟು ಸುಮ್ನೆ ಆಪಾದನೆ ಮಾಡೋದನ್ನ ಬಿಡಲಿ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಈ ಪ್ರದೇಶಗಳಿಗೆ ಏನ್ ಮಾಡಿದ್ದಾರೆ ಎಂದು ಜನರಿಗೆ ತಿಳಿದಿದೆ. ಸರಕಾರದ ವಿರುದ್ಧ ಠೀಕೆ, ಟಿಪ್ಪಣಿ ಸಹಜ. ಇದೀಗ ಸ್ಥಳಕ್ಕೆ ಬಂದಿದ್ದೇವೆ. ಪರಿಶೀಲನೆ ಆಗಿದೆ. ನಾವು ರಾಜಕೀಯ ಮಾಡಲ್ಲ ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿದ್ದೇವೆ. ಸಂತ್ರಸ್ತರಿಗೆ ಶೀಘ್ರ ಪರಿಹಾರನೂ ಒದಗಿಸುತ್ತೇವೆ  ಎಂದರು.

ಈ ಸಂದರ್ಭದಲ್ಲಿ ಬಂದರು ಸಚಿವ ಎಸ್.ಅಂಗಾರ, ಬಿಜೆಪಿ ಮುಖಂಡರಾದ ಸಂತೋಷ್ ಕುಮಾರ್ ಬೋಳಿಯಾರ್, ಚಂದ್ರಹಾಸ್ ಪಂಡಿತ್ ಹೌಸ್ ಮೊದಲಾವರು ಜೊತೆಯಲ್ಲಿದ್ದರು.

ಈ ಸಂದರ್ಭದಲ್ಲಿ ಸ್ಥಳೀಯರು ಬಟ್ಟಂಪಾಡಿಯಲ್ಲಿ ಹಲವು ವರ್ಷಗಳಿಂದ ಕಡಲ್ಕೊರೆತ ತೀವ್ರವಾಗಿ ಇದೆ. 30 ಫೀಟ್ ಅಂತರದಲ್ಲಿ ಕೊರೆಯುತ್ತಿದೆ. ಇದಕ್ಕೆ ಶಾಶ್ವತ ತಡೆಗೋಡೆ ನಿರ್ಮಾಣ ಆಗಬೇಕು. ಈವರೆಗೆ ಹಲವು ಸಚಿವರು ಬಂದು ಭರವಸೆ ನೀಡಿ ಹೋಗಿದ್ದು ಮಾತ್ರ. ಪರಿಹಾರ ಆಗಲಿಲ್ಲ. ನೀವಾದರೂ ದಯವಿಟ್ಟು ಶಾಶ್ವತ ಪರಿಹಾರ ಒದಗಿಸಿ ಕೊಡಿ ಎಂದು ಸಚಿವ ಆರ್ ಅಶೋಕ್ ಅವರಲ್ಲಿ ವಿನಂತಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X