ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ, ಓರ್ವ ವಶಕ್ಕೆ
ಸುಳ್ಯ, ಜು. 28: ದ.ಕ. ಜಿಲ್ಲೆಯ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಿ, ಓರ್ವನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ದಕ್ಷಿಣ ಕನ್ನಡ ಎಸ್ಪಿ ಹೃಷಿಕೇಶ್ ಸೋನಾವಣೆ ಅವರು ಹೇಳಿಕೆ ನೀಡಿದ್ದಾರೆ.
ಬೆಳ್ಳಾರೆ ಮೂಲದ ಶಫೀಕ್ ಮತ್ತು ಸವಣೂರು ಮೂಲದ ಝಾಕೀರ್ ಎಂಬವರನ್ನು ದಸ್ತಗಿರಿ ಮಾಡಲಾಗಿದೆ ಎಂದು ಎಸ್ಪಿ ಅವರು ತಿಳಿಸಿದ್ದಾರೆ.
ಪ್ರಕರಣದ ಬಗ್ಗೆ ಇನ್ನಷ್ಟು ತನಿಖೆ ನಡೆಸಬೇಕಾಗಿದೆ, ಆರೋಪಿಗಳನ್ನು ನ್ಯಾಯಾಲಕ್ಕೆ ಹಾಜರು ಮಾಡುತ್ತೇವೆ. ಪ್ರಕರಣ ತನಿಖೆಯಲ್ಲಿರುವುದರಿಂದ ಇಷ್ಟು ಮಾತ್ರ ಹೇಳಬಲ್ಲೆ ಎಂದು ದ.ಕ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಮಾಹಿತಿ ನೀಡಿದರು.
Next Story