Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಬಂಟ ಸಮಾಜವನ್ನು ಪ್ರವರ್ಗ ‘2ಎ’ಯಲ್ಲಿ...

ಬಂಟ ಸಮಾಜವನ್ನು ಪ್ರವರ್ಗ ‘2ಎ’ಯಲ್ಲಿ ಸೇರಿಸಲು ಸರಕಾರದ ಮೇಲೆ ಒತ್ತಡ: ಅಜಿತ್ ಕುಮಾರ್ ರೈ

ವಿಶ್ವಬಂಟರ ಮಾಹಿತಿ ಕೋಶ ರಚಿಸಲು ಸಿದ್ಧತೆ

ವಾರ್ತಾಭಾರತಿವಾರ್ತಾಭಾರತಿ10 Aug 2022 10:13 PM IST
share
ಬಂಟ ಸಮಾಜವನ್ನು ಪ್ರವರ್ಗ ‘2ಎ’ಯಲ್ಲಿ ಸೇರಿಸಲು ಸರಕಾರದ ಮೇಲೆ ಒತ್ತಡ: ಅಜಿತ್ ಕುಮಾರ್ ರೈ

ಮಂಗಳೂರು, ಆ.10: ರಾಜ್ಯದ ಮೀಸಲಾತಿಯಲ್ಲಿ ಬಂಟ ಸಮಾಜವು ಪ್ರವರ್ಗ ‘2ಎ’ಯಲ್ಲಿ ಸೇರಿಸಲು ಅರ್ಹವಾಗಿದ್ದರೂ ಬಂಟ ಸಮಾಜವನ್ನು ‘3ಬಿ’ಯಲ್ಲಿ ಸೇರಿಸಿರುವ ಕಾರಣ ಬಂಟರು ಶಿಕ್ಷಣ, ಉದ್ಯೋಗ ಕ್ಷೇತ್ರಗಳಲ್ಲಿ ದೊರೆಯುವ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಈ ಬಗ್ಗೆ ಸೂಕ್ತ ಮಾಹಿತಿ ಸಂಗ್ರಹಿಸಲು ‘ಭಾಂದವ್ಯ’ ನಾಮಾಂಕಿತದೊಂದಿಗೆ ಜನಗಣತಿಯನ್ನು ಆರಂಭಿಸಲಾಗಿದೆ. ಅಲ್ಲದೆ ವಿಶ್ವವ್ಯಾಪಿಯಾಗಿ ನೆಲೆಸಿರುವ ಬಂಟ ಬಾಂಧವರ ಮಾಹಿತಿಯನ್ನು ಪಡೆದು ವಿಶ್ವಬಂಟರ ಮಾಹಿತಿ ಕೋಶವನ್ನು ರಚಿಸಲು ಸಿದ್ಧತೆ ಮಾಡಲಾಗುವುದು ಎಂದು ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಮಾಲಾಡಿ ಅಜಿತ್ ಕುಮಾರ್ ರೈ ತಿಳಿಸಿದರು.

ನಗರದ ಗೀತಾ ಎಸ್.ಎಂ. ಶೆಟ್ಟಿ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಸಂಘದ 101ನೆ ವಾರ್ಷಿಕ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬಂಟ ಸಮಾಜವನ್ನು ಹಿಂದುಳಿದ ವರ್ಗದಲ್ಲಿ ಸೇರಿಸಬೇಕೆಂದು ಸರಕಾರಕ್ಕೆ ಮನವರಿಕೆ ಮಾಡಿಕೊಡುವಂತೆ ೧೯೬೦ರಲ್ಲೇ ಸಂಘದ ಮಹಾಸಭೆಯಲ್ಲಿ ನಿರ್ಣಯಿಸಲಾಗಿತ್ತು. ೨೦೦೪ರಲ್ಲಿ ಮಂಗಳೂರಿನಲ್ಲಿ ನಡೆದ ಹಿಂದುಳಿದ ಆಯೋಗದ ಸಭೆಯಲ್ಲಿ ಅಧ್ಯಕ್ಷರು ಸ್ವತಃ ಮಂಡನೆ ಮಾಡಿ ಸಮಾಜವನ್ನು ಪ್ರವರ್ಗ ‘೨ಎ’ಯಲ್ಲಿ ಸೇರಿಸುವಂತೆ ಮನವಿ ಮಾಡಲಾಗಿತ್ತು. ೨೦೧೩,  ೨೦೧೫, ೨೦೨೨ರಲ್ಲೂ ಕೂಡಾ ಅಗತ್ಯ ಮಾಹಿತಿಗಳನ್ನು ಒದಗಿಸಲಾಗಿತ್ತು. ಇದೀಗ ರಾಜ್ಯದ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿ ಸಮಾಜವನ್ನು ಪ್ರವರ್ಗ ‘ಎ’ಯಲ್ಲಿ ಸೇರಿಸಲು ರಾಜ್ಯ ಸರಕಾರದ ಮೇಲೆ ಒತ್ತಡ ಹೇರಲಾಗುವುದು ಎಂದರು.

ನಗರದ ಬಂಟ್ಸ್ ಹಾಸ್ಟೆಲ್‌ನಲ್ಲಿ ಬಂಟರ ಮಾತೃ ಸಂಘದ ಶತಮಾನೋತ್ಸವ ಕಟ್ಟಡದ ನಿರ್ಮಾಣಕ್ಕಾಗಿ ಅಗತ್ಯ ಇರುವ ಎಲ್ಲಾ ಇಲಾಖೆಗಳಿಂದ ನಿರಾಪೇಕ್ಷಣಾ ಪತ್ರ ಪಡೆಯಲಾಗಿದೆ. ಇನ್ನು ಮಹಾನಗರ ಪಾಲಿಕೆಗೆ ನಿರ್ಮಾಣದ ಶುಲ್ಕವನ್ನು  ಪಾವತಿಸಿ ಶೀಘ್ರದಲ್ಲೇ  ನಿರ್ಮಾಣದ ಕೆಲಸ ಪ್ರಾರಂಭವಾಗಲಿದೆ. ಕಟ್ಟಡ ನಿರ್ಮಾಣದ ಬಳಿಕ ಬರುವ ಬಹುದೊಡ್ಡ ಮೊತ್ತದ ಆದಾಯವನ್ನು ಸಮಾಜದ ಶ್ರೇಯೋಭಿವೃದ್ದಿಗಾಗಿ ವಿನಿಯೋಗಿಸಲಾಗುವುದು ಎಂದರು.

ಈ ವರ್ಷ ಜರಗಲಿರುವ ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ಭವನದ ಅಮೃತ ಮಹೋತ್ಸವ ಸಂದರ್ಭ ಮಹಿಳೆಯರ ಸಶಕ್ತೀಕರಣಕ್ಕಾಗಿ ಮಹಿಳಾ ಸೌಹಾರ್ದ ಸಹಕಾರಿ ಸಂಘವನ್ನು ಆರಂಭಿಸುವ ಕಾರ್ಯವನ್ನು  ಕೈಗೆತ್ತಿಕೊಳ್ಳಲಾ ಗಿದೆ. ಮಹಿಳೆಯರ ಸಶಕ್ತೀಕರಣಕ್ಕಾಗಿ ಶಕ್ತಿನಗರದಲ್ಲಿರುವ ಬಂಟರ ಯಾನೆ ನಾಡವರ ಮಾತೃ ಸಂಘದ ಜಾಗದಲ್ಲಿ ಕೈಗಾರಿಕೋದ್ಯಮವನ್ನು ಸ್ಥಾಪಿಸಲಾಗುವುದು ಎಂದು ಅಜಿತ್ ಕುಮಾರ್ ರೈ ತಿಳಿಸಿದರು.

ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ ಶೆಟ್ಟಿ ವರದಿ ವಾಚಿಸಿದರು. ಕೋಶಾಧಿಕಾರಿ ಕೃಷ್ಣಪ್ರಸಾದ್ ರೈ ಲೆಕ್ಕಪತ್ರ ಮಂಡಿಸಿದರು. ಶ್ರೀ ರಾಮಕೃಷ್ಣ ವಿದ್ಯಾರ್ಥಿನಿ ಭವನದ ಸಂಚಾಲಕಿ ಶಾಲಿನಿ ಶೆಟ್ಟಿ, ಶ್ರೀ ರಾಮಕೃಷ್ಣ ವಿದ್ಯಾರ್ಥಿ ಭವನದ ಸಂಚಾಲಕ ಉಮೇಶ್ ರೈ ಪದವು ಮೇಗಿನಮನೆ, ಶ್ರೀ ರಾಮಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕ ಡಾ. ಸಂಜೀವ ರೈ, ಪುತ್ತೂರು ಶ್ರೀ ರಾಮಕೃಷ್ಣ   ಹೈಸ್ಕೂಲ್‌ನ ಸಂಚಾಲಕ  ಎ. ಹೇಮನಾಥ ಶೆಟ್ಟಿ ಕಾವು, ಕಾರ್ಕಳ ವಿದ್ಯಾರ್ಥಿ ಭವನದ ಸಂಚಾಲಕ ಚೇತನ್ ಶೆಟ್ಟಿ, ಕಾರ್ಕಳ ತಾಲೂಕು ಸಮಿತಿಯ ಸಂಚಾಲಕ ಮಣಿರಾಜ್ ಶೆಟ್ಟಿ, ಮಂಗಳೂರು ತಾಲೂಕು ಸಮಿತಿಯ ಸಂಚಾಲಕ ಉಲ್ಲಾಸ್ ಆರ್. ಶೆಟ್ಟಿ ಪೆರ್ಮುದೆ, ಕುಂದಾಪುರ ತಾಲೂಕು ಸಮಿತಿಯ ಸುಧಾಕರ ಶೆಟ್ಟಿ ಆವರ್ಸೆ, ಉಡುಪಿ ತಾಲೂಕು ಸಮಿತಿಯ ಜಯರಾಜ ಹೆಗ್ಡೆ, ಬಂಟ್ವಾಳ ತಾಲೂಕು ಸಮಿತಿಯ ರಾಮಣ್ಣ ರೈ, ಪುತ್ತೂರು ತಾಲೂಕು ಸಮಿತಿಯ ದಯಾನಂದ ರೈ ಮನವಳಿಕೆಗುತ್ತು, ಬೆಳ್ತಂಗಡಿ ತಾಲೂಕು ಸಮಿತಿಯ ರಘುರಾಮ ಶೆಟ್ಟಿ ವರದಿ ಮಂಡಿಸಿದರು.

ಜೊತೆ ಕಾರ್ಯದರ್ಶಿ ಸಂಜೀವ ಶೆಟ್ಟಿ ಸಂಪಿಗೇಡಿ ವಂದಿಸಿದರು. ಸುಖೇಶ್ ಚೌಟ ಉಳ್ಳಾಲ ಗುತ್ತು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X