ಮಂಗಳೂರು: ಅಮರ ಕ್ರಾಂತಿ ನಾಟಕ ಪ್ರದರ್ಶನ
ಮಂಗಳೂರು: ದ.ಕ. ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರು ಮಹಾನಗರಪಾಲಿಕೆಯ ಸಂಯುಕ್ತಾಶ್ರಯದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ನಗರ ಕುದ್ಮುಲ್ ರಂಗರಾವ್ ಪುರಭವನದಲ್ಲಿ ರವಿವಾರ ‘ಅಮರ ಕ್ರಾಂತಿ-೧೮೩೭ ಸ್ವಾತಂತ್ರ್ಯ ಹೋರಾಟ’ ನಾಟಕ ಹಾಗೂ ಕುದ್ರೋಳಿ ಗಣೇಶ್ ಅವರ ರಾಷ್ಟ್ರಭಕ್ತಿ ಸಾರುವ ಜಾದೂ ಪ್ರದರ್ಶನ ನಡೆಯಿತು.
ಶಾಸಕ ಡಿ.ವೇದವ್ಯಾಸ್ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್, ನಗರದ ಕಲಾವಿದರು, ಸಾರ್ವಜನಿಕರು ಉಪಸ್ಥಿತರಿದ್ದರು.
Next Story