ಕಲ್ಲಡ್ಕ: ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆ
ಕಲ್ಲಡ್ಕ: ಅನುಗ್ರಹ ಮಹಿಳಾ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.
ಹಮೀದಾ ವಫಾ ಅವರು ಕಿರಾಅತ್ ನೊಂದಿಗೆ ಕಾರ್ಯಕ್ರಮವನ್ನು ಆರಂಭಿಸಿದರು. ಮುಖ್ಯ ಅತಿಥಿಯಾಗಿ ಆಗಮಿಸಿದ ಅಬ್ದುಲ್ ಸಲಾಂ ಮಾಸ್ಟರ್ ಬಂಟ್ವಾಳ (ನಿವೃತ್ತ ಅಧ್ಯಾಪಕರು) ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದರು.
ರಾಷ್ಟ್ರೀಯ ಸೇವಾದಳ ಹಾಗೂ ರೆಡ್ ಕ್ರಾಸ್ ಘಟಕದಿಂದ ರಾಷ್ಟ್ರಗೀತೆ ಹಾಡಲಾಯಿತು. ಸಭಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಭಿಕರನ್ನು ಮತ್ತು ಎಲ್ಲಾ ಗಣ್ಯ ಅತಿಥಿಗಳನ್ನು ಕಾಲೇಜಿನ ಪ್ರಾಂಶುಪಾಲರಾದ ಹೇಮಲತಾ ಬಿ.ಡಿ ಸ್ವಾಗತಿಸಿದರು. ವಿದ್ಯಾರ್ಥಿನಿಯರು ದೇಶಭಕ್ತಿ ಗೀತೆಯನ್ನು ಹಾಡಿದರು. ವಿದ್ಯಾರ್ಥಿನಿಯರಾದ ಫಾತಿಮತುಲ್ ಶೈಮಾ ಹಾಗೂ ಆಯಿಷತ್ ಶಬೀಬಾ ಸ್ವಾತಂತ್ರ್ಯ ದಿನಾಚರಣೆಯ ಕುರಿತು ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದರು.
ಅಮೃತ ಮಹೋತ್ಸವದ ಪ್ರಯುಕ್ತ ನಡೆಸಲಾದ ಚಟುವಟಿಕೆಗಳಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನವನ್ನು ವಿತರಿಸಲಾಯಿತು, ಆಂಗ್ಲ ವಿಭಾಗದ ಉಪನ್ಯಾಸಕಿರಾದ ಶ್ವೇತಾ ಹಾಗೂ ವಾಣಿಜ್ಯ ವಿಭಾಗದ ಉಪನ್ಯಾಸಕಿ ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು.
ಕಾಲೇಜಿನ ಆಡಳಿತ ಮಂಡಳಿಯ ಸಂಚಾಲಕರಾದ ಅಮಾನುಲ್ಲಾ ಖಾನ್ ರವರು ನಮ್ಮ ದೇಶವು ಸಾಂಸ್ಕೃತಿಕ ಮತ್ತು ವೈವಿಧ್ಯತೆಯಿಂದ ಸಂಪನ್ಮೂಲಭರಿತವಾಗಿದ್ದು ಅದರ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಹಾಗೆಯೇ ನಮ್ಮ ದೇಶದ ಆಸ್ತಿಯನ್ನು ಮತ್ತು ದೇಶದ ಒಗ್ಗಟ್ಟನ್ನು ನಾವೆಲ್ಲರೂ ಕಾಪಾಡಿಕೊಳ್ಳಬೇಕು ಎಂದು ಹೇಳಿದರು.
ಮುಖ್ಯ ಅತಿಥಿಯಾಗಿ ಅಬ್ದುಲ್ ಸಲಾಂ ಮಾಸ್ಟರ್ ಬಂಟ್ವಾಳ ಇವರನ್ನು ಬಬಿತಾ ಲಸ್ರಾದೋರವರು ಪರಿಚಯಿಸಿದರು. ಇವರು “ನಮ್ಮ ದೇಶವು ಆರ್ಥಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಅಭಿವೃದ್ಧಿಯತ್ತ ಸಾಗಬೇಕು ಇದಕ್ಕಾಗಿ ಎಲ್ಲರೂ ಪ್ರಯತ್ನಿಸಬೇಕು” ಎಂದು ಹೇಳಿದರು. ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಯಾಸೀನ್ ಬೇಗ್ ಅಧ್ಯಕ್ಷೀಯ ಭಾಷಣವನ್ನು ಮಾಡಿ ಶುಭ ಹಾರೈಸಿದರು.
ವೇದಿಕೆಯಲ್ಲಿ ಆಡಳಿತ ಮಂಡಳಿಯ ಪ್ರಧಾನ ಕಾರ್ಯದರ್ಶಿಯಾದ ಶಾಹುಲ್ ಹಮೀದ್ ,ಸದಸ್ಯರುಗಳಾದ ಹಮೀದ್ ಬಂಟ್ವಾಳ, ಅಬ್ದುಲ್ಲ ಚೆಂಡಾಡಿ, ಆದಮ್ ಇಸ್ಮಾಯಿಲ್, ಮುಖ್ತಾರ್ ಅಹಮದ್, ಅಬ್ದುಲ್ಲ ಕುಂಞಿ ಹಾಗೂ ಉಪ ಪ್ರಾಂಶುಪಾಲರಾದ ಮಮಿತಾ ಎಸ್ ರೈ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಬೋಧಕ, ಬೋಧಕೇತರ ವೃಂದದವರು ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ವಿದ್ಯಾರ್ಥಿನಿ ನಸೀಫ ವಂದಿಸಿದರು.