ಡಾ. ವೈ.ಅಬ್ದುಲ್ಲಾ ಕುಂಞಿ ಗೆ ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ವತಿಯಿಂದ ಸನ್ಮಾನ
ಮಂಗಳೂರು, ಆ.18: ಶಿಕ್ಷಣ, ಆರೋಗ್ಯ ಹಾಗೂ ವಾಣಿಜ್ಯ ಕ್ಷೇತ್ರದಲ್ಲಿ ಕೈಗೊಂಡ ಅಮೋಘ ಸಾಧನೆಯನ್ನು ಗುರುತಿಸಿ ಇತ್ತೀಚಿಗೆ ಗುಲ್ಬರ್ಗಾ ವಿಶ್ವವಿದ್ಯಾನಿಲಯದಿಂದ ಗೌರವ ಡಾಕ್ಟರೇಟ್ ಪಡೆದ ಡಾ.ಯೆನೆಪೊಯ ಅಬ್ದುಲ್ಲಾ ಕುಂಞಿಯವರನ್ನು ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿ ವತಿಯಿಂದ ಅವರ ನಿವಾಸದಲ್ಲಿ ಇತ್ತೀಚೆಗೆ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಬಂಟ್ವಾಳ ತಾಲೂಕು ಸಂಯುಕ್ತ ಜಮಾಅತ್ ಕಮಿಟಿಯ ಅಧ್ಯಕ್ಷ ಹಾಜಿ ಮುಹಮ್ಮದ್ ಹನೀಫ್ ಗೋಳ್ತಮಜಲು, ಉಪಾಧ್ಯಕ್ಷ ಎಂ.ಎಸ್.ಮುಹಮ್ಮದ್, ಪ್ರಧಾನ ಕಾರ್ಯದರ್ಶಿ ನೋಟರಿ ಕೆ.ಅಬೂಬಕರ್ ವಿಟ್ಲ, ಕೋಶಾಧಿಕಾರಿ ಹಾಜಿ ಪಿ.ಎಸ್. ಅಬ್ದುಲ್ ಹಮೀದ್ ನೆಹರು ನಗರ ಉಪಸ್ಥಿತರಿದ್ದರು.
Next Story