ಮಂಗಳಪೇಟೆಯ ಫಾಝಿಲ್ ಹತ್ಯೆ ಪ್ರಕರಣ: ಆರೋಪಿ ಹರ್ಷಿತ್ಗೆ ಜಾಮೀನು
ಮಂಗಳೂರು, ಸೆ.15: ದ.ಕ.ಜಿಲ್ಲೆಯನ್ನೇ ಬೆಚ್ಚಿಬೀಳಿಸಿದ ಮಂಗಳಪೇಟೆಯ ಫಾಝಿಲ್ ಹತ್ಯೆ ಪ್ರಕರಣದ ಆರೋಪಿ ಬಂಟ್ವಾಳದ ಹರ್ಷಿತ್ಗೆ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ನೀಡಿದೆ.
ಜು.28ರಂದು ರಾತ್ರಿ ಸುರತ್ಕಲ್ ಜಂಕ್ಷನ್ನಲ್ಲಿದ್ದ ಫಾಝಿಲ್ನನ್ನು ತಂಡವೊಂದು ಕೊಲೆಗೈದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಆರೋಪಿಗಳನ್ನು ಬಂಧಿಸಿದ್ದರು. ಆ ಪೈಕಿ ಹರ್ಷಿತ್ಗೆ ನ್ಯಾಯಾಲಯವು ಸೆ.7ರಂದು ಜಾಮೀನು ಮಂಜೂರು ಮಾಡಿದ್ದು, ಸೆ.13ರಂದು ಜೈಲಿನಿಂದ ಬಿಡುಗಡೆಗೊಂಡಿದ್ದಾನೆ ಎಂದು ತಿಳಿದು ಬಂದಿದೆ.
ಜುಲೈ 28ರಂದು ರಾತ್ರಿ ಮುಹಮ್ಮದ್ ಫಾಝಿಲ್ ಅವರು ಸುರತ್ಕಲ್ ನ ಮೂಡ ಮಾರುಕಟ್ಟೆಯಲ್ಲಿರುವ ಬಟ್ಟೆ ಮಳಿಗೆಯಲ್ಲಿ ಕೆಲಸ ಮಾಡುತ್ತಿದ್ದ ಸ್ನೇಹಿತನನ್ನು ಭೇಟಿ ಮಾಡಿ ಅಂಗಡಿಯಿಂದ ಹೊರಬರುತ್ತಿದ್ದಂತೆ ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೈಗೈದಿತ್ತು.
ಇದನ್ನೂ ಓದಿ: ಕುರ್ಆನ್ನಲ್ಲಿರುವ ವಾಕ್ಯಗಳು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿಲ್ಲ: ಸಚಿವೆ ಶಶಿಕಲಾ ಜೊಲ್ಲೆ ಲಿಖಿತ ಉತ್ತರ
Next Story