Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕ್ರಿಮಿನಲ್ ಯಾವತ್ತಾದರೂ ಕ್ರಿಮಿನಲ್‌ಗಳೇ,...

ಕ್ರಿಮಿನಲ್ ಯಾವತ್ತಾದರೂ ಕ್ರಿಮಿನಲ್‌ಗಳೇ, ಅವರಿಗೆ ಜಾತಿ, ಧರ್ಮವಿಲ್ಲ: ಪೊಲೀಸ್ ಆಯುಕ್ತ ಶಶಿಕುಮಾರ್

ವಾರ್ತಾಭಾರತಿವಾರ್ತಾಭಾರತಿ19 Sept 2022 3:28 PM IST
share
ಕ್ರಿಮಿನಲ್ ಯಾವತ್ತಾದರೂ ಕ್ರಿಮಿನಲ್‌ಗಳೇ, ಅವರಿಗೆ ಜಾತಿ, ಧರ್ಮವಿಲ್ಲ: ಪೊಲೀಸ್ ಆಯುಕ್ತ ಶಶಿಕುಮಾರ್

ಮಂಗಳೂರು, 19: ಕ್ರಿಮಿನಲ್‌ಗಳಿಗೆ ಯಾವುದೇ ಜಾತಿ, ಧರ್ಮ ಇರುವುದಿಲ್ಲ ಎನ್ನುವುದನ್ನು ಎಲ್ಲ ಜಾತಿ, ಧರ್ಮದವರು ಅರ್ಥ ಮಾಡಿಕೊಳ್ಳಬೇಕು. ಕ್ರಿಮಿನಲ್ ಯಾವತ್ತಾದರೂ ಕ್ರಿಮಿನಲ್‌ಗಳೇ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್ ಹೇಳಿದ್ದಾರೆ.

ಉಳ್ಳಾಲ ವ್ಯಾಪ್ತಿಯಲ್ಲಿ ಮೀನು ವ್ಯಾಪಾರದ ಹಣದ ವಿಚಾರದಲ್ಲಿ ನಡೆದ ಹಲ್ಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಬಜಾಲ್ ನಿವಾಸಿ ತಲ್ಲತ್ ಯಾನೆ ತಲ್ಹತ್ (35) ಬಗ್ಗೆ ಸುದ್ದಿಗಾರ ಜೊತೆ ಪ್ರತಿಕ್ರಿಯಿಸಿದ ಕಮಿಷನರ್, ಅಪರಾಧ ಕೃತ್ಯದಲ್ಲಿ ಭಾಗಿಯಾಗಿ ದಾನ, ಧರ್ಮ, ರಕ್ತದಾನ ಮೂಲಕ ಸಮಾಜ ಸೇವೆ ಸಭ್ಯತೆರಂತೆ ವರ್ತಿಸಿದರೆ ಪ್ರಯೋಜನವಿಲ್ಲ ಎಂದರು.

ಬಜಾಲ್ ನಿವಾಸಿ ತಲ್ಹತ್ ವಿರುದ್ಧ ಕೊಲೆ, ಕೊಲೆ ಯತ್ನ ಸೇರಿದಂತೆ ನಗರ ಪೊಲೀಸ್ ಕಮಿನಷರೇಟ್ ವ್ಯಾಪ್ತಿಯಲ್ಲಿ 30ಕ್ಕೂ ಅಧಿಕ ಪ್ರಕರಣಗಳಿವೆ. ಆರೋಪಿ ವಿರುದ್ಧ ಕಂಕನಾಡಿ, ಉಳ್ಳಾಲ, ಕೋಣಾಜೆ, ಬರ್ಕೆ ಠಾಣಾ ವ್ಯಾಪ್ತಿಯಲ್ಲಿ  ಕೇಸು ದಾಖಲಾಗಿದೆ. ಈತನ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲೂ ಕೊಲೆ ಪ್ರಕರಣ ದಾಖಲಾಗಿದೆ ಎಂದರು.

ಆರೋಪಿ ತಲ್ಹತ್ ನಗರದ ಅಡ್ಯಾರ್, ಕಣ್ಣೂರು, ಬಜಾಲ್, ಬಂದರ್, ಉಳ್ಳಾಲ, ದೇರಳಕಟ್ಟೆ, ಫರಂಗಿಪೇಟೆ ವ್ಯಾಪ್ತಿಯಲ್ಲಿ 60ಕ್ಕೂ ಅಧಿಕ ಮಂದಿಯ ಯುವಕರ ಗ್ಯಾಂಗ್ ಕಟ್ಟಿಕೊಂಡು ಕ್ರಿಮಿನಲ್ ಕೃತ್ಯದಲ್ಲಿ ತೊಡಗಿಸಿಕೊಂಡಿರುವುದು ಬೆಳಕಿಗೆ ಬಂದಿದೆ. ಈತನ ಸಹಚರರ ಮೇಲೂ ನಿಗಾ ಇರಿಸಲಾಗಿದ್ದು, ಅವರ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದರು.

ಉಳ್ಳಾಲ ಹಲ್ಲೆ ಪ್ರಕರಣದಲ್ಲಿ ಒಟ್ಟು 8 ಮಂದಿಯನ್ನು ಬಂಧಿಸಲಾಗಿದ್ದು, ಇದರಲ್ಲಿ ನೌಫಲ್ ವಿರುದ್ಧ 15, ಸಿದ್ದೀಕ್ ವಿರುದ್ಧ ಏಳು ಪ್ರಕರಣ ದಾಖಲಾಗಿದೆ. ತಲ್ಹತ್ ಗೆ ಮುಂಬೈ, ಕೇರಳದ ಮಂಜೇಶ್ವರದ ಕ್ರಿಮಿನಲ್‌ಗಳ ಜತೆಯೂ ಸಂಪರ್ಕವಿರುವ ಮಾಹಿತಿ ಲಭಿಸಿದ್ದು, ಆ ನಿಟ್ಟಿನಲ್ಲೂ ತನಿಖೆ ಮುಂದುವರಿದಿದೆ.

 ರಾಬಿನ್‌ಹುಡ್ ಕಲ್ಚರ್ ನಮ್ಮಲ್ಲಿಲ್ಲ:

ಕ್ರಿಮಿನಲ್ ಕೃತ್ಯದಲ್ಲಿ ಭಾಗಿಯಾಗಿ ಶೋಕಿಗಾಗಿ ಸಮಾಜ ಸೇವೆ ಮಾಡುವ ರಾಬಿನ್ ಹುಡ್ ಕಲ್ಚರ್ ನಮ್ಮಲ್ಲಿ ನಡೆಯಲ್ಲ.

ಕ್ರಿಮಿನಲ್ ಕೃತ್ಯದಲ್ಲಿ ಭಾಗಿಯಾದ ಕೆಲವರು ಅಪರಾಧ ಮಾಡಿದ್ದಂತಹ ಸಂದರ್ಭದಲ್ಲಿ ಜಾತಿ, ಧರ್ಮದ ಸಹಾಯ ಪಡೆದು ರಕ್ಷಣೆ ಪಡೆದುಕೊಳ್ಳುತ್ತಾರೆ. ಆರೋಪಿ ತಲ್ಹತ್  ಅಲ್ ಅಮೀನ್ ಚಾರಿಟೇಬಲ್ ಟ್ರಸ್ಟ್ ಆರಂಭಿಸಿ ಕೋವಿಡ್ ಅವಧಿಯಲ್ಲಿ ಕಿಟ್ ವಿತರಣೆ, ರಕ್ತದಾನ ಮೂಲಕ ಸಮಾಜ ಸೇವೆಯ ಫೋಸು ನೀಡಿದ್ದಾನೆ. ಆದರೆ ಯಾವ ಸೇವೆ ಮಾಡಿದರೂ ಆತನ ಕ್ರಿಮಿನಲ್ ಮನಸ್ಥಿತಿ ಮಾತ್ರ ಬದಲಾಗಿಲ್ಲ ಎಂದು ಕಮಿಷನರ್  ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X