ಕಾಪು ಕೈಪುಂಜಾಲ್: ಸಫರ್ ಝಿಯಾರತ್
ಕಾಪು : ಕೈಪುಂಜಾಲು ಸಯ್ಯದ್ ಅರಭಿ ವಲಿಯುಲ್ಲಾ ದರ್ಗಾದಲ್ಲಿ ಸಫರ್ ಝಿಯಾರತ್ ಬುಧವಾರ ನಡೆಯಿತು.
ಪೊಲಿಪು ಜಾಮಿಯಾ ಮಸೀದಿಯ ಆಡಳಿತ ಸಮಿತಿಯ ಅಧೀನಕ್ಕೊಳಪಟ್ಟ ಈ ದರ್ಗಾದಲ್ಲಿ ಹಿಜರಿ ಕ್ಯಾಲೆಂಡರ್ ಪ್ರಕಾರ ಸಫರ್ ತಿಂಗಳ ಕೊನೆಯ ಬುಧವಾರ ಝಿಯಾರತ್ ನಡೆಯುತ್ತದೆ. ದಕ್ಷಿಣ ಕನ್ನಡ, ಉಡುಪಿ ಸಹಿತ ವಿವಿಧ ಜಿಲ್ಲೆಗಳಿಂದ ಸುಮಾರು 15 ಸಾವಿರದಿಂದ 20 ಸಾವಿರಕ್ಕೂ ಅಧಿಕ ಮಂದಿ ಭಾಗವಹಿಸಿದರು.
ಕಾಪು ಖಾಝಿ ಅಲ್ ಹಾಜ್ ಪಿ.ಬಿ.ಅಹ್ಮದ್ ಮುಸ್ಲಿಯಾರ್ ರವರು ದುಆ ನೆರವೇರಿಸಿದರು. ಪೊಲಿಪು ಜಾಮಿಯಾ ಮಸೀದಿಯ ಖತೀಬ್ ಮುಹಮ್ಮದ್ ಇರ್ಷಾದ್ ಸಅದಿ ಉದ್ಘಾಟಿಸಿದರು. ಪೊಲಿಪು ಜಾಮಿಯಾ ಮಸೀದಿ ಆಡಳಿತ ಸಮಿತಿಯ ಅಧ್ಯಕ್ಷ ಎಚ್.ಅಬ್ದುಲ್ಲ ಸೂಪರ್ ಸ್ಟಾರ್ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ರಜಬ್ ಹಾಜಿ ಮೈದಿನ್, ಇಮ್ತಿಯಾಝ್ ಅಹ್ಮದ್, ಕಾರ್ಯಕ್ರಮದ ಉಸ್ತುವಾರಿ ಸರ್ಫರಾಝ್, ಇಲ್ಯಾಸ್, ಉಪಸ್ಥಿತರಿದ್ದರು.
Next Story