ಸುಳ್ಯ: ರಸ್ತೆ ಅಪಘಾತದಲ್ಲಿ ಐಟಿಐ ವಿದ್ಯಾರ್ಥಿ ಮೃತ್ಯು, ಮತ್ತೋರ್ವ ಗಂಭೀರ
ಪ್ರತೀಕ್ - ಮೃತ ವಿದ್ಯಾರ್ಥಿ
ಸುಳ್ಯ: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಅರಂಬೂರು ಬಳಿ ಉಂಟಾದ ವಾಹನ ಅಪಘಾತದಲ್ಲಿ ಓರ್ವ ಮೃತಪಟ್ಟು ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಇಂದು (ಸೋಮವಾರ) ಬೆಳಿಗ್ಗೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಚೆಂಬು ಗ್ರಾಮದ ಪ್ರತೀಕ್ (19)ಎಂಬ ಐಟಿಐ ವಿದ್ಯಾರ್ಥಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಅರಂಬೂರು ಬಳಿ ಬೈಕ್ ಮತ್ತು ರಿಕ್ಷಾ ಮಧ್ಯೆ ಅಪಘಾತ ಸಂಭವಿಸಿದ್ದು, ತೇಜಸ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಮಾಹಿತಿ ತಿಳಿದು ಸುಳ್ಯ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
Next Story