ಬೆಳ್ತಂಗಡಿ: ವೀಡಿಯೊ ಮಾಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ
ಬೆಳ್ತಂಗಡಿ; ಯುವಕನೊಬ್ಬ ಧರ್ಮಸ್ಥಳದ ಕಾಡಿನಲ್ಲಿ ವೀಡಿಯೊ ಮಾಡುತ್ತಾ ವಿಷ ಸೇವಿಸಿ ಅದನ್ನು ಕುಟುಂಬದವರಿಗೆ ಕಳುಹಿಸಿದ್ದು, ಮಾಹಿತಿ ಮೇರೆಗೆ ಧರ್ಮಸ್ಥಳ ಪೊಲೀಸರ ಸಮಯ ಪ್ರಜ್ಞೆಯಿಂದ ಯುವಕನನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ರಾಮನಾಥ್ ಪುರದ ನಿವಾಸಿ ಸುನಿಲ್ (28) ಎಂಬಾತ ತನ್ನ ಬುಧವಾರ ಬೆಳಗ್ಗೆ ಧರ್ಮಸ್ಥಳಕ್ಕೆ ಬಂದಿದ್ದು, ದರ್ಶನ ಮುಗಿಸಿ ಮಧ್ಯಾಹ್ನದ ನಂತರ ಮಹಾತ್ಮ ಗಾಂಧಿ ವೃತ್ತದ ಪಕ್ಕದ ಗುಡ್ಡಕ್ಕೆ ಹೋಗಿ ಕುಳಿತು ತನ್ನ ಮೊಬೈಲ್ ನಲ್ಲಿ ವೀಡಿಯೊ ಮಾಡಿ ಕೃಷಿ ಜಾಮೀನಿಗೆ ಉಪಯೋಗಿಸುವ ವಿಷ ಸೇವಿಸಿದ್ದು, ನಂತರ ಅದರ ವೀಡಿಯೊ ಕುಟುಂಬದವರಿಗೆ ಮತ್ತು ಸ್ನೇಹಿತರಿಗೆ ಕಳುಹಿಸಿದ್ದಾನೆ.
ಇದನ್ನು ನೋಡಿದ ಕುಟುಂಬದವರು ಮತ್ತು ಸ್ನೇಹಿತರು ಧರ್ಮಸ್ಥಳ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್ ಕುಮಾರ್ ಮತ್ತು ಸಿಬ್ಬಂದಿ ಕಾಡಿನ ಸುತ್ತಮುತ್ತ ಹುಡುಕಾಟ ನಡೆಸಿದಾಗ ಅರೆಪ್ರಜ್ಞಾ ಸ್ಥಿತಿಯಲ್ಲಿದ್ದ ಸುನಿಲ್ ನನ್ನು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿದ್ದಾರೆ.
ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.