ಅ.2ರಂದು ಎಸ್ಕೆಎಸ್ಸೆಸ್ಸೆಫ್ ವಿಖಾಯ ಡೇ: ಜ್ಯೋತಿ ವೃತ ದಿಂದ ಕಾಲ್ನಡಿಗೆ ಜಾಥಾ
ಮಂಗಳೂರು: "ಸನ್ನದ್ಧ ಸೇವೆಗೆ ಯುವ ಜಾಗೃತಿ" ಎಂಬ ಘೋಷ ವಾಕ್ಯದೊಂದಿಗೆ ಸನ್ನದ್ಧ ಸೇವೆ ನೀಡುತ್ತಿರುವ ಎಸ್ಕೆಎಸ್ಸೆಸ್ಸೆಫ್ ನ ವಿಖಾಯ ವಿಭಾಗದ "ವಿಖಾಯ ಡೇ" ಪ್ರಯುಕ್ತ ದ.ಕ ಜಿಲ್ಲಾ ವೆಸ್ಟ್ ಸಮಿತಿ ವತಿಯಿಂದ ಮಾದಕ ವ್ಯಸನದ ವಿರುದ್ಧ ಜನಜಾಗೃತಿ ಅಭಿಯಾನದ ಅಂಗವಾಗಿ ರವಿವಾರ ಮಧ್ಯಾಹ್ನ 2:30 ಗಂಟೆಗೆ ಜ್ಯೋತಿ ವೃತದಿಂದ ಕ್ಲಾಕ್ ಟವರ್ ವರೆಗೆ ಕಾಲ್ನಡಿಗೆ ಜಾಥಾ ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಎಸ್ಕೆಎಸ್ಸೆಸ್ಸೆಫ್ ದ.ಕ ಜಿಲ್ಲಾ ವೆಸ್ಟ್ ಅಧ್ಯಕ್ಷ ಸೈಯ್ಯದ್ ಅಮೀರ್ ತಂಙಳ್ ಉದ್ಘಾಟಿಸಲಿದ್ದಾರೆ. ನಹಿಂ ಫೈಝಿ ಸಂದೇಶ ಭಾಷಣ ನಡೆಸಲಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್, ಜಿಲ್ಲಾ ಕಾರ್ಯದರ್ಶಿ ಸಿದ್ದೀಕ್ ಅಬ್ದುಲ್ ಖಾದರ್, ಎಸ್ಕೆಎಸ್ಸೆಸ್ಸೆಫ್ ಕರ್ನಾಟಕ ರಾಜ್ಯ ಕಾರ್ಯಾಧ್ಯಕ್ಷ ಖಾಸಿಂ ದಾರಿಮಿ, ಇರ್ಷಾದ್ ದಾರಿಮಿ ಮಿತ್ತಬೈಲ್ , ಕರ್ನಾಟಕ ರಾಜ್ಯ ಎಸ್ಕೆಸ್ಸೆಸ್ಸೆಫ್ ವಿಖಾಯ ಜನರಲ್ ಕನ್ವೀನರ್ ಮುಸ್ತಾಫ ಕಟ್ಟದಪಡ್ಪು, ಎಸ್ಕೆಸ್ಸೆಸ್ಸೆಫ್ ದ.ಕ. ಜಿಲ್ಲಾ ನೇತಾರರು ಸೇರಿದಂತೆ ಸಾಮಾಜಿಕ ಧಾರ್ಮಿಕ ಮುಖಂಡರು ಭಾಗವಹಿಸಲಿದ್ದಾರೆ ಎಂದು ಎಸ್ಕೆಸ್ಸೆಸ್ಸೆಫ್ ವೆಸ್ಟ್ ಜಿಲ್ಲಾ ವಿಖಾಯ ಚೈರ್ಮೆನ್ ಸಮೀರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.