ಸುರತ್ಕಲ್ ವೃತ್ತಕ್ಕೆ ವಿವಾದಿತ ವ್ಯಕ್ತಿಗಳ ಹೆಸರು ನಾಮಕರಣ ಮಾಡದಂತೆ ದ.ಕ. ಜಿಲ್ಲಾಧಿಕಾರಿಗೆ ಮನವಿ
ಮಂಗಳೂರು, ಅ. 3: ಸುರತ್ಕಲ್ ವೃತ್ತಕ್ಕೆ ವಿವಾದಿತ ಯಾವುದೇ ವ್ಯಕ್ತಿಯ ಹೆಸರನ್ನು ನಾಮಕರಣ ಮಾಡದೇ, ಕೋಟಿ ಚೆನ್ನಯ, ಯು. ಶ್ರೀನಿವಾಸ ಮಲ್ಯ ಅಥವಾ ಎಂ.ಲೋಕಯ್ಯ ಶೆಟ್ಟಿಯವರ ಪೈಕಿ ಒಬ್ಬರ ಹೆಸರನ್ನು ಆಯ್ಕೆ ಮಾಡಿ ನಾಮಕರಣ ಮಾಡಬೇಕೆಂದು ಒತ್ತಾಯಿಸಿ ಮುಸ್ಲಿಮ್ ಐಕ್ಯತಾ ವೇದಿಕೆ ಸುರತ್ಕಲ್ ವಲಯದ ನಿಯೋಗ ದ.ಕ. ಜಿಲ್ಲಾಧಿಕಾರಿಯನ್ನು ಸೋಮವಾರ ಭೇಟಿ ಮಾಡಿ ಮನವಿ ಸಲ್ಲಿಸಿತು.
ವೇದಿಕೆ ಅಧ್ಯಕ್ಷ ಅಶ್ರಫ್ ಬದ್ರಿಯಾ, ಉಪಾಧ್ಯಕ್ಷ ಅಬ್ದುಲ್ ಜಲೀಲ್ ಅದ್ದು, ಕಾರ್ಯದರ್ಶಿ ಕೆ.ಶರೀಫ್, ಸದಸ್ಯರಾದ ಅಝೀಝ್ ಈ ಸಂದರ್ಭ ಉಪಸ್ಥಿತರಿದ್ದರು.
Next Story