ಲಾರಿ ಢಿಕ್ಕಿ: ಸ್ಕೂಟರ್ ಸವಾರ ಮೃತ್ಯು
ಮಂಗಳೂರು, ಅ.7: ಲಾರಿ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ ಅಡ್ಯಾರ್ನಲ್ಲಿ ಗುರುವಾರ ಸಂಭವಿಸಿದೆ.
ಬಜ್ಪೆಯ ಸ್ಟ್ಯಾನಿ ಮಸ್ಕರೇನಸ್ (೫೦) ಮೃತಪಟ್ಟ ಸ್ಕೂಟರ್ ಸವಾರ. ಗುರುವಾರ ಸಂಜೆ ವೇಳೆಗೆ ಅಡ್ಯಾರ್ನಲ್ಲಿ ಪೆಟ್ರೋಲ್ ತುಂಬಿಸಿಕೊಂಡು ಮಂಗಳೂರು ಕಡೆಗೆ ಬರಲು ಸಹ್ಯಾದ್ರಿ ಕಾಲೇಜ್ನ ಮುಂದೆ ರಸ್ತೆ ವಿಭಾಜಕದ ಕಡೆಗೆ ಹೋಗುತ್ತಿದ್ದಾಗ ಪಡೀಲ್ನಿಂದ ಬಿ.ಸಿರೋಡ್ ಕಡೆಗೆ ಬರುತ್ತಿದ್ದ ಲಾರಿ ಢಿಕ್ಕಿ ಹೊಡೆಯಿತು ಎನ್ನಲಾಗಿದೆ.
ಲಾರಿಯ ಎಡಬದಿಯ ಚಕ್ರವು ಸ್ಟ್ಯಾನಿ ಅವರ ತಲೆ ಮೇಲೆ ಹರಿದ ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ ಮೃತಪಟ್ಟಿರುವ ಬಗ್ಗೆ ವೈದ್ಯರು ಘೋಷಿಸಿದ್ದಾರೆ. ಅಲ್ಲದೆ ಆರೋಪಿ ಚಾಲಕ ಲಾರಿ ನಿಲ್ಲಿಸದೆ ಪರಾರಿಯಾಗಿದ್ದಾನೆ ಎಂದು ಪ್ರಕರಣ ದಾಖಲಿಸಿರುವ ಮಂಗಳೂರು ಸಂಚಾರ ದಕ್ಷಿಣ ಠಾಣೆಯ ಪೊಲೀಸರು ತಿಳಿಸಿದ್ದಾರೆ.
Next Story