ಶ್ರೀ ಕ್ಷೇತ್ರ ಕುದ್ರೊಳಿಯಲ್ಲಿ ನಮ್ಮ ಕುಡ್ಲ ಗೂಡುದೀಪ ಪಂಥ- 2022ಕ್ಕೆ ಚಾಲನೆ
ಮಂಗಳೂರು : ನಮ್ಮ ಕುಡ್ಲ ಗೂಡುದೀಪ ಪಂಥ- 2022 ರ ಉದ್ಘಾಟನಾ ಕಾರ್ಯಕ್ರಮ ನಗರದ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ರವಿವಾರ ನಡೆಯಿತು.
ಸಮಾರಂಭದಲ್ಲಿ ಪಾಲ್ಗೊಂಡ ಅತಿಥಿ ಗಣ್ಯರಿಂದ ದೀಪ ಪ್ರಜ್ವಲನೆ ಮಾಡುವ ಮೂಲಕ ಗೂಡು ದೀಪ ಪಂಥಕ್ಕೆ ಚಾಲನೆ ನೀಡಲಾಯಿತು. ಕಟೀಲು ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದ ಅರ್ಚಕರಾದ ವೇದ ಮೂರ್ತಿ ಅನಂತ ಪದ್ಮನಾಭ ಅಸ್ರಣರು ಆಶೀರ್ವಚನ ನೀಡಿದರು.
ಕಾರ್ಯಕ್ರಮದಲ್ಲಿ ಮಂಗಳೂರು ಮಹಾ ನಗರ ಪಾಲಿಕೆಯ ಮೇಯರ್ ಜಯಾನಂದ ಅಂಚನ್ , ಮಾಜಿ ಸಚಿವ ಕೃಷ್ಣ ಜೆ.ಪಾಲೇಮರ್, ಮೂಡಬಿದ್ರೆ ಶಾಸಕರಾದ ಉಮನಾಥ ಕೋಟ್ಯಾನ್, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಅಧ್ಯಕ್ಷರಾದ ಎಚ್. ಎಸ್.ಸಾಯಿರಾಂ, ಕ್ಷೇತ್ರದ ಉಪಾಧ್ಯಕ್ಷರಾದ ಉರ್ಮಿಳ ರಮೇಶ್ ಕುಮಾರ್, ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ದೇವೆಂದ್ರ ಪೂಜಾರಿ, ಕೋಶಾಧಿಕಾರಿ, ಪದ್ಮರಾಜ್ ಆರ್,, ಬಿ.ಜಿ.ಸುವರ್ಣ, ಶೇಖರ್ ಪೂಜಾರಿ, ಸೂರ್ಯ ಕುಮಾರ್, ಸುಧಾಕರ್ ರಾವ್ ಪೇಜಾವರ, ನಮ್ಮ ಕುಡ್ಲ ಸಂಸ್ಥೆಯ ನಿರ್ಧೇಶಕರಾದ ಹರೀಶ್ ಬಿ ಕರ್ಕೇರಾ, ಸುರೇಶ್ ಬಿ ಕರ್ಕೇರಾ, ಮೋಹನ್ ಬಿ. ಕರ್ಕೇರಾ, ಲೀಲಾಕ್ಷ ಕರ್ಕೇರಾ ಸೇರಿದಂತೆ ಮತ್ತಿರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.