ಚಾರ್ಮಾಡಿ ಘಾಟಿ ತಿರುವಿನಲ್ಲಿ ಆಂಬುಲೆನ್ಸ್- ರಿಕ್ಷಾ ಢಿಕ್ಕಿ: ನಾಲ್ವರಿಗೆ ಗಾಯ
ಮುಂಡಾಜೆ: ಚಾರ್ಮಾಡಿ ಘಾಟಿಯ ತಿರುವಿನಲ್ಲಿ ಆಂಬುಲೆನ್ಸ್ ಮತ್ತು ಆಟೋ ರಿಕ್ಷಾ ಮುಖಾಮುಖಿ ಢಿಕ್ಕಿಯಾದ ಘಟನೆ ಗುರುವಾರ ನಡೆದಿದೆ.
ಆಟೋದಲಿದ್ದ ನಾಲ್ವರು ಗಾಯಗೊಂಡಿದ್ದು, ಅವರನ್ನು ಕಕ್ಕಿಂಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮಂಗಳೂರಿನಿಂದ ಮೂಡಿಗೆರೆಗೆ ರೋಗಿಯನ್ನು ಬಿಟ್ಟು ವಾಪಾಸಾಗುತ್ತಿದ್ದ ಆಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಚಾರ್ಮಾಡಿ ಘಾಟಿಯ ಒಂದನೇ ತಿರುವಿನಲ್ಲಿ ಆಟೋಗೆ ಢಿಕ್ಕಿ ಹೊಡೆಯಿತು ಎಂದು ತಿಳಿದುಬಂದಿದೆ.
ಬಣಕಲ್ ನ ಆಟೋ ಉಜಿರೆಯಿಂದ ಕೊಟ್ಟಿಗೆಹಾರದತ್ತ ಹೋಗುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
Next Story