ಹೊಸ ವರ್ಷಾಚರಣೆ: ಸೂಚನೆಗಳನ್ನು ಪಾಲಿಸುವಂತೆ ಮಂಗಳೂರು ಪೊಲೀಸ್ ಆಯುಕ್ತರ ನಿರ್ದೇಶನ
-

ಮಂಗಳೂರು, ಡಿ.2: ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು 2023ರ ಹೊಸ ವರ್ಷಾಚರಣೆ ಪ್ರಯುಕ್ತ ಸಾರ್ವಜನಿಕರಿಗೆ, ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳಿಗೆ ನೀಡಿರುವ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಶಶಿಕುಮಾರ್ ಅವರು ನಿರ್ದೇಶಿಸಿದ್ದಾರೆ.
ಹೊಸ ವರ್ಷಾಚರಣೆಯ ಸಂತೋಷ ಕೂಟಗಳನ್ನು ನಡೆಸುವ ನಗರದ ಎಲ್ಲಾ ಹೊಟೇಲ್, ರೆಸ್ಟೋರೆಂಟ್, ಕ್ಲಬ್, ರೆಸಾರ್ಟ್ ಮತ್ತು ಸಂಘ ಸಂಸ್ಥೆಗಳ ಮಾಲಕರು, ವ್ಯವಸ್ಥಾಪಕರು, ಆಡಳಿತ ವರ್ಗದವರು (ಒಳಾವರಣದಲ್ಲಿ ಮಾತ್ರ) ಈ ಬಗ್ಗೆ ಕಡ್ಡಾಯವಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಅರ್ಜಿ ಸಲ್ಲಿಸಿ ಪೂರ್ವಾನುಮತಿ ಪಡೆದುಕೊಳ್ಳಬೇಕು.
ಡಿ.31ರ ರಾತ್ರಿ ಆರಂಭವಾಗುವ ಹೊಸ ವರ್ಷಾಚರಣೆಯ ಸಂತೋಷ ಕೂಟಗಳನ್ನು ನಡೆಸಲು ಡಿ.15ರ ಸಂಜೆ 5ಗಂಟೆಯೊಳಗೆ ಅರ್ಜಿ ಸಲ್ಲಿಸಿ ಅನುಮತಿ ಪಡೆದುಕೊಳ್ಳಬೇಕು. ಇಲ್ಲದಿದ್ದಲ್ಲಿ ವರ್ಷಾಚರಣೆ ಆಚರಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ಕಾರ್ಯಕ್ರಮಗಳ ಧ್ವನಿವರ್ಧಕವನ್ನು ರಾತ್ರಿ 10 ಗಂಟೆಯೊಳಗೆ (ಒಳಾವರಣದಲ್ಲಿ ಮಾತ್ರ) ಮುಕ್ತಾಯಗೊಳಿಸಬೇಕು ಎಂದು ತಿಳಿಸಿದ್ದಾರೆ.
(ರೆಸ್ಟೋರೆಂಟ್ ಮತ್ತು ಮದ್ಯಪಾನ ಸರಬರಾಜು ಮಾಡುವ ಹೊಟೇಲ್ಗಳಲ್ಲಿ ಸರಕಾರವು ನಿಗದಿಪಡಿಸಿದ ಸಮಯಕ್ಕಿಂತ ಹೆಚ್ಚಿನ ಸಮಯದಲ್ಲಿ ನೂತನ ವರ್ಷಾಚರಣೆಯ ಸಂಬಂಧ ಮದ್ಯ ವಿತರಿಸಲು ಉದ್ಧೇಶಿಸಿದಲ್ಲಿ ಅಬಕಾರಿ ಇಲಾಖೆಯಿಂದ ಲಿಖಿತವಾಗಿ ಹೆಚ್ಚಿನ ಅವಧಿಗೆ ಅನುಮತಿಯನ್ನು ಕಡ್ಡಾಯವಾಗಿ ಪಡೆದುಕೊಳ್ಳಬೇಕು. ಅಬಕಾರಿ ಇಲಾಖೆಯಿಂದ ಅನುಮತಿ ಪಡೆದಿದ್ದರೂ ಸಹ ಮದ್ಯ ವಿತರಣೆಯನ್ನು ರಾತ್ರಿ 11ರೊಳಗೆ ಮುಕ್ತಾಯಗೊಳಿಸಬೇಕು.)
ಸಾರ್ವಜನಿಕ ಸ್ಥಳಗಳಲ್ಲಿ ಏರ್ಪಡಿಸಲಾಗಿರುವ ಹೊಸ ವರ್ಷಾಚರಣೆಯ ಕಾರ್ಯಕ್ರಮ ಹಾಗೂ ಇನ್ನಿತರ ನೆಪದಲ್ಲಿ ಬಸ್ ತಂಗುದಾಣ, ಸಾರ್ವಜನಿಕ ಉದ್ಯಾನವನಗಳು, ಕ್ರೀಡಾಂಗಣಳು, ರೈಲ್ವೇ ಸ್ಟೇಷನ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಮದ್ಯಪಾನ ಮಾಡುವುದನ್ನು ನಿಷೇಧಿಸಲಾಗಿದೆ. ವಿದ್ಯಾರ್ಥಿಗಳು ಹಾಗೂ ಯುವಕರು ಡಿ.31ರ ರಾತ್ರಿ ಹೊಸ ವರ್ಷಾಚರಣೆಯ ನೆಪದಲ್ಲಿ ಯಾವುದೇ ಕಾರಣಕ್ಕೂ ರಸ್ತೆಗಳಲ್ಲಿ ಅಸಭ್ಯವಾಗಿ ವರ್ತಿಸಬಾರದು. ಅಸಭ್ಯವಾಗಿ ವರ್ತಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಹೊಸ ವರ್ಷದ ಆಚರಣೆಯ ಸಂದರ್ಭ ಧ್ವನಿವರ್ಧಕವನ್ನು ಅಳವಡಿಸುವವರು ತಮ್ಮ ಪ್ರದೇಶಕ್ಕೆ ಮಾತ್ರ ಸೀಮಿತವಾಗಿರುವಂತೆ ಬಾಕ್ಸ್ ಮಾದರಿ ಧ್ವನಿವರ್ಧಕವನ್ನು ಅಳವಡಿಸಿಕೊಂಡು ಕಡಿಮೆ ಧ್ವನಿಯಲ್ಲಿ ಕಾರ್ಯಕ್ರಮವನ್ನು ನಡೆಸಬೇಕು. ಧ್ವನಿವರ್ಧಕದ ಧ್ವನಿ ಪ್ರಮಾಣವು ದಿ ನ್ವಾಸ್ ಪೊಲ್ಯೂಶನ್ (ರೆಗ್ಯುಲೇಶನ್ ಆ್ಯಂಡ್ ಕಂಟ್ರೋಲ್) ರೂಲ್ಸ್, 2000ರಲ್ಲಿ ನಿಗದಿಪಡಿಸಲಾದ ಪ್ರಮಾಣವನ್ನು ಯಾವುದೇ ಕಾರಣಕ್ಕೂ ಮೀರಬಾರದು.
ಹೊಸ ವರ್ಷಾಚರಣೆ ನಡೆಸಲು ಹೊಟೇಲ್, ಕ್ಲಬ್ ಅಥವಾ ವಿಶೇಷ ಕೂಟಗಳ ವ್ಯವಸ್ಥಾಪಕರು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು. ಸಾರ್ವಜನಿಕ ರಸ್ತೆಗಳಲ್ಲಿ ವಾಹನಗಳನ್ನು ನಿಲ್ಲಿಸದೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಮಾಡಬೇಕು. 18 ವರ್ಷ ಪ್ರಾಯದ ಕೆಳಗಿನವರಿಗೆ ಕಡ್ಡಾಯವಾಗಿ ಮದ್ಯ ವಿತರಿಸಬಾರದು. ಪೋಷಕರು ಜೊತೆಯಲ್ಲಿರದ ಪಕ್ಷದಲ್ಲಿ 18 ವರ್ಷ ಪ್ರಾಯ ಕೆಳಗಿನವರಿಗೆ ಯಾವುದೇ ಕಾರಣಕ್ಕೂ ಕಾರ್ಯಕ್ರಮಗಳಿಗೆ ಪ್ರವೇಶವನ್ನು ನಿರ್ಬಂಧಿಸಬೇಕು ಎಂದು ಸೂಚನೆ ನೀಡಿದ್ದಾರೆ.
ಹೊಸ ವರ್ಷಾಚರಣೆಯ ಸಂದರ್ಭ ಸಾಂಸ್ಕೃತಿಕ ಕಾರ್ಯಕ್ರಮಗಳ ನೆಪದಲ್ಲಿ ಅಶ್ಲೀಲ, ಅರೆಬೆತ್ತಲೆ ಅಥವಾ ಅಶ್ಲೀಲ ನೃತ್ಯ, ಜೂಜಾಟ ನಡೆಸುವುದನ್ನು ನಿಷೇಧಿಸಲಾಗಿದೆ. ಹೆಣ್ಣು ಮಕ್ಕಳಿಗೆ ಮತ್ತು ಮಹಿಳೆಯರಿಗೆ ಶುಭಕೋರುವ ನೆಪದಲ್ಲಿ ಕೀಟಲೆ, ಅಸಭ್ಯವಾಗಿ ವರ್ತಿಸುವುದನ್ನು ತಡೆಯಲು ಕಾರ್ಯಪಡೆ ತಂಡಗಳನ್ನು ರಚಿಸಲಾಗಿದೆ. ಈ ಪಡೆಯು ನಗರದ ಅಲ್ಲಲ್ಲಿ ಕಾರ್ಯನಿರತವಾಗಿದ್ದು ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.
ರಸ್ತೆಯಲ್ಲಿ ಅನಾವಶ್ಯಕವಾಗಿ ಓಡಾಡುವ ಸಾರ್ವಜನಿಕರನ್ನು ಬಲವಂತವಾಗಿ ನಿಲ್ಲಿಸಿ ಅವರ ಇಚ್ಛೆಗೆ ವಿರುದ್ಧವಾಗಿ ಶುಭಕೋರುವ ನೆಪದಲ್ಲಿ ಕಿರಿಕಿರಿ ಮಾಡಬಾರದು. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ಬಗ್ಗೆ ನಿಗಾ ವಹಿಸಲು ಸಂಚಾರ ಪೊಲೀಸರು ಮತ್ತು ತಜ್ಞರನ್ನು ಒಳಗೊಂಡ ಕ್ಷಿಪ್ರ ಕಾರ್ಯಪಡೆ ರಚಿಸಲಾಗಿದೆ. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು.
ವಾಹನಗಳ ವೀಲಿಂಗ್ ಮತ್ತು ಡ್ರಾಗ್ ರೇಸ್, ಬೊಬ್ಬೆ ಹಾಕುವುದು ಹಾಗೂ ಅತೀ ವೇಗವಾಗಿ ವಾಹನಗಳನ್ನು ಚಲಾಯಿಸುವುದು ಮತ್ತು ಕರ್ಕಶ ಶಬ್ಧ ಮಾಡುವುದನ್ನು ತಡೆಗಟ್ಟಲು ಸಂಚಾರ ಪೊಲೀಸರು ಮತ್ತು ತಜ್ಞರನ್ನು ಒಳಗೊಂಡ ಕ್ಷಿಪ್ರ ಕಾರ್ಯಪಡೆಯನ್ನು ರಚಿಸಲಾಗಿದೆ.
ಸಮುದ್ರ ಕಿನಾರೆಗಳಲ್ಲಿ ಮದ್ಯಪಾನ ಮಾಡುವುದು, ಅಶ್ಲೀಲವಾಗಿ ವರ್ತಿಸುವುದು, ಸಾಂಸ್ಕೃತಿಕ ಕಾರ್ಯಕ್ರಮಗಳ ನೆಪದಲ್ಲಿ ಅಶ್ಲೀಲ, ಅರೆಬೆತ್ತಲೆ ಅಥವಾ ಅಶ್ಲೀಲ ನೃತ್ಯ, ಜೂಜಾಟ ನಡೆಸುವುದನ್ನು ನಿಷೇಧಿಸಲಾಗಿದೆ. ಯಾವುದೇ ಕಾರಣಕ್ಕೂ ಸಾರ್ವಜನಿಕರ ಮನೆಗಳ ಮುಂದೆ ವಿದ್ಯಾರ್ಥಿಗಳ ಹಾಸ್ಟೆಲ್, ವರ್ಕಿಂಗ್ ವಿಮೆನ್ಸ್ ಹಾಸ್ಟೆಲ್ ಕಾಂಪೌಂಡ್ನೊಳಗಡೆ ಶುಭಾಶಯ ಕೋರುವ ನೆಪದಲ್ಲಿ ಅನಧಿಕೃತವಾಗಿ ಯಾವುದೇ ವ್ಯಕ್ತಿ ಅಥವಾ ಗುಂಪು ಹೋಗಿ ಕಿರಿಕಿರಿ, ಅಸಭ್ಯವಾಗಿ ವರ್ತನೆ ಮಾಡುವುದನ್ನು ನಿಷೇಧಿಸಲಾಗಿದೆ. ರಸ್ತೆಯಲ್ಲಿ ಮದ್ಯಪಾನ ಮಾಡುವುದು ಮತ್ತು ಬಾಟಲಿಯನ್ನು ಎಸೆಯುವುದು, ಸಾರ್ವಜನಿಕರ ನೆಮ್ಮದಿಗೆ ಭಂಗ ತರುವ ನೆಪದಲ್ಲಿ ಪಟಾಕಿ ಸಿಡಿಮದ್ದುಗಳನ್ನು ಸಿಡಿಸುವುದನ್ನು ಕೂಡ ನಿಷೇಧಿಸಲಾಗಿದೆ.
ಹೊಸ ವರ್ಷಾಚರಣೆಯ ಕಾರ್ಯಕ್ರಮಗಳನ್ನು ಆಯೋಜಿಸುವವರು ತುರ್ತು ಪರಿಸ್ಥಿತಿಯನ್ನು ಎದುರಿಸಲು ಅಗ್ನಿಶಾಮಕ ಉಪಕರಣಗಳು, ತುರ್ತು ಚಿಕಿತ್ಸಾ ವಾಹನ ಹಾಗೂ ಇತರ ಮುಂಜಾಗ್ರತಾ ಕ್ರಮ ವಹಿಸಬೇಕು. ಯಾವುದೇ ರೀತಿಯ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾದಲ್ಲಿ ವ್ಯವಸ್ಥಾಪಕರನ್ನೇ ಹೊಣೆಗಾರರನ್ನಾಗಿ ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತರು ಎಚ್ಚರಿಸಿದ್ದಾರೆ.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.