Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್ ಟೋಲ್ ಗೇಟ್ ರದ್ದು: ಬಸ್ಸು...

ಸುರತ್ಕಲ್ ಟೋಲ್ ಗೇಟ್ ರದ್ದು: ಬಸ್ಸು ಪ್ರಯಾಣ ದರ ಇಳಿಕೆಗೆ ಹೋರಾಟ ಸಮಿತಿ ಆಗ್ರಹ

6 Dec 2022 11:12 PM IST
share
ಸುರತ್ಕಲ್ ಟೋಲ್ ಗೇಟ್ ರದ್ದು: ಬಸ್ಸು ಪ್ರಯಾಣ ದರ ಇಳಿಕೆಗೆ ಹೋರಾಟ ಸಮಿತಿ ಆಗ್ರಹ

ಸುರತ್ಕಲ್, ಡಿ.6: ಸುರತ್ಕಲ್ ಟೋಲ್ ಗೇಟ್ ದಾಟಿ ಮುಲ್ಕಿ, ಕಿನ್ನಿಗೋಳಿ, ಮುಕ್ಕ ಪ್ರದೇಶದಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್ಸುಗಳು ಪ್ರಯಾಣಿಕರ ಟಿಕೆಟ್ ಮೇಲೆ ಹಾಕಿದ್ದ ಟೋಲ್ ತೆರಿಗೆಯನ್ನು ತಕ್ಷಣವೇ ಕೈಬಿಟ್ಟು ಪ್ರಯಾಣ ದರವನ್ನು ಇಳಿಸಬೇಕು ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ.

ಏಳು ವರ್ಷಗಳ ಹಿಂದೆ ಸುರತ್ಕಲ್ ಟೋಲ್ ಗೇಟ್ ನಲ್ಲಿ ಸುಂಕ ಸಂಗ್ರಹ ಆರಂಭಗೊಂಡಾಗ ಮುಲ್ಕಿ, ಹಳೆಯಂಗಡಿ, ಕಿನ್ನಿಗೋಳಿ ಮುಂತಾದ ಮಂಗಳೂರು ಗ್ರಾಮೀಣ ಭಾಗಗಳಿಗೆ ಸಂಚರಿಸುತ್ತಿದ್ದ ಖಾಸಗಿ ಸರ್ವೀಸ್ ಬಸ್ಸುಗಳು ಹಾಗೂ ಉಡುಪಿ, ಕಾರ್ಕಳ, ಕುಂದಾಪುರ ಕಡೆಗೆ ಸಂಚರಿಸುತ್ತಿದ್ದ ಖಾಸಗಿ ಎಕ್ಸ್ ಪ್ರೆಸ್ ಬಸ್ಸುಗಳು ಟಿಕೆಟ್ ಮೇಲೆ ಟೋಲ್ ದರವನ್ನು ಸೇರಿಸಿ ಪ್ರಯಾಣಿಕರಿಂದ ಹೆಚ್ಚುವರಿ ಶುಲ್ಕವನ್ನು ಸಂಗ್ರಹಿಸತೊಡಗಿದ್ದವು. ಆ ಮೂಲಕ ಟೋಲ್ ಸುಂಕದ ಹೊರೆ ಪ್ರಯಾಣಿಕ ಮೇಲೆ ವರ್ಗಾವಣೆಗೊಂಡಿತ್ತು.‌

ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯ ನೇತೃತ್ವದಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಸಮಾನ ಮನಸ್ಕ ಸಂಘಟನೆಗಳು, ಜನಸಾಮಾನ್ಯರು ನಡೆಸಿದ ಸತತ ಹೋರಾಟದ ಪರಿಣಾಮ ಸುರತ್ಕಲ್ ಟೋಲ್ ಗೇಟ್ ಶಾಶ್ವತವಾಗಿ ಮುಚ್ಚಲ್ಪಟ್ಟಿದೆ. ಜನತೆಯನ್ನು ಟೋಲ್ ಸುಂಕದ ಭಾರದಿಂದ ಬಿಡುಗಡೆಗೊಳಿಸಬೇಕು ಎಂಬ ಪ್ರಧಾನ ಬೇಡಿಕೆ ಇಟ್ಟು ನಡೆದ ಹೋರಾಟದ ಯಶಸ್ಸಿನ ಲಾಭ ಸಹಜವಾಗಿಯೇ ಬಲವಂತವಾಗಿ ಟೋಲ್ ಪಾವತಿ ಮಾಡುತ್ತಿದ್ದ ವಿಭಾಗಗಳಿಗೆ ದೊರಕಬೇಕು. ಖಾಸಗಿ ಬಸ್ಸುಗಳಲ್ಲಿ ಪ್ರಯಾಣಿಸುವ ಬಹುತೇಕರು ಕಡಿಮೆ ವೇತನ,  ಭದ್ರತೆಯಿಲ್ಲದ ಉದ್ಯೋಗಗಳಲ್ಲಿ ತೊಡಗಿಸಿಕೊಂಡವರು. ಟೋಲ್ ಗೇಟ್ ಮುಚ್ಚಲ್ಪಟ್ಟಿರುವುದರಿಂದ ಪ್ರಯಾಣಿಕರನ್ನು ಟೋಲ್ ಹೊರೆಯಿಂದ ಮುಕ್ತಗೊಳಿಸಬೇಕು. ಟಿಕೇಟ್ ಮೇಲೆ ವಿಧಿಸುತ್ತಿದ್ದ ಐದು ರೂಪಾಯಿಯಷ್ಟು ಟೋಲ್ ಶುಲ್ಕವನ್ನು ಬಸ್ಸು ಮಾಲಕರು ತಕ್ಷಣದಿಂದಲೇ ಕೈಬಿಡಬೇಕು. ಜಿಲ್ಲಾಧಿಕಾರಿಗಳು ಈ ಕುರಿತು ಬಸ್ಸು ಮಾಲಕರಿಗೆ ಸೂಚನೆಯನ್ನು ನೀಡಬೇಕು ಎಂದು ಹೋರಾಟ ಸಮಿತಿ ಒತ್ತಾಯಿಸಿದೆ‌.

ಸುರತ್ಕಲ್ ಟೋಲ್ ಗೇಟ್ ಅಧಿಕೃತವಾಗಿ ಮುಚ್ಚಲ್ಪಟ್ಟಿರುವುದರಿಂದ ಮುಕ್ಕ, ಕಿನ್ನಿಗೋಳಿ, ಮುಲ್ಕಿ ಭಾಗದ ಬಸ್ಸುಗಳು ಶಾಶ್ವತವಾಗಿ ಟೋಲ್ ಸುಂಕದಿಂದ ಪಾರಾಗಿವೆ. ಈ ದಾರಿಯಲ್ಲಿ ಸಂಚರಿಸುವ ಬಸ್ಸುಗಳು ತಕ್ಷಣವೇ ದರ ಇಳಿಸಬೇಕು. ಹೆಜಮಾಡಿಯಲ್ಲಿ ಸುರತ್ಕಲ್ ಟೋಲ್ ಸುಂಕ ಸಂಗ್ರಹಕ್ಕೆ ತಡೆ ಬಿದ್ದಿರುವುದರಿಂದ ಅಂತಿಮ ಇತ್ಯರ್ಥದವರಗೆ ಕಾಯದೆ ಉಡುಪಿ, ಕಾರ್ಕಳ, ಕುಂದಾಪುರ ಕಡೆಗೆ ಸಂಚರಿಸುವ ಬಸ್ಸುಗಳು ಟಿಕೆಟ್ ಮೇಲಿನ ಸುರತ್ಕಲ್ ಟೋಲ್ ದರವನ್ನು ತಾತ್ಕಾಲಿಕ ನೆಲೆಯಲ್ಲಿ ಕಡಿತಗೊಳಿಸಬೇಕು, ಆ ಮೂಲಕ ಟೋಲ್ ದರ ಪಾವತಿಸುತ್ತಿದ್ದ ವಿಭಾಗಗಳಿಗೆ ಸುರತ್ಕಲ್ ಟೋಲ್ ಗೇಟ್ ರದ್ದುಗೊಂಡಿರುವುದರ ಪಾಲನ್ನು ನ್ಯಾಯಯುತವಾಗಿ ಒದಗಿಸಿಕೊಡಬೇಕು ಎಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಸಂಚಾಲಕ ಮುನೀರ್ ಕಾಟಿಪಳ್ಳ ಆಗ್ರಹಿಸಿದ್ದಾರೆ‌. 

share
Next Story
X