-

ಕಾಟಿಪಳ್ಳ ಜಲೀಲ್ ಕೊಲೆಗೆ ಬಿಜೆಪಿ ಸರಕಾರವೇ ನೇರ ಹೊಣೆ: ಡಿವೈಎಫ್‌ಐ

-

ಮುನೀರ್ ಕಾಟಿಪಳ್ಳ

ಮಂಗಳೂರು: ಆಡಳಿತ ವಿರೋಧಿ ಅಲೆಯನ್ನು ಎದುರಿಸುತ್ತಿರುವ ಬಿಜೆಪಿ ಸರಕಾರ ಅದರಿಂದ ಪಾರಾಗಲು ಮತೀಯ ಧ್ರುವೀಕರಣದ ಅಪಾಯಕಾರಿ ಆಟಗಳನ್ನು ಆಡುತ್ತಿದೆ. ಕರಾವಳಿ ಭಾಗದಲ್ಲಿ ಪೊಲೀಸರ ಕೈಗಳನ್ನು ಕಟ್ಟಿಹಾಕಿ ಮತೀಯ ಗೂಂಡಾ ತಂಡಗಳಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಅಂತಹ ದುಂಡಾವರ್ತನೆಯ ಭಾಗವಾಗಿಯೆ ಕಾಟಿಪಳ್ಳದಲ್ಲಿ ಜಲೀಲ್ ಎಂಬ ಅಮಾಯಕ ಅಂಗಡಿ ವ್ಯಾಪಾರಿಯ ಕೊಲೆಯಾಗಿದೆ. ಈ ಕೊಲೆಗೆ ಬಿಜೆಪಿ ಸರಕಾರವೇ ನೇರ ಹೊಣೆ ಎಂದು ಡಿವೈಎಫ್‌ಐ ರಾಜ್ಯ ಅಧ್ಯಕ್ಷ ಮುನೀರ್ ಕಾಟಿಪಳ್ಳ ಆರೋಪಿಸಿದ್ದಾರೆ.

ಕಳೆದ ಒಂದು ವರ್ಷದ ಅವಧಿಯಲ್ಲಿ ಬಿಜೆಪಿಯ ಮತೀಯ ವಿಭಜನೆಯ ಅಜೆಂಡಾವನ್ನು ರಾಜ್ಯದಲ್ಲಿ ಸರಕಾರವೇ ಮುಂದೆ ನಿಂತು ಪ್ರಾಯೋಜಿಸಿದೆ. ಹಿಜಾಬ್ ವಿವಾದ, ಹಲಾಲ್, ಜಟ್ಕಾ ಕಟ್, ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರದಂತಹ ಅಭಿಯಾನಗಳು ಕಾನೂನಿನ ಭಯವಿಲ್ಲದೆ ವ್ಯಾಪಕವಾಗಿ ನಡೆಯಿತು. ಇಂತಹ ಸಂದರ್ಭದಲ್ಲಿ ಪೊಲೀಸರು ಮೂಕಪ್ರೇಕ್ಷಕರಾಗುವ ಸಂದರ್ಭ ಎದುರಾಯಿತು. ಮುಖ್ಯಮಂತ್ರಿ ಬೊಮ್ಮಾಯಿ ಸ್ವತಃ ಈ ಅಜೆಂಡಾ ಜಾರಿಗೆ ಬಹಿರಂಗವಾಗಿ ಇಲ್ಲಿ ಮುಂಚೂಣಿಯಲ್ಲಿ ನಿಂತದ್ದು ಗಮನಾರ್ಹ. ಕೊಲೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬದ ಭೇಟಿಗೆ ಆಗಮಿಸಿದಾಗ ಮಸೂದ್ ಹಾಗೂ ಫಾಝಿಲ್ ಕುಟುಂಬವನ್ನು ಕಡೆಗಣಿಸಿದ್ದು, ಕೊಲೆಗೀಡಾದ ಈ ಎರಡೂ ಕುಟುಂಬಗಳಿಗೆ ಪರಿಹಾರ ನೀಡಲು ನಿರಾಕರಿಸಿದ್ದು ಸರಕಾರದ ತಾರತಮ್ಯ ನೀತಿಗೆ ಬಹಿರಂಗ ಉದಾಹರಣೆಯಾಗಿತ್ತು. ಜಿಲ್ಲೆಯ ಬಿಜೆಪಿ ಶಾಸಕ, ಸಂಸದರು ಇದೇ ಮಾದರಿಯನ್ನು ಅನುಸರಿಸಿ ಕೊಲೆಗೀಡಾದ ಮುಸ್ಲಿಮ್ ಕುಟುಂಬಗಳಿಗೆ ಕನಿಷ್ಟ ಸಾಂತ್ವನವನ್ನೂ ಹೇಳಲು ನಿರಾಕರಿಸಿ ಬಹಿರಂಗವಾಗಿ ತಾರತಮ್ಯ ತೋರಿದರು.

ಆಚರಿಸಿದರು. ಇದರ ಮುಂದುವರಿದ ಭಾಗವಾಗಿ ಕಳೆದ ಮೂರು ತಿಂಗಳುಗಳಲ್ಲಿ ನಿರಂತರವಾಗಿ ಮುಸ್ಲಿಮರ ಮೇಲೆ ಗುಂಪುಹಲ್ಲೆಗಳು ನಡೆಯುತ್ತಿದೆ. ಈ ಎಲ್ಲಾ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಸಂತ್ರಸ್ತರ ಮೇಲೆಯೆ ಕಠಿಣ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿ ಜೈಲಿಗಟ್ಟಿದೆ. ದಾಳಿಕೋರ ಗುಂಪುಗಳೊಂದಿಗೆ ಮೃದುವಾಗಿ ನಡೆದು ಕೊಂಡಿದೆ. ಇದೆಲ್ಲವೂ ಪೊಲೀಸರ ಕೈಗಳನ್ನು ಬಿಜೆಪಿ ಸರಕಾರ ಕಟ್ಟಿಹಾಕಿರುವುದರ ಪರಿಣಾಮ ಎಂಬುದು ವಾಸ್ತವ ವಿಚಾರ. ಆ ಮೂಲಕ ಚುನಾವಣೆಯ ಸಂದರ್ಭ ಹಿಂದು ಮುಸ್ಲಿಂ ವಿಭಜನೆಯನ್ನು ಮತ್ತಷ್ಟು ತೀವ್ರಗೊಳಿಸುವುದು ಬಿಜೆಪಿಯ ಘೋಷಿತ ಅಜೆಂಡಾವಾಗಿದೆ ಎಂದು ಮುನೀರ್ ಕಾಟಿಪಳ್ಳ ಹೇಳಿಕೆಯಲ್ಲಿ ತಿಳಿಸಿದೆ.

ಇಂತಹ ಬಹಿರಂಗ ತಾರತಮ್ಯ, ಪೊಲೀಸರ ಮೌನದ ಪರಿಣಾಮವಾಗಿಯೇ ಕಾಟಿಪಳ್ಳದಲ್ಲಿ ಅಂಗಡಿ ವ್ಯಾಪಾರಿ ಜಲೀಲ್ ಕೊಲೆಗೆ ಕೋಮುವಾದಿ ಸಂಘಟನೆಗಳ ಸಹವಾಸ ಹೊಂದಿರುವ ಕ್ರಿಮಿನಲ್‌ಗಳಿಗೆ ಕುಮ್ಮಕ್ಕು ದೊರಕಿದೆ. ಬಿಜೆಪಿ ಸರಕಾರದ ಇಂತಹ ಅಪಾಯಕಾರಿ ನೀತಿಗಳ ಕುರಿತು ಜನತೆ ಎಚ್ಚರಗೊಳ್ಳಬೇಕು. ಸರಕಾರದ ಘೋರ ವೈಫಲ್ಯ, ಜನಪ್ರತಿನಿಧಿಗಳ ವಿರುದ್ದ ಮತದಾರರಲ್ಲಿ ಮೂಡಿರುವ ಅಸಮಾಧಾನದಿಂದ ಚುನಾವಣೆಯ ಸಂದರ್ಭ ತಪ್ಪಿಸಿಕೊಳ್ಳಲು ನಡೆಸುತ್ತಿರುವ ರಾಜಕಾರಣವನ್ನು ಅರ್ಥ ಮಾಡಿಕೊಳ್ಳಬೇಕು. ಅಮಾಯಕ ಜಲೀಲ್ ಕೊಲೆಯ ನಿಷ್ಪಕ್ಷಪಾತ ತನಿಖೆ ಹಾಗೂ ಆ ಕುಟುಂಬಕ್ಕೆ ಪರಿಹಾರ ಒದಗಿಸಲು ಧರ್ಮಾತೀತವಾಗಿ ಜನತೆ ಒಗ್ಗಟ್ಟಿನಿಂದ ಆಗ್ರಹಿಸಬೇಕು ಎಂದು ಮುನೀರ್ ಕಾಟಿಪಳ್ಳ ಮನವಿ ಮಾಡಿದ್ದಾರೆ.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

ಇಂದು ಹೆಚ್ಚು ಓದಿದ್ದು


Back to Top