Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಕೇಂದ್ರ, ರಾಜ್ಯ ಸರಕಾರದ ಅಡಿಕೆ...

ಮಂಗಳೂರು: ಕೇಂದ್ರ, ರಾಜ್ಯ ಸರಕಾರದ ಅಡಿಕೆ ಬೆಳೆ ನೀತಿಯನ್ನು ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

31 Dec 2022 2:52 PM IST
share
ಮಂಗಳೂರು: ಕೇಂದ್ರ, ರಾಜ್ಯ ಸರಕಾರದ ಅಡಿಕೆ ಬೆಳೆ ನೀತಿಯನ್ನು ಖಂಡಿಸಿ ಕಾಂಗ್ರೆಸ್‌ನಿಂದ ಪ್ರತಿಭಟನೆ

ಮಂಗಳೂರು, ಡಿ.31: ಕೇಂದ್ರ ಹಾಗೂ ರಾಜ್ಯ ಸರಕಾರದ ಅಡಿಕೆ ಬೆಳೆ ನೀತಿಯನ್ನು ಖಂಡಿಸಿ ನಗರದ ಮಿನಿ ವಿಧಾನ ಸೌಧದ ಮುಂದೆ ಶನಿವಾರ ಮಂಗಳೂರು ನಗರ ಬ್ಲಾಕ್ ಕಾಂಗ್ರೆಸ್ ಸಮಿತಿ, ಮಂಗಳೂರು ದಕ್ಷಿಣ ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ಕಿಸಾನ್ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಪ್ರತಭಟನೆಯ ನೇತೃತ್ವವನ್ನು ವಹಿಸಿ ಮಾತನಾಡಿದ ಮಾಜಿ ಶಾಸಕ ಜೆ.ಆರ್.ಲೋಬೊ, ವಿಧಾನಸಭಾ ಅಧಿವೇಶನದಲ್ಲಿ ಗೃಹಸಚಿವರು ಅಡಿಕೆ ಬೆಳೆಗೆ ಭವಿಷ್ಯವಿಲ್ಲ ಎಂಬ ಹೇಳಿಕೆ ನೀಡಿದ್ದಾರೆ. ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರಕಾರಕ್ಕೆ ರೈತರ ಸಮಸ್ಯೆಗಳ ಬಗ್ಗೆ ಅರಿವು ಇಲ್ಲ. ರಾಜ್ಯದಲ್ಲಿ ಸುಮಾರು 16 ಜಿಲ್ಲೆಗಳಲ್ಲಿ ಸಹಸ್ರಾರು ಹೆಕ್ಟರ್ ಪ್ರದೇಶಗಳಲ್ಲಿ ನೂರಾರು ವರ್ಷಗಳಿಂದ ಅಡಿಕೆ ಬೆಳೆಯಲಾಗುತ್ತಿದೆ. ಹಿಂದೆ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ಅಡಿಕೆ ಬೆಳೆಗಾರರ ಹಿತ ಕಾಯಲು ಕ್ಯಾಂಪ್ಕೊ ಸಂಸ್ಥೆಯನ್ನು ಸ್ಥಾಪಿಸಲು ನೆರವು ನೀಡಿತ್ತು. ಅಡಿಕೆ ಆಮದಿಗೆ ನಿರ್ಬಂಧ ವಿಧಿಸಿ ಅಡಿಕೆ ಬೆಳೆಗಾರರ ಹಿತವನ್ನುಕಾಯ್ದುಕೊಂಡಿತ್ತು. ಆದರೆ ಈಗ ವಿದೇಶಗಳಿಂದ ಮುಕ್ತ ಆಮದಿಗೆ ಅವಕಾಶ ಮಾಡಿಕೊಟ್ಟು ಅಡಿಕೆ ಬೆಳೆಗಾರರಿಗೆ ತೊಂದರೆಯನ್ನುಂಟು ಮಾಡಿದೆ ಎಂದರು.

ಹಳದಿ ರೋಗ, ಚುಕ್ಕಿ ರೋಗದಿಂದಾಗಿ ಅಡಿಕೆ ಬೆಳೆಗಾರರು ಅಪಾರ ನಷ್ಟ ಅನುಭವಿಸಿದ್ದಾರೆ. ಆದರೆ ಅವರಿಗೆ ಸರಕಾರ ಪರಿಹಾರ ನೀಡಿಲ್ಲ. ಜಿಲ್ಲೆಯಲ್ಲಿ 8 ಶಾಸಕರ ಪೈಕಿ 7 ಮಂದಿ ಆಡಳಿತಾರೂಢ ಬಿಜೆಪಿ ಸರಕಾರದ ಶಾಸಕರು ಇದ್ದರೂ ಅವರಿಗೆ ಅಡಿಕೆ ಬೆಳೆಗಾರರ ಬಗ್ಗೆ ಕಾಳಜಿ ಇಲ್ಲ ಎಂದು ದೂರಿದರು.

ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ ಮಾತನಾಡಿ, ಅಡಿಕೆಗೆ ಬೆಲೆ ಇಳಿದರೆ ರಾಜ್ಯದ ಆರ್ಥಿಕತೆಯ ಮೇಲೆ ಕೆಟ್ಟ ಪರಿಣಾಮ ಉಂಟಾಗಲಿದೆ ಎಂದು ಆತಂಕ ವ್ಯಕ್ತಪಡಿಸಿದರು.

ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೊ ಮಾತನಾಡಿ ರಾಜ್ಯ ಬಿಜೆಪಿ ಸರಕಾರದ ಅಡಿಕೆ ಬೆಳೆ ವಿರೋಧಿ ನೀತಿಯನ್ನು ಖಂಡಿಸಿದರು.

ಬ್ಲಾಕ್ ಅಧ್ಯಕ್ಷ ಪ್ರಕಾಶ್ ಸಾಲ್ಯಾನ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಟಿ.ಕೆ.ಸುಧೀರ್, ಕಾರ್ಪೊರೇಟರ್ ಗಳಾದ ನವೀನ್ ಡಿಸೋಜ, ಶಶಿಧರ್ ಹೆಗ್ಡೆ, ಅಬ್ದುಲ್ ರವೂಫ್, ಅಬ್ದುಲ್ಲತೀಫ್, ಸಂಶುದ್ದೀನ್, ಅಶ್ರಫ್ ಬಜಾಲ್, ಪಕ್ಷದ ಪ್ರಮುಖರಾದ ನಝೀರ್ ಬಜಾಲ್, ನೀರಜ್ ಪಾಲ್, ಚೇತನ್, ರೀತೇಶ್, ಹೊನ್ನಯ್ಯ, ಸದಾಶಿವ ಅಮೀನ್, ಉದಯ್ ಕುಂದರ್, ರಾಕೇಶ್ ದೇವಾಡಿಗ,ಆಸಿಫ್ ಬೆಂಗ್ರೆ, ಲಿಯಾಕತ್ ಶಾಹ್, ಚಂದ್ರಕಲಾ ರಾವ್, ಭರತೇಶ್ ಅಮೀನ್, ಕವಿತಾ ವಾಸು, ಗೀತಾ ಅತ್ತಾವರ, ಶೈಲಜಾ, ಪದ್ಮನಾಭ ಅಮೀನ್, ಯೋಗೇಶ್ ನಾಯಕ್, ಶರತ್ ಕುಮಾರ್, ನವಾಝ್‌ಜೆಪ್ಪು, ಹೈದರಲಿ, ಲಕ್ಷ್ಮಣ್ ಶೆಟ್ಟಿ, ಶಾನ್ ಡಿಸೋಜ, ವಿದ್ಯಾ, ಅಬ್ದುಲ್ ಹಮೀದ್, ಅಬ್ದುಲ್ ಮಜೀದ್, ಪ್ರವೀತ್ ಕರ್ಕೇರ ಮೊದಲಾದವರು ಭಾಗವಹಿಸಿದ್ದರು.

share
Next Story
X