ಉಳ್ಳಾಲ: ಬಸ್ ನಲ್ಲಿ ಸಿಕ್ಕಿದ ಚಿನ್ನವನ್ನು ವಾರಸುದಾರರಿಗೆ ನೀಡಿ ಪ್ರಾಮಾಣಿಕತೆ ಮೆರೆದ ಚಾಲಕ, ನಿರ್ವಾಹಕ
ಉಳ್ಳಾಲ: ಉಳ್ಳಾಲದಿಂದ ಮಂಗಳೂರು ಕಡೆ ಸಂಚರಿಸುತ್ತಿದ್ದ ಶಾಲಿಮಾರ್ ಬಸ್ ನಲ್ಲಿ ಸಿಕ್ಕಿದ ಚಿನ್ನವನ್ನು ವಾರಸುದಾರರಿಗೆ ಹಸ್ತಾಂತರ ಮಾಡುವ ಮೂಲಕ ಬಸ್ ನ ಚಾಲಕ ನಿಸಾರ್ ಅಹಮ್ಮದ್ ಹಾಗು ನಿರ್ವಾಹಕ ಇಬ್ರಾಹಿಂ ಪ್ರಾಮಾಣಿಕತೆ ಮೆರೆದಿದ್ದಾರೆ.
ಜ.1ರಂದು ಮಂಗಳೂರಿನಿಂದ ಉಳ್ಳಾಲ ಕಡೆಗೆ ಸಂಚರಿಸುತ್ತಿದ್ದ ಶಾಲಿಮಾರ್ ಬಸ್ ನಲ್ಲಿ ಬಿ.ಸಿ.ರೋಡ್ ಮೂಲದ ಮಹಿಳೆ ತಸ್ಲಿಮಾ ಫಾರೂಕ್ ಸಂಬಂಧಿಕರ ಮದುವೆ ಕಾರ್ಯಕ್ರಮಕ್ಕೆಂದು ಬರುತ್ತಿದ್ದ ವೇಳೆ 18 ಗ್ರಾಂ ಚಿನ್ನದ ಬಳೆ ಕಳೆದುಹೋಗಿತ್ತು. ಈ ಬಳೆ ನಿರ್ವಾಹಕ ಇಬ್ರಾಹಿಂ ಅವರಿಗೆ ಸಿಕ್ಕಿತ್ತು.
ಬಳಿಕ ಉಳ್ಳಾಲ ಪೊಲೀಸರಿಗೆ ಮಾಹಿತಿ ನೀಡಿ ಸೋಮವಾರ ಉಳ್ಳಾಲ ಠಾಣೆಯ ಪೊಲೀಸ್ ಉಪ ನಿರೀಕ್ಷಕ ಶಿವಕುಮಾರ್ ಅವರ ಮೂಲಕ ಬಳೆಯನ್ನು ಕಳೆದುಕೊಂಡ ಮಹಿಳೆಗೆ ಹಸ್ತಾಂತರ ಮಾಡಿ ಪ್ರಾಮಾಣಿಕತೆ ಮೆರೆದರು.
Next Story