Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಭಟ್ಕಳ: ಕರಾವಳಿ ಕರ್ನಾಟಕ ಎನ್‌ಆರ್‌ಐ...

ಭಟ್ಕಳ: ಕರಾವಳಿ ಕರ್ನಾಟಕ ಎನ್‌ಆರ್‌ಐ ಫೋರಂ ವತಿಯಿಂದ ಸಂಚಾರಿ ಚಿಕಿತ್ಸಾಲಯ ಸೇವೆ ಉದ್ಘಾಟನೆ

ಮೊಬೈಲ್ ಕ್ಲಿನಿಕ್‌ಗೆ ಹೈಟೆಕ್ ಆ್ಯಂಬ್ಯುಲೆನ್ಸ್ ಕೊಡುಗೆ ನೀಡಿದ ಮುಹಮ್ಮದ್ ಮೀರಾನ್ ಮಣೆಗಾರ್

8 Jan 2023 6:00 PM IST
share
ಭಟ್ಕಳ: ಕರಾವಳಿ ಕರ್ನಾಟಕ ಎನ್‌ಆರ್‌ಐ ಫೋರಂ ವತಿಯಿಂದ ಸಂಚಾರಿ ಚಿಕಿತ್ಸಾಲಯ ಸೇವೆ ಉದ್ಘಾಟನೆ
ಮೊಬೈಲ್ ಕ್ಲಿನಿಕ್‌ಗೆ ಹೈಟೆಕ್ ಆ್ಯಂಬ್ಯುಲೆನ್ಸ್ ಕೊಡುಗೆ ನೀಡಿದ ಮುಹಮ್ಮದ್ ಮೀರಾನ್ ಮಣೆಗಾರ್

ಭಟ್ಕಳ:  ಭಟ್ಕಳ: ಕರಾವಳಿ ಕರ್ನಾಟಕದ ಎನ್‌ಆರ್‌ಐ (NRI) ಫೋರಂ ತನ್ನ ಮೊದಲ ಮೊಬೈಲ್ ಕ್ಲಿನಿಕ್ (ಸಂಚಾರಿ ಚಿಕಿತ್ಸಾಲಯ ಸೇವೆ) ಅನ್ನು ಪ್ರಾರಂಭಿಸಿದೆ. ಶಿರೂರಿನ ಎಂಎಂ ರೆಸಾರ್ಟ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರವಿವಾರ ಈ ಸೇವೆಗೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಉಪಸ್ಥಿತರಿದ್ದರು.

ಅನಿವಾಸಿ ಭಾರತೀಯ ಮಹಮ್ಮದ್ ಮೀರಾನ್ ಮಣೆಗಾರ್ ಅವರು ಕೊಡುಗೆಯಾಗಿ ನೀಡಿದ ಹೈಟೆಕ್ ಆಂಬ್ಯುಲೆನ್ಸ್‌ನಲ್ಲಿ ನಿರ್ಮಿಸಲಾದ ಮೊಬೈಲ್ ಕ್ಲಿನಿಕ್ ಅನ್ನು ಜಿಲ್ಲಾಧಿಕಾರಿ ಉದ್ಘಾಟಿಸಿದರು.

ಗ್ರೀನ್ ವ್ಯಾಲಿ ಇಂಟರ್‌ನ್ಯಾಶನಲ್ ಸ್ಕೂಲ್‌ನ ಮ್ಯಾನೇಜಿಂಗ್ ಟ್ರಸ್ಟಿ ಮತ್ತು ಹಿರಿಯ ಉಪಾಧ್ಯಕ್ಷ ಮುಹಮ್ಮದ್ ಮೀರಾನ್ ಮಣೆಗಾರ್ ಅವರು ಮೊಬೈಲ್ ಕ್ಲಿನಿಕ್ ಕಲ್ಪನೆಯ ಬಗ್ಗೆ ಹಾಗೂ ಅದನ್ನು ಕಾರ್ಯರೂಪಕ್ಕೆ ತಂದ ಬಗ್ಗೆ ಮಾತನಾಡಿದರು. ಇದೇ ವೇಳೆ, ಈ ಯೋಜನೆಗೆ ಬೆಂಬಲ ನೀಡಿದಕ್ಕಾಗಿ ಯೂನಸ್ ಕಾಝಿಯಾ ಮತ್ತು ಎಸ್‌ಎಂ ಅರ್ಷದ್ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಸಂಚಾರಿ ಚಿಕಿತ್ಸಾಲಯ ಸೇವೆಯನ್ನು ಉದಾತ್ತ ಕಾರ್ಯವೆಂದು ಬಣ್ಣಿಸಿದ್ದು, ಸೇವೆಯನ್ನು ಆರಂಭಿಸಿದ ಸಂಸ್ಥೆಯನ್ನು ಅಭಿನಂದಿಸಿದರು.

ಮೀರನ್ ಮನೇಗಾರ್ ಕುರಿತು ಮಾತನಾಡಿದ ಜಿಲ್ಲಾಧಿಕಾರಿ, ಮನೇಗಾರ್‌ ಅವರು ಸಮಾಜಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದಾರೆ, ಅವರಂತಹ ಪರೋಪಕಾರಿಗಳನ್ನು ಹುಡುಕುವುದು ಕಷ್ಟ ಎಂದು ಹೇಳಿದರು.

ಜಮಾತುಲ್ ಮುಸ್ಲಿಮೀನ್ ಭಟ್ಕಳದ ಖಾಝಿಯಾಗಿರುವ ಮೌಲಾನಾ ಅಬ್ದುಲ್ ರಬ್ ನದ್ವಿ ಅವರು ಮಾತನಾಡಿ, ದಾನ ಕರ್ಮಗಳು ಮತ್ತು ಸಾಮಾಜಿಕ ಸೇವೆಗಳ ಮಹತ್ವದ ಕುರಿತು ವಿವರಿಸಿ, ವಿವಿಧ ಸಮುದಾಯಗಳನ್ನು ಒಂದುಗೂಡಿಸುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಹೇಳಿದರು. 

ಮರ್ಕಝಿ ಖಲೀಫಾ ಜಮಾತುಲ್ ಮುಸ್ಲಿಮೀನ್ ಭಟ್ಕಳದ ಖಾಝಿ ಮೌಲಾನಾ ಖಾಜಾ ಅಕ್ರಮಿ ಮದನಿ ಮಾತನಾಡಿ , ಮೊಬೈಲ್ ಕ್ಲಿನಿಕ್ ಯಶಸ್ವಿ ಯೋಜನೆಯಾಗಲಿ, ಹಾಗೂ ಇದು ಇಂತಹದ್ದೇ ರೀತಿಯ ಯೋಜನೆಗಳನ್ನು ಪ್ರಾರಂಭಿಸಲು ಇತರರಿಗೆ ಪ್ರೇರಣೆಯಾಗಲಿ ಎಂದು ಆಶಿಸಿದರು.

ಕರಾವಳಿ ಕರ್ನಾಟಕ ಎನ್‌ಆರ್‌ಐ ಫೋರಮ್‌ನ ಅಧ್ಯಕ್ಷ ಯೂನಸ್ ಕಾಜಿಯಾ ಅವರು ಮಾತನಾಡಿ,  ಈ ಪ್ರದೇಶದಲ್ಲಿ ಮೊಬೈಲ್ ಕ್ಲಿನಿಕ್ ಸೇವೆಯನ್ನು ಪ್ರಾರಂಭಿಸುವ ಉದ್ದೇಶದ ಬಗ್ಗೆ ಬೆಳಕು ಚೆಲ್ಲಿದರು ಮತ್ತು ಯೋಜನೆಗೆ ಆಂಬ್ಯುಲೆನ್ಸ್ ದೇಣಿಗೆ ನೀಡುವ ಮೂಲಕ ಉದಾರವಾಗಿ ಬೆಂಬಲಿಸಿದ್ದಕ್ಕಾಗಿ ಮೀರಾನ್ ಮನೇಗರ್ ಅವರಿಗೆ ಧನ್ಯವಾದ ಅರ್ಪಿಸಿದರು.

ವೇದಿಕೆಯ ಕಾರ್ಯದರ್ಶಿ ಅಮೀನ್ ಸೈಫುಲ್ಲಾ ಮಾತನಾಡಿ, ಸಂಚಾರಿ ಚಿಕಿತ್ಸಾಲಯವು ಜನರಿಗೆ ಒದಗಿಸುವ ವೈಶಿಷ್ಟ್ಯಗಳು ಮತ್ತು ಸೌಲಭ್ಯಗಳ ಕುರಿತು ವಿವರಿಸಿದರು.

ಭಟ್ಕಳ ಸಹಾಯಕ ಆಯುಕ್ತೆ ಮಮತಾದೇವಿ, ಖಾಜಿ ಜಮಾತುಲ್ ಮುಸ್ಲಿಮೀನ್ ಮಂಕಿ ಮೌಲಾನಾ ಶಕೀಲ್, ಭಟ್ಕಳ ಮುಸ್ಲಿಂ ಖಲೀಜ್ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿ ಅತೀಕುರ್ ರಹಮಾನ್ ಮುನಿರಿ, ಬಿಎಂಕೆಸಿ ಅಧ್ಯಕ್ಷ ಫಾರೂಕ್ ಮುಸ್ಬಾ, ಭಟ್ಕಳ ಟಿಎಂಸಿ ಅಧ್ಯಕ್ಷ ಪರ್ವೇಜ್ ಕಾಶಿಮಜಿ, ಭಟ್ಕಳ ಟಿಎಚ್‌ಒ ಡಾ. ಸವಿತಾ ಕಾಮತ್‌ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

share
Next Story
X