Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಚ್ಚನಾಡಿಯ ತ್ಯಾಜ್ಯದ ರಾಶಿಗೆ ಬೆಂಕಿ...

ಪಚ್ಚನಾಡಿಯ ತ್ಯಾಜ್ಯದ ರಾಶಿಗೆ ಬೆಂಕಿ ಬಿದ್ದ ಪ್ರಕರಣ: ಮಂಗಳೂರು ಮನಪಾ ಆಡಳಿತದ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆ

17 Jan 2023 7:11 PM IST
share
ಪಚ್ಚನಾಡಿಯ ತ್ಯಾಜ್ಯದ ರಾಶಿಗೆ ಬೆಂಕಿ ಬಿದ್ದ ಪ್ರಕರಣ: ಮಂಗಳೂರು ಮನಪಾ ಆಡಳಿತದ ನಿರ್ಲಕ್ಷ್ಯದ ವಿರುದ್ಧ ಪ್ರತಿಭಟನೆ

ಮಂಗಳೂರು: ನಗರ ಹೊರವಲಯದ ಪಚ್ಚನಾಡಿಯ ತ್ಯಾಜ್ಯದ ರಾಶಿಗೆ ಬೆಂಕಿ ಬಿದ್ದ ಪರಿಣಾಮ ದಟ್ಟ ಹೊಗೆಯಿಂದಾಗಿ ಸ್ಥಳೀಯರಿಗೆ ಅನಾರೋಗ್ಯ ಕಾಡುತ್ತಿದೆ ಎಂದು ಆರೋಪಿಸಿ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳ ನೇತೃತ್ವದಲ್ಲಿ ಮಂಗಳವಾರ  ಪಚ್ಚನಾಡಿಯ ಮಂಗಳಜ್ಯೋತಿ ಬಳಿ ಪ್ರತಿಭಟನೆ ನಡೆಯಿತು.

ಸಾಮಾಜಿಕ ಕಾರ್ಯಕರ್ತ ಎಂ.ಜಿ.ಹೆಗಡೆ ಮಾತನಾಡಿ ಇಲ್ಲಿನ ತ್ಯಾಜ್ಯರಾಶಿಗೆ ಪ್ರತೀ ವರ್ಷವೂ ಬೆಂಕಿ ಬೀಳುತ್ತದೆ. ಕಸದಿಂದ ದುಡ್ಡು ತಿನ್ನುವವರ ಮಾಫಿಯಾ ಇದಕ್ಕೆ ಕಾರಣವಾಗಿದೆ. ಹೊಗೆಯಿಂದ ಸ್ಥಳೀಯ ಜನರು ಆರೋಗ್ಯ ಸಮಸ್ಯೆಯಿಂದ ನರಳುತ್ತಿದ್ದರೂ ಕೂಡ ಸ್ಥಳೀಯಾಡಳಿತ, ಆರೋಗ್ಯ ಇಲಾಖೆಯ ಅಧಿಕಾರಿಗಳು ಇಲ್ಲಿನ ಮನೆಗೆ ಭೇಟಿ ನೀಡಿ ಸಮಸ್ಯೆ ಆಲಿಸುವ ಬಗ್ಗೆ ಕಾಳಜಿ ವಹಿಸಿಲ್ಲ ಎಂದು ಆರೋಪಿಸಿದರು.

ಹಣದ ಆಸೆಗಾಗಿ ಸ್ಥಳೀಯ ಪ್ರಾಣದ ಜತೆಗೆ ಚೆಲ್ಲಾಟವಾಡಲಾಗುತ್ತಿದೆ. ಈ ಸಮಸ್ಯೆಯ ವಿರುದ್ದ ಊರವರು, ಮಕ್ಕಳು ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸಿದಾಗ ತಡೆಯುವ ಪ್ರಯತ್ನ ನಡೆದಿದೆ. ಅನುಮತಿ ನೀಡದಂತೆ ಪೊಲೀಸ್ ಇಲಾಖೆಗೆ ಒತ್ತಡ ಹೇರಲಾಗಿದೆ. ಈ ಬಗ್ಗೆ ಸೂಕ್ತ ಕ್ರಮ ಜರಗಿಸದಿದ್ದರೆ ಶಾಸಕ ಡಾ.ಭರತ್ ಶೆಟ್ಟಿಯ ಮನೆ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಸ್ಥಳೀಯರಾದ ಹರೀಶ್ ಮಂಗಳನಗರ ಮಾತನಾಡಿ ಕಳೆದ 60 ವರ್ಷದಿಂದ ನಾವಿಲ್ಲಿ ವಾಸವಾಗಿದ್ದೇವೆ. ಬೆಂಕಿ ಬಿದ್ದು ಹೊಗೆ ಬೀಳುವ ಸಮಸ್ಯೆ ಪ್ರತೀವರ್ಷವೂ ನಡೆಯುತ್ತಲೇ ಇದೆ. ಮಂಗಳೂರು ಮನಪಾ ಇದಕ್ಕೆ ಶಾಶ್ವತ ಪರಿಹಾರವನ್ನು ಕೈಗೊಂಡಿಲ್ಲ. ಆರೋಗ್ಯ ಇಲಾಖೆಯವರು ಇಲ್ಲಿಯವರೆಗೆ ಬಂದಿಲ್ಲ. ಪಾಲಿಕೆಯವರು ಹಣವನ್ನು ಖರ್ಚು ಮಾಡಿದರೂ ಬೆಂಕಿ ಬೀಳುವುದನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಯಾಕೆಂದರೆ ಇದರಲ್ಲಿ ಮಾಫಿಯಾಗಳ ಕೈವಾಡವಿದೆ ಎಂದರು.

ತಿರುವೈಲು ವಾರ್ಡ್ ಕಮಿಟಿ ಸದಸ್ಯೆ ಹರಿಣಿ ಮಾತನಾಡಿ ಬೇರೆ ಬೇರೆ ಕಡೆಯಿಂದ ಕಸವನ್ನು ತಂದು ರಾಶಿ ಹಾಕಲಾಗುತ್ತಿದೆ. ಸೂಕ್ತ ರೀತಿಯಲ್ಲಿ ಕಸ ನಿರ್ವಹಣೆ ಮಾಡದ ಕಾರಣ ಈ ಸಮಸ್ಯೆ ತಲೆದೋರಿದೆ. ಪ್ರತೀ ವರ್ಷ ಎದುರಾಗುವ ಇಂತಹ ಸಮಸ್ಯೆಗೆ ಮನಪಾ ಆಡಳಿತವು ಇನ್ನಾದರೂ ಪರಿಹಾರ ಕಲ್ಪಿಸಲಿ ಎಂದು ಆಗ್ರಹಿಸಿದರು.

share
Next Story
X