Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದ.ಕ. ಜಿಲ್ಲೆಯಲ್ಲಿ ವೈರಲ್ ಜ್ವರ ಹಾವಳಿ

ದ.ಕ. ಜಿಲ್ಲೆಯಲ್ಲಿ ವೈರಲ್ ಜ್ವರ ಹಾವಳಿ

ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುತ್ತಿರುವ ಮಂಜು, ಶೀತಗಾಳಿ

18 Jan 2023 11:58 PM IST
share
ದ.ಕ. ಜಿಲ್ಲೆಯಲ್ಲಿ ವೈರಲ್ ಜ್ವರ ಹಾವಳಿ
ಆರೋಗ್ಯದ ಮೇಲೆ ಅಡ್ಡ ಪರಿಣಾಮ ಬೀರುತ್ತಿರುವ ಮಂಜು, ಶೀತಗಾಳಿ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ‘ವೈರಲ್ ಜ್ವರ’ದ ಹಾವಳಿ ಹೆಚ್ಚಾಗತೊಡಗಿದ್ದು, ಜನಸಾಮಾನ್ಯರನ್ನು ಕಂಗೆಡಿಸಿವೆ. ಮುಂಜಾನೆಯ ಮಂಜು, ಶೀತಗಾಳಿಯು ಆರೋಗ್ಯದ ಮೇಲೆ ಪರಿಣಾಮ ಬೀರತೊಡಗಿರುವುದಾಗಿ ವರದಿಯಾಗಿವೆ.

ಸಣ್ಣ ಮಕ್ಕಳಿಂದ ಹಿಡಿದು ಹಿರಿಯರ ಆರೋಗ್ಯದ ವಿಚಾರದಲ್ಲಿ ಹೆಚ್ಚು ಕಾಳಜಿ ವಹಿಸಿಕೊಳ್ಳಿ ಎಂಬ ಸಂದೇಶವನ್ನು ಆರೋಗ್ಯ ಇಲಾಖೆ ರವಾನಿಸತೊಡಗಿವೆ. ಅಲ್ಲಲ್ಲಿ ಮಾಹಿತಿ, ಜಾಗೃತಿ ನೀಡುವ ಕಾರ್ಯಕ್ರಮವನ್ನೂ ಆಯೋಜಿಸುತ್ತಿವೆ.

ಭಾರತೀಯ ಹವಾಮಾನ ಇಲಾಖೆಯು ಮುಂದಿನ ಒಂದು ವಾರ ಶೀತಗಾಳಿ ಇರಲಿವೆ ಎಂದು ಸೂಚಿಸಿದೆ. ಜ.19ರ ವೇಳೆಗೆ ಕನಿಷ್ಠ ತಾಪಮಾನ 14 ಡಿಗ್ರಿಗೆ ಬರುವ ಸಾಧ್ಯಯಿದೆ ಎಂದು ಮಾಹಿತಿ ನೀಡಿದೆ. ಚಳಿಯೊಂದಿಗೆ ದಟ್ಟ ಮಂಜು ಕವಿಯುವ ಸಾಧ್ಯತೆ ಇದೆ. ಹವಾಮಾನದ ಈ ಬದಲಾವಣೆಯಿಂದ ಜನಸಾಮಾನ್ಯರ ಆರೋಗ್ಯದಲ್ಲಿ ಏರುಪೇರುಗಳಾಗಲಿವೆ ಎಂದು ಆರೋಗ್ಯ ಇಲಾಖೆ ತಿಳಿಸಿವೆ.

ಸಾಮಾನ್ಯವಾಗಿ ಚಳಿಗಾಲದಲ್ಲಿ ಹವಾಮಾನದ ಬದಲಾವಣೆಯು ಆರೋಗ್ಯದ ಮೇಲೂ ಸಾಕಷ್ಟು ಪರಿಣಾಮ ಬೀರಲಿದೆ. ಆದರೆ ಕೆಲವು ವರ್ಷಗಳಲ್ಲಿ ಮಳೆ, ಚಳಿ, ಬೇಸಿಗೆ ಕಾಲ ಯಾವುದು ಎಂದು ತಿಳಿಯ ಲಾರದಷ್ಟು ಕರಾವಳಿಯಲ್ಲಿ ಬದಲಾವಣೆ ಕಂಡು ಬರುತ್ತಿರುವುದರಿಂದ ದ.ಕ.ಜಿಲ್ಲೆಯಲ್ಲಿ ವೈರಲ್ ಜ್ವರದ ಅಬ್ಬರ ಹಿಂದಿಗಿಂತಲೂ ಈ ಬಾರಿ ಹೆಚ್ಚಾಗಿವೆ. ಅದರಲ್ಲೂ ವಿದ್ಯಾರ್ಥಿಗಳಲ್ಲಿ ವೈರಲ್ ಜ್ವರದ ಪ್ರಮಾಣ ಏರಿಕೆಯಾಗಿದೆ. ಇದರಿಂದ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಗೈರುಹಾಜರಾಗುವ ಸನ್ನಿವೇಶ ಸೃಷ್ಟಿಯಾಗಿವೆ.

ಶೀತ, ಕೆಮ್ಮು, ಜ್ವರ, ಮೈಕೈನೋವು, ತಲೆನೋವು ಸಾಮಾನ್ಯ. ಆದರೆ ಈ ಬಾರಿ ಇದರ ಪ್ರಮಾಣ ಸ್ವಲ್ಪ ಹೆಚ್ಚಾಗಿವೆ. ಶೀತ ವಾತಾವರಣಕ್ಕೆ ಪೂರಕವಾದ ಆಹಾರಗಳನ್ನು ಸೇವಿಸುವ ಮೂಲಕ ವೈರಲ್ ಜ್ವರದಿಂದ ಅಲ್ಪಮಟ್ಟಿಗೆ ಪಾರಾಗಬಹುದು ಎಂದು ಮಕ್ಕಳ ವೈದ್ಯರೊಬ್ಬರು ಅಭಿಪ್ರಾಯಪಟ್ಟಿದ್ದಾರೆ.

ಮಂಗಳೂರು ನಗರ ವ್ಯಾಪ್ತಿಯಲ್ಲಿ ವೈರಲ್ ಜ್ವರದ ಪ್ರಮಾಣ ಅಷ್ಟೇನು ಜಾಸ್ತಿಯಾಗಿರುವ ಬಗ್ಗೆ ಮಾಹಿತಿಯಿಲ್ಲ. ಆದರೆ, ಸುಳ್ಯ, ಪುತ್ತೂರು, ಬೆಳ್ತಂಗಡಿ ಮತ್ತಿತರ ಕಡೆಗಳಲ್ಲಿ ಚಳಿ, ಮಂಜು, ಶೀತಗಾಳಿಯ ಪ್ರಮಾಣ ಹೆಚ್ಚಿವೆ. ಇದರಿಂದ ಹಿರಿಯರು, ಮಧ್ಯವಯಸ್ಕರಲ್ಲಿ ಮಾತ್ರವಲ್ಲ ಮಕ್ಕಳಲ್ಲೂ ಕೂಡ ವೈರಲ್ ಜ್ವರ ಕಾಣಿಸಿಕೊಂಡಿದ್ದು, ಶಾಲೆಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆ ಇದೆ.
ಕೆ.ಸುಧಾಕರ, ಡಿಡಿಪಿಐ

ಸಾಮಾನ್ಯವಾಗಿ ಚಳಿಗಾಲದಲ್ಲಿ ಮೂಗು ಮುಚ್ಚಲ್ಪಟ್ಟಿರುತ್ತವೆ. ಹೆಚ್ಚಾಗಿ ಉಸಿರಾಟವನ್ನು ಬಾಯಿ ಮೂಲಕ ಮಾಡುವುದರಿಂದ ಬ್ಯಾಕ್ಟೀರಿಯಾ ಪ್ರಮಾಣವು ದೇಹ ಸೇರಿಕೊಂಡು ಆರೋಗ್ಯದಲ್ಲಿ ಏರುಪೇರಾಗುತ್ತದೆ. ಚಳಿಗಾಲದಲ್ಲಿ ವೈರಲ್ ಜ್ವರದ ಪ್ರಮಾಣವೂ ಹೆಚ್ಚಾಗಿರುತ್ತದೆ. ಮಕ್ಕಳು ಮತ್ತು ಹಿರಿಯರಲ್ಲಿ ವೈರಲ್ ಜ್ವರದ ಪ್ರಮಾಣ ಹೆಚ್ಚಿರುತ್ತದೆ.
ಡಾ.ಕಿಶೋರ್ ಕುಮಾರ್ ಎಂ.,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾಧಿಕಾರಿ, ದ.ಕ. ಜಿಲ್ಲೆ

share
Next Story
X