ಕೊಣಾಜೆ: ಅಪಘಾತವೆಸಗಿ ಪರಾರಿಯಾಗಲು ಯತ್ನಿಸುವ ವೇಳೆ ಹೊಂಡಕ್ಕೆ ಉರುಳಿ ಬಿದ್ದ ಕಾರು
ಕೊಣಾಜೆ: ಆಲ್ಟೋ ಕಾರು ಚಲಾಯಿಸಿಕೊಂಡು ಬರುತ್ತಿದ್ದ ವ್ಯಕ್ತಿಯೋರ್ವ ಇನೋವಾ ಕಾರೊಂದಕ್ಕೆ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗುತ್ತಿದ್ದ ಸಂದರ್ಭದಲ್ಲಿ ಆಲ್ಟೊ ಕಾರು ರಸ್ತೆಬದಿಯ ಹೊಂಡಕ್ಕೆ ಉರುಳಿ ಬಿದ್ದ ಘಟನೆ ಗುರುವಾರ ರಾತ್ರಿ ನಡೆದಿದೆ.
ಡಾ. ಮಹಾಲಿಂಗೇಶ್ವರ ಭಟ್ ಕೆ. ಪಿ ಎಂಬವರು ಇನ್ನೋವಾ ಕಾರು ಮೂಲಕ ಉಪ್ಪಿನಂಗಡಿಯಿಂದ ಮೆಲ್ಕಾರ್ ಮಾರ್ಗವಾಗಿ ದೇರಳಕಟ್ಟೆಗೆ ಬರುತ್ತಿದ್ದು, ರಾತ್ರಿ ಅರ್ಕಾನ ಸರ್ಕಾರಿ ಪ್ರಾಥಮಿಕ ಶಾಲೆ ಬಳಿ ತಲಪುತ್ತಿದಂತೆ ಅದೇ ಮಾರ್ಗವಾಗಿ ಬರುತ್ತಿದ್ದ ಆಲ್ಟೋ ಕಾರು ಚಾಲಕ ಚೇತನ ಕುಮಾರ್ ಎಂಬಾತ ಇನ್ನೋವಾ ಕಾರಿನ ಹಿಂಬದಿಗೆ ಢಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಲು ಪ್ರಯತ್ನಿಸಿದ್ದನು ಎನ್ನಲಾಗಿದೆ. ಆದರೆ ಈ ಸಂದರ್ಭದಲ್ಲಿ ಮುಂದೆ ಹೋಗಿ ಕಾರು ಚರಂಡಿಗೆ ಬಿದ್ದಿದೆ. ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ ಎಂದು ತಿಳಿದು ಬಂದಿದೆ.
ಈ ಬಗ್ಗೆ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ನಾವು ಕರಾವಳಿಯನ್ನು ಹಿಂದುತ್ವ ಪ್ರಯೋಗ ಶಾಲೆ ಮಾಡಲು ಹೊರಟಿಲ್ಲ: ಸಿಎಂ ಬೊಮ್ಮಾಯಿ
Next Story