ಫೆ.3ರಿಂದ 12ರವರೆಗೆ ಕಾಜೂರು ಉರೂಸ್
-

ಬೆಳ್ತಂಗಡಿ: ನಾಡಿನ ಸರ್ವಧರ್ಮೀಯರ ಸಮನ್ವಯ ಕೇಂದ್ರವಾಗಿರುವ ಇತಿಹಾಸ ಪ್ರಸಿದ್ಧ ಕಾಜೂರು ಮಖಾಂ ಶರೀಫ್ ನಲ್ಲಿ ಈ ವರ್ಷದ ಉರೂಸ್ ಮಹಾ ಸಂಭ್ರಮವು ಫೆ.3 ರಿಂದ ಆರಂಭಗೊಂಡು ಫೆ.12ರವರೆಗೆ ವೈಶಿಷ್ಟ್ಯಪೂರ್ಣ ಮೂಲಕ ನಡೆಯಲಿದೆ ಎಂದು ಸಮಿತಿ ಅಧ್ಯಕ್ಷ ಉರೂಸ್ ಸಮಿತಿ ಅಧ್ಯಕ್ಷ ಕೆ.ಯು.ಇಬ್ರಾಹಿಂ ಕಾಜೂರು ತಿಳಿಸಿದ್ದಾರೆ.
ಸೋಮವಾರ ಬೆಳ್ತಂಗಡಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉರೂಸ್ ಪ್ರಯುಕ್ತ 10 ದಿವಸಗಳಲ್ಲಿ ಪ್ರಖ್ಯಾತ ವಿದ್ವಾಂಸರಿಂದ ಧಾರ್ಮಿಕ ಪ್ರವಚನಗಳು, ಸರ್ವಧರ್ಮೀಯರ ಸಂಗಮ ಹಾಗೂ ಅನ್ನದಾನ ಇತ್ಯಾದಿಗಳಿಗಾಗಿ ಅಭೂತಪೂರ್ವ ತಯಾರಿ ನಡೆಸಲಾಗಿದೆ ಎಂದರು.
ಕಾಜೂರು ಗೌರವಾಧ್ಯಕ್ಷ ಸೈಯದ್ ಕುಂಬೋಳ್ ತಂಙಳ್, ಖಾಝಿ ಸೈಯದ್ ಕೂರತ್ ತಂಙಳ್, ಸೈಯದ್ ಕಾಜೂರು ತಂಙಳ್ ಅವರ ಮಾರ್ಗದರ್ಶನ ಮತ್ತು ನೇತೃತ್ವದಲ್ಲಿ ಕಾರ್ಯಕ್ರಮಗಳು ನಡೆಯಲಿವೆ. ಸಂಪ್ರದಾಯದಂತೆ ಫೆ.3ರಂದು ಕಿಲ್ಲೂರು ಜಮಾಅತ್ ನಿಂದ ಸಂದಲ್ ಮೆರವಣಿಗೆ ಆಗಮಿಸಿ, ಧ್ವಜಾರೋಹಣವನ್ನು ಉರೂಸ್ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ನೆರವೇರಿಸಲಿದ್ದಾರೆ. ಖಾಝಿ ಸೈಯದ್ ಕೂರತ್ ತಂಙಳ್ ಉಪಸ್ಥಿತಿಯಲ್ಲಿ ತಾಲೂಕು ಸುನ್ನೀ ಸಂಯುಕ್ತ ಜಮಾಅತ್ ಸಹಾಯಕ ಖಾಝಿ ಸೈಯದ್ ಸಾದಾತ್ ತಂಙಳ್ ಉದ್ಘಾಟನೆ ನಡೆಸಲಿದ್ದಾರೆ. ಇಸ್ಮಾಯಿಲ್ ತಂಙಳ್ ಸಹಿತ ಇತರ ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಅಂದು ರಾತ್ರಿ ಅಬ್ದುಲ್ ಲತೀಫ್ ಸಖಾಫಿ ಕಾಂತಪುರಂ ನೇತೃತ್ವದಲ್ಲಿ "ಮದನಿಯಂ ಮಜ್ಲಿಸ್", ಫೆ. 4ರಂದು ರಾತ್ರಿ ಕಾಜೂರು ತಂಙಳ್ ಉದ್ಘಾಟನೆಯ ಬಳಿಕ ಕಿಲ್ಲೂರು ಖತೀಬ್ ಬಿ.ಎಂ ಉಮರ್ ಅಶ್ರಫಿ ಮತಪ್ರವಚನ ನಡೆಸಲಿದ್ದಾರೆ. ಫೆ.5ರಂದು ಇಸ್ಲಾಮಿಕ್ ವಿಶಿಷ್ಟ ಸಾಂಸ್ಕೃತಿಕ ಕಾರ್ಯಕ್ರಮಗಳಾದ ಅರಬಾನ, ನಹತ್, ಕವಾಲಿ,ರಿಫಾಯಿ ನಶೀದ, ದಫ್ಫ್ ಒಳಗೊಂಡ ಕೇರಳ ಸರಕಾರದ 'ಫ್ಲಾಕ್ಲೋರ್ ಅಕಾಡಮಿ' ಉಪಾಧ್ಯಕ್ಷ ಡಾ. ಉಸ್ತಾದ್ ಕೋಯಕಾಪಾಡ್ ನೇತೃತ್ವದಲ್ಲಿ ವಿಶೇಷ ಕಾರ್ಯಕ್ರಮ "ಇಶಲ್ ಪೋರಿಸ" ನಡೆಯಲಿದೆ. ಫೆ. 6ರಂದು ದಾರುಸ್ಸಲಾಂ ಬೆಳ್ತಂಗಡಿ ಚೇರ್ಮನ್ ಸೈಯದ್ ಝೈನುಲ್ ಆಬಿದೀನ್ ಜಿಫ್ರಿ ತಂಙಳ್ ಉಪಸ್ಥಿತಿಯಲ್ಲಿ ಹನೀಫ್ ನಿಝಾಮಿ ಕಾಸರಗೋಡು, ಫೆ.7 ರಂದು ರಫೀಕ್ ಸಅದಿ ದೇಲಂಪಾಡಿ ಉಪನ್ಯಾಸ ನಡೆಸಿಕೊಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಫೆ.8ರಂದು ಕಾಜೂರು ಮಹಿಳಾ ಶರೀಅತ್ ಕಾಲೇಜಿನ ಪ್ರಥಮ ಧಾರ್ಮಿಕ ಪದವಿ ಪ್ರದಾನ ಕಾರ್ಯಕ್ರಮ ನಡೆದು, ಖಾಝಿ ಮಾಣಿ ಉಸ್ತಾದ್,ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ ಉಪಸ್ಥಿತಿಯಲ್ಲಿ ನೌಫಲ್ ಸಖಾಫಿ ಕಳಸ ಪ್ರವಚನ ನಡೆಸಿಕೊಡಲಿದ್ದಾರೆ. ಫೆ.9ರಂದು ಬೃಹತ್ ದಿಕ್ರ್ ಮಜ್ಲಿಸ್ ಅಧ್ಯಾತ್ಮಿಕ ಸಂಗಮ ನಡೆಯಲಿದ್ದು, ಕಡಲುಂಡಿ ಶಿಹಾಬುದ್ದೀನ್ ಅಲ್ ಬುಖಾರಿ ತಂಙಳ್, ವಾದಿ ಇರ್ಫಾನ್ ತಂಙಳ್, ಗಂಜಿಮಠ ಅಸ್ಕರ್ ಬಿನ್ ಜಾನ್ ತಂಙಳ್, ಬೆಳಾಲು ತಂಙಳ್, ಎಸ್.ಎಂ ತಂಙಳ್, ಗುಲ್ರೇಝ್ ಅಹಮ್ಮದ್ ರಝ್ವಿ ಬೆಳ್ತಂಗಡಿ ಸಹಿತ ವಿದ್ವಾಂಸರು ಭಾಗವಹಿಸಲಿದ್ದಾರೆ. ಫೆ. 10ರಂದು ಮುತಅಲ್ಲಿಂ ಮತ್ತು ಉಲಮಾ ಸಮಾವೇಶ ನಡೆಯಲಿದ್ದು, ಕೆ.ಸಿ. ರೋಡ್ ಉಸ್ತಾದ್ ಮುಖ್ಯ ಪ್ರಭಾಷಣ ನಡೆಸಲಿದ್ದಾರೆ. ಹಿರಿಯ ಧಾರ್ಮಿಕ ವಿದ್ವಾಂಸರು ಭಾಗಿಯಾಗಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಫೆ.11 ರಂದು ಪುಲ್ಲಾರ ಲುಕ್ಮಾನುಲ್ ಹಕೀಂ ಸಖಾಫಿ ಉಪನ್ಯಾಸ ನಡೆಯಲಿದೆ. ಫೆ.12 ರಂದು ಬೆಳಿಗ್ಗೆ ಸೈಯದ್ ಕುಂಬೋಳ್ ತಂಙಳ್ ಅಧ್ಯಕ್ಷತೆಯಲ್ಲಿ ಕಾಜೂರು ಮೌಲೀದ್, ಸಂದಲ್ ಮೆರವಣಿಗೆ, ಸಾಮೂಹಿಕ ಪ್ರಾರ್ಥನೆ, ಇತ್ಯಾಧಿ ನಡೆದು , ಇಳಿಸಂಜೆ ಸರ್ವಧರ್ಮೀಯರ ಸೌಹಾರ್ದ ಸಂಗಮ ನಡೆಯಲಿದೆ. ಉದ್ಘಾಟನೆಯನ್ನು ಯೆನಪೋಯ ವಿವಿ ಕುಲಪತಿ ವೈ ಅಬ್ದುಲ್ಲಕುಂಞಿ ನಡೆಸಿದರೆ ಅಧ್ಯಕ್ಷತೆಯನ್ನು ವಕ್ಫ್ ಮಂಡಳಿ ರಾಜ್ಯಾಧ್ಯಕ್ಷ ಮೌಲಾನಾ ಎನ್ಕೆಎಮ್ ಶಾಫಿ ಸಅದಿ ವಹಿಸಲಿದ್ದಾರೆ. ಶಾಸಕ ಹರೀಶ್ ಪೂಂಜ, ಸಂಸದ ನಳಿನ್ ಕುಮಾರ್ ಕಟೀಲು, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಬಿ.ಕೆ ಹರಿಪ್ರಸಾದ್ ಮುಖ್ಯ ಅತಿಥಿಗಳಾಗಿ ಭಾಗಿಯಾಗಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಅಬ್ದುಲ್ ಅಝೀಝ್ ದಾರಿಮಿ, ವಿಧಾನ ಸಭೆಯ ಪ್ರತಿಪಕ್ಷದ ಉಪನಾಯಕ ಯು.ಟಿ ಖಾದರ್, ಎಂ.ಎಲ್ಸಿ ಬಿ.ಎಮ್ ಫಾರೂಕ್, ಮಾಜಿ ಸಚಿವ ಬಿ.ಝೆಡ್ ಝಮೀರ್ ಅಹಮ್ಮದ್ ಖಾನ್, ಜಿಲ್ಲಾ ವಕ್ಫ್ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್, ಅಲ್ ಇಂಡಿಯಾ ಕ್ಯಾಥಲಿಕ್ ಯೂನಿಯನ್ ರಾಜ್ಯಾಧ್ಯಕ್ಷ ಎಡ್ವಕೇಟ್ ಸೇವಿಯರ್ ಪಾಲೇಲಿ, ಡಾ. ಮುರಳಿಕೃಷ್ಣ ಇರ್ವತ್ರಾಯ ಸಂದೇಶ ನೀಡಲಿದ್ದಾರೆ. ವಿಧಾನ ಪರಿಷತ್ ಶಾಸಕರಾದ ಹರೀಶ್ ಕುಮಾರ್ ಮತ್ತು ಪ್ರತಾಪಸಿಂಹ ನಾಯಕ್, ಮಾಜಿ ಶಾಸಕ ವಸಂತ ಬಂಗೇರ, ಮೊಯಿದಿನ್ ಬಾವಾ, ಮಾಜಿ ಸಚಿವ ಕೆ ಗಂಗಾಧರ ಗೌಡ, ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಂ, ಮಂಮ್ತಾಝ್ ಅಲಿ, ಇನಾಯತ್ ಅಲಿ, ಬಿ.ಎಂ ಹಮೀದ್ ಹಾಜಿ ಉಜಿರೆ, ಬಿಜೆಪಿ ಮಂಡಲದ ಅಧ್ಯಕ್ಷ ಜಯಂತ ಕೋಟ್ಯಾನ್, ಕಾಜೂರು ಶಿಕ್ಷಣ ಸಂಸ್ಥೆಗಳ ಅಕಾಡಮಿಕ್ ಡೈರೆಕ್ಟರ್ ಅಬೂಬಕ್ಕರ್ ಸಿದ್ದೀಕ್ ಮೋಟುಗೋಳಿ, ವಕ್ಫ್ ಬೋರ್ಡ್ ಜಿಲ್ಲಾ ಉಪಾಧ್ಯಕ್ಷ ಫಕೀರಬ್ಬ ಮರೋಡಿ ಸಹಿತ ಪ್ರಮುಖ ಗಣ್ಯರುಗಳು, ವಕ್ಫ್ ಸದಸ್ಯರು ಮತ್ತು ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಅಂದೇ ರಾತ್ರಿ ವಿಶ್ವಪ್ರಸಿದ್ಧ ಧಾರ್ಮಿಕ ಪಂಡಿತ, ಕೇರಳ ರಾಜ್ಯದ ಸೈಯದ್ ಕಡಲುಂಡಿ ತಂಙಳ್ ನೇತೃತ್ವದಲ್ಲಿ ಉರೂಸ್ ಸಮಾರೋಪ ನಡೆಯಲಿದ್ದು, ಸೈಯದ್ ಕಾಜೂರು ತಂಙಳ್, ಡಾ. ಕಾವಳಕಟ್ಟೆ ಹಝ್ರತ್, ಮರ್ಹೂಮ್ ಕಾಜೂರು ತಂಙಳ್ ಸಹೋದರ ಸೈದಲವಿ ಕೋಯ ಜಮಲುಲ್ಲೈಲಿ ತಂಙಳ್ ಸೇರಿದಂತೆ ಅವರ ಕುಟುಂಬದ ಸದಸ್ಯರು, ಎಸ್ವೈಎಸ್ ರಾಜ್ಯಾಧ್ಯಕ್ಷ ಡಾ. ಝೈನಿ ಕಾಮಿಲ್ ಸಖಾಫಿ, ಕಣಚೂರು ಮೋನು ಹಾಜಿ ಸಹಿತ ಪ್ರಮುಖರು ಭಾಗವಹಿಸಲಿದ್ದಾರೆ. ಡಾ. ಮುಹಮ್ಮದ್ ಕುಂಞಿ ಸಖಾಫಿ ಕೊಲ್ಲಂ ಕೇರಳ ಮತಪ್ರವಚನ ನಡೆಸಲಿದ್ದಾರೆ.ಉರೂಸಿನ ಎಲ್ಲಾ ದಿನಗಳಲ್ಲೂ ಮಧ್ಯಾಹ್ನ ಅನ್ನದಾನ ಹಾಗೂ ಉರೂಸ್ ಸಮಾರೋಪ ದಿನದಂದು ಮಹಾ ಅನ್ಮದಾನ ನಡೆಯಲಿದೆ ಎಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಊರೂಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಜೆ.ಹೆಚ್. ಅಬೂಬಕರ್ ಸಿದ್ದೀಕ್ ಕಾಜೂರು, ಉರೂಸ್ ಸಮಿತಿ ಕೋಶಾಧಿಕಾರಿ ಕೆ.ಎಮ್. ಮುಹಮ್ಮದ್ ಕಮಾಲ್ ಕಾಜೂರು, ಕಿಲ್ಲೂರು ಮಸ್ಜಿದ್ನ ವಕ್ಫ್ ನಿಯೋಜಿತ ಆಡಳಿತಾಧಿಕಾರಿ ಮುಹಮ್ಮದ್ ರಫಿ, ಕಿಲ್ಲೂರು ಮಸ್ಜಿದ್ ಮಾಜಿ ಅಧ್ಯಕ್ಷ ಎಂ.ಎ ಕಾಸಿಂ ಮಲ್ಲಿಗೆಮನೆ ಹಾಗೂ ಇತರರು ಉಪಸ್ಥಿತರಿದ್ದರು.


‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.