Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊಲೆಯ ಸೂತ್ರಧಾರನ ವಿರುದ್ಧ ಪೊಲೀಸರು...

ಕೊಲೆಯ ಸೂತ್ರಧಾರನ ವಿರುದ್ಧ ಪೊಲೀಸರು ಕ್ರಮ ಜರಗಿಸಲಿ: ಫಾಝಿಲ್ ತಂದೆ ಒತ್ತಾಯ

30 Jan 2023 6:41 PM IST
share
ಕೊಲೆಯ ಸೂತ್ರಧಾರನ ವಿರುದ್ಧ ಪೊಲೀಸರು ಕ್ರಮ ಜರಗಿಸಲಿ: ಫಾಝಿಲ್ ತಂದೆ ಒತ್ತಾಯ

ಮಂಗಳೂರು: ನನ್ನ ಮಗ ಫಾಝಿಲ್‌ನ ಕೊಲೆಕೃತ್ಯದ ಸೂತ್ರಧಾರ ಯಾರೂಂತ ಈಗ ಬಹಿರಂಗವಾಗಿದೆ. ಹಾಗಾಗಿ ಪೊಲೀಸರು ಇನ್ನಾದರು ಸೂಕ್ತ ಕ್ರಮ ಜರಗಿಸಲಿ ಎಂದು ಮಂಗಳಪೇಟೆಯ ಉಮರ್ ಫಾರೂಕ್ ಒತ್ತಾಯಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಮಂಗಳೂರು ನಗರ ಪೊಲೀಸ್ ಕಮಿಷನರ್‌ಗೆ ಸೋಮವಾರ ಮನವಿ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ತುಮಕೂರಿನಲ್ಲಿ ನಡೆದ ‘ಶೌರ್ಯಯಾತ್ರೆ’ ಕಾರ್ಯಕ್ರಮದಲ್ಲಿ ವಿಹಿಂಪ ಮುಖಂಡ ಶರಣ್ ಪಂಪ್‌ವೆಲ್ ಮಾತನಾಡುತ್ತಾ ಪ್ರವೀಣ್ ನೆಟ್ಟಾರ್ ಹತ್ಯೆಗೆ ಪ್ರತೀಕಾರವಾಗಿ ಫಾಝಿಲ್‌ನನ್ನು ಕೊಲೆ ಮಾಡಲಾಗಿದೆ ಎಂದು ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಫಾಝಿಲ್‌ನನ್ನು ಕೊಲೆಗೈದು 6 ತಿಂಗಳಾಗಿದೆ. ಅಂದಿನಿಂದಲೂ ಈ ಕೊಲೆಯ ಹಿಂದೆ ಬೇರೆಯೇ ಜನರಿದ್ದಾರೆ ಎಂದು ನಾನು ಹೇಳುತ್ತಾ ಬಂದಿದ್ದೆ. ಅದೀಗ ಬಹಿರಂಗಗೊಂಡಿವೆ. ಹಾಗಾಗಿ ಪೊಲೀಸರು ಶರಣ್ ಪಂಪ್‌ವೆಲ್ ವಿರುದ್ಧ ಸೂಕ್ತ ಕ್ರಮ ಜರಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಪೊಲೀಸ್ ಆಯುಕ್ತರು ಲೀಗಲ್ ಸಲಹೆ ಪಡೆದು ಮುಂದಿನ ಕ್ರಮ ಜರಗಿಸುವುದಾಗಿ ಹೇಳಿದ್ದಾರೆ. ಅವರು ಏನು ಮಾಡುತ್ತಾರೋ ಗೊತ್ತಿಲ್ಲ. ಫಾಝಿಲ್‌ನ ತಂದೆಯಾಗಿ ನಾನು ನನ್ನ ಕರ್ತವ್ಯವನ್ನು ಮಾಡುತ್ತೇನೆ. ಸುರತ್ಕಲ್ ಠಾಣೆಗೆ ದೂರು ನೀಡುತ್ತೇನೆ. ಮಂಗಳೂರು ಉತ್ತರ ಎಸಿಪಿ ಅವರನ್ನೂ ಭೇಟಿಯಾಗುತ್ತೇನೆ. ನನ್ನ ಹಿಂದೆ ಎಲ್ಲರೂ ಇದ್ದಾರೆ. ಯಾರೂ ಕೈಬಿಟ್ಟಿಲ್ಲ. ಎಲ್ಲರ ಸಹಕಾರ ಪಡೆದು ಕಾನೂನು ಹೋರಾಟ ಮಾಡುವೆ ಎಂದು ಉಮರ್ ಫಾರೂಕ್ ಹೇಳಿದ್ದಾರೆ.

ಪೊಲೀಸರು ಆತನನ್ನು ಗಡಿಪಾರು ಮಾಡಬೇಕು. ರಾಜ್ಯ ಬಿಜೆಪಿ ಸರಕಾರವೂ ಪೊಲೀಸರ ತನಿಖೆಗೆ ಅಡ್ಡಿಪಡಿಸಬಾರದು ಎಂದು ಉಮರ್ ಫಾರೂಕ್ ಮನವಿ ಮಾಡಿದ್ದಾರೆ.

ಸೂಕ್ತ ಕ್ರಮಕೈಗೊಳ್ಳುವಂತೆ ಫಾಝಿಲ್‌ನ ತಂದೆ ಮನವಿ ಸಲ್ಲಿಸಿದ್ದಾರೆ. ಮುಂದಿನ ಕ್ರಮದ ಬಗ್ಗೆ ಕಾನೂನು ಸಲಹೆ ಪಡೆಯಲಾಗುವುದು ಎಂದು ಪೊಲೀಸ್ ಆಯುಕ್ತ ಶಶಿಕುಮಾರ್ ಪ್ರತಿಕ್ರಿಯಿಸಿದ್ದಾರೆ.

share
Next Story
X