Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೊಂಕಣಿ ಭಾಷಿಗರನ್ನು ಒಂದುಗೂಡಿಸುವ...

ಕೊಂಕಣಿ ಭಾಷಿಗರನ್ನು ಒಂದುಗೂಡಿಸುವ ನಿಟ್ಟಿನಲ್ಲಿ ವಿಶ್ವ ಕೊಂಕಣಿ ಕೇಂದ್ರ ಮಹತ್ವದ ಹೆಜ್ಜೆ:ಗೋವಾ ಸಿಎಂ ಪ್ರಮೋದ್ ಸಾವಂತ್

8 Feb 2023 11:57 PM IST
share
ಕೊಂಕಣಿ ಭಾಷಿಗರನ್ನು ಒಂದುಗೂಡಿಸುವ ನಿಟ್ಟಿನಲ್ಲಿ ವಿಶ್ವ ಕೊಂಕಣಿ ಕೇಂದ್ರ ಮಹತ್ವದ ಹೆಜ್ಜೆ:ಗೋವಾ ಸಿಎಂ ಪ್ರಮೋದ್ ಸಾವಂತ್

ಮಂಗಳೂರು, ಫೆ.8: ವಿಶ್ವಾದ್ಯಂತ ಹಂಚಿಹೋಗಿರುವ ಕೊಂಕಣಿ ಭಾಷಿಗರನ್ನು ಒಂದುಗೂಡಿಸುವ ನಿಟ್ಟಿನಲ್ಲಿ ಮತ್ತು ಭಾಷೆ ಸಂಸ್ಕೃತಿ ಉಳಿವಿಗಾಗಿ ಬಸ್ತಿ ವಾಮನ ಶೆಣೈ ನೇತೃತ್ವದ ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರ ಮಹತ್ವದ ಹೆಜ್ಜೆ ಎಂದು ಗೋವಾ ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅವರು ಇಂದು ಶಕ್ತಿನಗರದ ವಿಶ್ವ ಕೊಂಕಣಿ ಕೇಂದ್ರದಲ್ಲಿ ಬಸ್ತಿ ವಾಮನ ಶೆಣೈ ಪ್ರತಿಮೆ ಅನಾವರಣ, ಕೇಂದ್ರದ ಸಭಾಂಗಣ, ವಸ್ತು ಪ್ರದರ್ಶನ ಸಭಾಂಗಣ ವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕೊಂಕಣಿ ಭಾಷೆಯ ಬೆಳವಗೆಯಲ್ಲಿ ಕೊಂಕ ಚಲನಚಿತ್ರ, ನಾಟಕ, ಇನ್ನಿತರ ಸಾಹಿತ್ಯ ಪ್ರಕಾರಗಳ ಪಾತ್ರವಿದೆ. ಕೊಂಕಣಿ ಭಾಷಾ ಬೆಳವಗೆಗೆ ಶಿಕ್ಷಣ ದಲ್ಲಿ ಪದವಿ ಹಂತದಲ್ಲಿ ತೃತೀಯ ಭಾಷೆಯಾಗಿ ಓದಲು ಅವಕಾಶವಿದೆ. ದೇಶದ ಅಭಿವೃದ್ಧಿಯಲ್ಲಿ ಭಾಷೆಯ ಬೆಳವಣಿಗೆ, ಸಂಸ್ಕೃತಿಯ ಬೆಳವಣಿಗೆಯೂ ಮುಖ್ಯವಾಗಿದೆ ಎಂದ ಅವರು, ಗೋವಾದಲ್ಲಿ ವಿಶ್ವ ಕೊಂಕ ಸಮ್ಮೇಳನ ನಡೆಸಲು ಸಹಕಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ವಿಶ್ವ ಕೊಂಕಣಿ ಕೇಂದ್ರದ ಪೋಷಕ ಡಾ.ದಯಾನಂದ ಪೈ ಮಾತನಾಡಿ, ಬಸ್ತಿ ವಾಮನ ಶೆಣೈಯವರ ಮೂಲಕ ಕೊಂಕಣಿ ಭಾಷೆ, ಸಾಹಿತ್ಯ ಸಂಸ್ಕೃತಿಯ ಬೆಳಣಿಗೆಗೆ ಕೊಡುಗೆ ನೀಡಲು ಸ್ಥಾಪನೆಗೊಂಡ ಕೇಂದ್ರ ಅದರಂತೆ ಮುಂದುವರಿಯುವಂತಾಗಲಿ ಮತ್ತು ಶಿಕ್ಷಣಕ್ಕಾಗಿ ಪ್ರೋತ್ಸಾಹ ನೀಡಲು ಕರೆ ನೀಡಿದರು.

ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು, ಶಾಸಕ ವೇದವ್ಯಾಸ ಕಾಮತ್, ವಿಶ್ವ ಕೊಂಕಣಿ ಕೇಂದ್ರದ ಪೋಷಕರಾದ ಉಲ್ಲಾಸ್ ಕಾಮತ್, ಮೈಕಲ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು. ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ನಂದಗೋಪಾಲ್ ಶೆಣೈ ಸ್ವಾಗತಿಸಿದರು.

ಪ್ರದೀಪ್ ಜಿ. ಪೈ ವಂದಿಸಿದರು. ಸಮಾರಂಭದಲ್ಲಿ ಸಭಾಂಗಣ ಮತ್ತು ವಸ್ತು ಪ್ರದರ್ಶನ ಕೊಠಡಿಗಳ ಕೊಡುಗೆ ನೀಡಿದ ನಂದಗೋಪಾಲ್ ದಂಪತಿ, ಡಾ.ರಮೇಶ್ ನಾಯಕ್ ಮೈರಾ ಅವರನ್ನು ಸಭಾಂ ಗಣದಲ್ಲಿ ಸನ್ಮಾನಿಸಲಾಯಿತು. ವಿನ್ಯಾಸಕಾರ ದಿನೇಶ್ ಶೇಟ್, ಗುತ್ತಿಗೆದಾರ ಸುಧೀರ್ ಶೆಣೈ, ಒಳಾಂಗಣ ವಿನ್ಯಾಸಕಾರ ಬಸ್ತಿ ಮಿಲಿಂದ್ ಶೆಣೈ ಮೊದಲಾದ ವರನ್ನು ಗೌರವಿಸಲಾಯಿತು.

share
Next Story
X