Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಣ್ಣಿನ ಕಂಪಿನಲ್ಲಿ ಅರಳಿದ ಸಾಹಿತ್ಯ...

ಮಣ್ಣಿನ ಕಂಪಿನಲ್ಲಿ ಅರಳಿದ ಸಾಹಿತ್ಯ ಶ್ರೇಷ್ಠ: ಡಾ.ಗಣೇಶ್ ಅಮೀನ್ ಸಂಕಮಾರ್

’ಪೆರ್ಗದ ಸಿರಿ’ ಬಿಡುಗಡೆ

19 March 2023 11:09 PM IST
share
ಮಣ್ಣಿನ ಕಂಪಿನಲ್ಲಿ ಅರಳಿದ ಸಾಹಿತ್ಯ ಶ್ರೇಷ್ಠ: ಡಾ.ಗಣೇಶ್ ಅಮೀನ್ ಸಂಕಮಾರ್
’ಪೆರ್ಗದ ಸಿರಿ’ ಬಿಡುಗಡೆ

ಮಂಗಳೂರು : ಗ್ರಾಮೀಣ ಪ್ರದೇಶದಲ್ಲಿ ಹುಟ್ಟಿ ಬೆಳೆದವರಲ್ಲಿ ಸಾಹಸ ಹಾಗೂ ಸಾಹಿತ್ಯದ ಗುಣ ಅಡಕವಾಗಿರು ತ್ತದೆ. ಅದು ಬರವಣಿಗೆಗೆ ಪೂರಕ. ಬೆವರು ಅದ್ದಿದ ಮಣ್ಣಿನಲ್ಲಿ ಹುಟ್ಟಿದ ಸಾಹಿತ್ಯ ಕೃಷಿ ಎಲ್ಲಕ್ಕಿಂತಲೂ ಶ್ರೇಷ್ಠ ಎಂದು ತುಳು ಜಾನಪದ ವಿದ್ವಾಂಸ ಡಾ.ಗಣೇಶ್ ಅಮೀನ್ ಸಂಕಮಾರ್ ಹೇಳಿದ್ದಾರೆ.

ನಗರದ ಕೆನರಾ ಕಾಲೇಜಿನ ಸೆಮಿನಾರ್ ಹಾಲ್ನಲ್ಲಿ ತುಳು ಲಿಪಿ ಶಿಕ್ಷಕಿ, ಲೇಖಕಿ ಗೀತಾ ಲಕ್ಷ್ಮೀಶ್ ಅವರ ‘ಪೆರ್ಗದ ಸಿರಿ’ ತುಳು ಕವನ ಸಂಕಲನವನ್ನು ರವಿವಾರ  ಬಿಡುಗಡೆಗೊಳಿಸಿ ಮಾತನಾಡಿದರು.

ಇಂದಿನ ಶಿಕ್ಷಣ ವಿದ್ಯಾರ್ಥಿಗಳಲ್ಲಿ ಸೃಜನಶೀಲತೆ ತುಂಬುವಲ್ಲಿ ವಿಫಲವಾಗುತ್ತಿದೆ. ಲಕ್ಷ ಜನರಲ್ಲಿ ಬೆರಳೆಣಿಕೆಯಷ್ಟು ಮಂದಿ ಮಾತ್ರ ಲೇಖಕರಾಗುತ್ತಿದ್ದಾರೆ. ಹಿರಿಯ ತಲೆಮಾರಿನ ಕವಿ, ಸಾಹಿತಿಗಳು ತೆರೆಮರೆಗೆ ಸರಿಯುತ್ತಿರುವ ಹೊತ್ತಿನಲ್ಲಿ ತುಳುವಿನಲ್ಲಿ ಹೊಸ ಬರಹಗಾರರು ಸೃಷ್ಟಿಯಾಗುತ್ತಿರುವುದು ಆಶಾದಾಯಕ ಬೆಳವಣಿಗೆ. ತಾಯಿ, ಗುರು, ಹುಟ್ಟಿದ ಮಣ್ಣಿನಲ್ಲಿ ಸಾಹಿತ್ಯದ ಸತ್ವವಿದೆ. ಮನಸ್ಸು ಎಂಬ ಅಂಗ ದೇಹದಲ್ಲಿ ಎಲ್ಲಿದೆ ಎಂಬುದು ಯಾರಿಗೂ ಗೊತ್ತಿಲ್ಲ. ಅದು ಸ್ವಸ್ಥವಿದ್ದರೆ ಮಾತ್ರ ಬದುಕು. ಅಂತಹ ಮನಸ್ಸಿಗೆ ಔಷಧ ನೀಡುವ ಕಾರ್ಯವನ್ನು ಸಾಹಿತ್ಯ ಮಾಡುತ್ತದೆ ಎಂದರು.

ಎಂಆರ್‌ಪಿಎಲ್‌ನ ಪ್ರಶಿಕ್ಷಣ ವಿಭಾಗದ ಮಹಾ ಪ್ರಬಂಧಕಿ ವೀಣಾ ಟಿ.ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿ, ಸಾಹಿತ್ಯ ಕೃಷಿ ಬದುಕಿಗೆ ಸಾರ್ಥಕ್ಯ ತುಂಬುತ್ತದೆ. ಬದುಕು ಹಾಗೂ ಸಮಾಜವನ್ನು ಬದಲಾಯಿಸುವ ಶಕ್ತಿ ಸಾಹಿತ್ಯಕ್ಕಿದೆ. ನಮ್ಮನ್ನು ಸದಾ ಜೀವಂತವಾಗಿಡುವ ಜತೆಗೆ ಬದುಕಿಗೆ ಸಂಭ್ರಮ, ಬಣ್ಣ ತುಂಬುವ ಜತೆಗೆ ಸುತ್ತಮುತ್ತಲ ವಾತಾವರಣವನ್ನು ಅರ್ಥಪೂರ್ಣವಾಗಿಸುತ್ತದೆ. ಮಹಿಳೆಯರು ಈ ನಿಟ್ಟಿನಲ್ಲಿ ಆಸಕ್ತಿ ಬೆಳೆಸಿಕೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಸಾಹಿತಿ ಡಾ.ವಸಂತಕುಮಾರ ಪೆರ್ಲ ಅಧ್ಯಕ್ಷತೆ ವಹಿಸಿದ್ದರು. ಮಂಗಳೂರು ವಿವಿ ಕಾಲೇಜು ಕನ್ನಡ ವಿಭಾಗ ಮುಖ್ಯಸ್ಥ ಡಾ.ಮಾಧವ ಎಂ.ಕೆ. ‘ತುಲುವೆರೆ ಕಲ’ ಸಂಘಟನೆಯನ್ನು ಉದ್ಘಾಟಿಸಿದರು. ದ.ಕ. ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷ ಹರೀಶ ಸುಲಾಯ ಒಡ್ಡಂಬೆಟ್ಟು ಮಾತನಾಡಿದರು. ಕವಯಿತ್ರಿ ವಿಜಯಲಕ್ಷ್ಮೀ ಕಟೀಲು ಅಧ್ಯಕ್ಷತೆಯಲ್ಲಿ ‘ಪೆರ್ಗದ ಸಿರಿ’ ತುಳು ಕವಿಗೋಷ್ಠಿ ನಡೆಯಿತು.

ಗೋಷ್ಟಿಯಲ್ಲಿ  ಸುಳ್ಯ, ಶ್ವೇತಾ ಕಜೆ, ಚಂದ್ರಹಾಸ ಕುಂಬಾರ, ನಳಿನಿ ಭಾಸ್ಕರ ರೈ, ಶಶಿಕಲಾ  ಬಾಕ್ರಬೈಲ್, ರಕ್ಷಿತ್ ಬಿ. ಕರ್ಕೇರ, ಅಶ್ವಿನಿ ಟಿ. ಕುರ್ನಾಡು, ಸತೀಶ್ ಸಾಲಿಯಾನ್ ನೆಲ್ಲಿಕುಂಜೆ, ಸೂರಿ ಪಳ್ಳಿ, ಅಶೋಕ ಕಡೆಶಿವಾಲಯ, ತೃಪ್ತಿ ಸುರೇಶ್ ಪಳ್ಳಿ, ಆರ್. ಕೆ. ನಿರಂಜನ್, ಪದ್ಮನಾಭ ಮಿಜಾರ್, ಭಾಸ್ಕರ್ ವರ್ಕಾಡಿ, ಸೌಮ್ಯ ಆರ್ ಶೆಟ್ಟಿ, ರಂಜಿತ್ ಸಸಿಹಿತ್ಲು, ಉಮೇಶ್ ಶಿರಿಯ, ವಿಶ್ವನಾಥ್ ಕುಲಾಲ್ ಮಿತ್ತೂರು, ಅನುರಾಧ ರಾಜೀವ್, ಚೇತನ್ ವರ್ಕಾಡಿ, ಸುರೇಶ್ ನೆಗಳಗುಳಿ, ಶ್ಯಾಮ್‌ ಪ್ರಸಾದ್ ಭಟ್, ಪೂರ್ಣಿಮಾ ಬಂಟ್ವಾಳ, ಚೈತ್ರ ಜೋಗಿ ಕೂಟತ್ತಜೆ, ನವೀನ್ ಚಿಪ್ಪಾರು, ಮಹೇಶ್ ಕಲ್ಲಾಪು, ಬದ್ರುದ್ದೀನ್ ಕೂಳೂರು, ರೂಪ ವಿನಯ್, ಪರಿಮಳ ಮಹೇಶ್ ರಾವ್, ಸಂಧ್ಯಾ ಆಳ್ವ,  ಅಮರ್ನಾಥ್ ಪೂಪಾಡಿಕಲ್ಲ್, ಶುಭೋದಯ, ವಿಂಧ್ಯಾ ಎಸ್ ರೈ, ರವೀಂದ್ರ ಕುಲಾಲ್, ಸಂತು ಮುದ್ರಾಡಿ ಕಾವ್ಯ ವಾಚನ ಮಾಡಿದರು.

ಕೃತಿಕರ್ತೆ ಗೀತಾ ಲಕ್ಷ್ಮೀಶ್  ಸ್ವಾಗತಿಸಿದರು. ವಿನಯ್ ಕುಮಾರ್ ಅದ್ಯಪಾಡಿ ಕಾರ್ಯಕ್ರಮ ನಿರೂಪಿಸಿದರು.

ಸಾಧಕರಿಗೆ ಸನ್ಮಾನ

ಸಾಹಿತಿಗಳಾದ ಚೇತನ್ ವರ್ಕಾಡಿ, ಉಮೇಶ್ ಶಿರಿಯಾ, ತುಳು ಆಲ್ಬಮ್ ಸಾಹಿತ್ಯ ಕ್ಷೇತ್ರದ ಲತೀಶ್ ಮಿಜಾರ್, ಅಮರ್ನಾಥ್ ಪೂಪಾಡಿಕಲ್ಲು, ತುಳು ಲಿಪಿ ಪ್ರಚಾರಕರಾದ ಜಗದೀಶ್ ಗೌಡ ಕಲ್ಕಳ, ವಿನಯ್ ರೈ, ಸಮಾಜ ಸೇವಕರಾದ ಕೆ.ಆನಂದ ಶೆಟ್ಟಿ, ಅಕ್ಷಿತ್ ಶೆಟ್ಟಿ ಕೆಂಜಾರ್ ಹಾಗೂ ಕವಿ, ಸಂಘಟಕ ಕಾ.ವೀ ಕೃಷ್ಣದಾಸ್, ಡಾ ವಸಂತ್ ಕುಮಾರ್ ಪೆರ್ಲ, ವಿಜಯಲಕ್ಷ್ಮಿ ಕಟೀಲು, ವಿನಯಕುಮಾರ್ ಅದ್ಯಪಾಡಿರನ್ನು ಸನ್ಮಾನಿಸಲಾಯಿತು.

share
Next Story
X