Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಸ್‌ಡಿಪಿಐಯೊಂದಿಗೆ ಒಳ ಒಪ್ಪಂದ, ಸುಳ್ಳು...

ಎಸ್‌ಡಿಪಿಐಯೊಂದಿಗೆ ಒಳ ಒಪ್ಪಂದ, ಸುಳ್ಳು ಹೇಳಿಕೆಗಳೇ ಬಿಜೆಪಿ ಬಂಡವಾಳ: ಕಾಂಗ್ರೆಸ್

20 March 2023 7:31 PM IST
share
ಎಸ್‌ಡಿಪಿಐಯೊಂದಿಗೆ ಒಳ ಒಪ್ಪಂದ, ಸುಳ್ಳು ಹೇಳಿಕೆಗಳೇ ಬಿಜೆಪಿ ಬಂಡವಾಳ: ಕಾಂಗ್ರೆಸ್

ಉಡುಪಿ: ಪಿಎಫ್‌ಐಯನ್ನು ದೇಶ ವಿರೋಧಿ ಮುಸ್ಲಿಂ ಮೂಲಭೂತವಾದಿ ಸಂಘಟನೆ ಎಂದು ಬಿಜೆಪಿ  ನಿಷೇಧಿಸಿ ದ್ದರೂ ಅದರ ಅಂಗ ಸಂಸ್ಥೆ ಎಸ್‌ಡಿಪಿಐಯನ್ನು ನಿಷೇಧಿಸದೆ ಇರುವುದು ಬಿಜೆಪಿಯ ದ್ವಂದ್ವ ನಿಲುವನ್ನು ತೋರಿಸು ತ್ತದೆ. ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಮತ ವಿಭಜನೆಗಾಗಿ ಬಿಜೆಪಿ ಎಸ್‌ಡಿಪಿಐಯೊಂದಿಗೆ ಒಳಒಪ್ಪಂದ ಮಾಡಿಕೊಳ್ಳುತ್ತದೆ ಅಷ್ಟೇ ಅಲ್ಲದೆ ಆರ್ಥಿಕ ಸಹಾಯ ನೀಡಿ ಸ್ಪರ್ಧಿಸಲು ಉತ್ತೇಜಿಸುತ್ತಿರುವುದು ಈಗಾಗಲೇ ಸ್ಥಳೀಯ ಚುನಾವಣೆಗಳಲ್ಲಿ ಜಗಜ್ಜಾಹೀರವಾಗಿದೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್‌ ಕುಮಾರ್ ಕೊಡವೂರು  ತಿಳಿಸಿದ್ದಾರೆ.

ಈ ಕುರಿತು ಉಡುಪಿ  ಬಿಜೆಪಿ  ಜಿಲ್ಲಾಧ್ಯಕ್ಷರ  ಹೇಳಿಕೆಗೆ  ಪ್ರತಿಕ್ರಿಯಿಸಿರುವ ಕೊಡವೂರು, ಚುನಾವಣೆಯಲ್ಲಿ ಮತಗಳು ಚದುರಿ ಹೋಗದಂತೆ ಎಲ್ಲಾ ರಾಷ್ಟೀಯ  ಪಕ್ಷಗಳು ಇತರ ಸ್ಪರ್ಧಿಗಳನ್ನು ಹಿಂತೆಗೆಯುವಂತೆ  ಮನವಿ ಮಾಡಿಕೊಳ್ಳುವುದು ಸ್ವಾಭಾವಿಕ. ಈ ಪ್ರಕ್ರಿಯೆ ಹೊಂದಾಣಿಕೆ ಆಗಲಾರದು.  ಬಿಜೆಪಿ ಸರಕಾರ ಸಂವಿಧಾನದ ತಿದ್ದುಪಡಿ ಮಾಡಲು ಹೊರಟಾಗ ರಾಷ್ಟ್ರೀಯ ಪಕ್ಷವಾಗಿ ಕಾಂಗ್ರೆಸ್  ಪ್ರತಿಭಟಿಸಿದಾಗ, ಸಮಾನ ಮನಸ್ಕರು ಒಗ್ಗೂಡಿದರೆ ಅದು ಸಂವಿಧಾನದ  ಬದ್ಧತೆ ಬಗ್ಗೆ ಅವರಿಗೆ ಇರುವ ಕಾಳಜಿಯನ್ನು ತೋರಿಸುತ್ತದೆ ಎಂದು ಅವರು ಹೇಳಿಕೆಯಲ್ಲಿ ವಿವರಿಸಿದ್ದಾರೆ.

ಸಿದ್ದರಾಮಯ್ಯ ತಮ್ಮ ಅಧಿಕಾರಾವಧಿಯಲ್ಲಿ ಐಎಫ್‌ಐ, ಎಸ್‌ಡಿಪಿಐ,  ಕೆಎಫ್‌ಡಿ ಕಾರ್ಯಕರ್ತರನ್ನು ಬಂಧನದಿಂದ ಮುಕ್ತಗೊಳಿಸಿದ್ದಾರೆ ಎಂಬ ಬಿಜೆಪಿ ಜಿಲ್ಲಾಧ್ಯಕ್ಷರ ಹೇಳಿಕೆ ಸುಳ್ಳನ್ನು ಪದೇ ಪದೇ ಹೇಳಿ ಅದನ್ನು ಸತ್ಯವಾಗಿಸುವ ಪ್ರಯತ್ನವಾಗಿದೆ. ಸಿದ್ದರಾಮಯ್ಯ ತಮ್ಮ ಅಧಿಕಾರದ  ಅವಧಿಯಲ್ಲಿ ಬಂಧನದಿಂದ ಮುಕ್ತಿಗೊಳಿಸಿದ ಎಸ್‌ಡಿಪಿಐ ಕಾರ್ಯಕರ್ತರ ದಾಖಲೆ ಒದಗಿಸುವಂತೆ ಲಿಖಿತವಾಗಿ ಸರಕಾರಕ್ಕೆ ಮನವಿ ಮಾಡಿಕೊಂಡರೂ  ಇಷ್ಟರವರೆಗೆ ಯಾವುದೇ ದಾಖಲೆಗಳನ್ನು ಸರಕಾರ ನೀಡಿಲ್ಲ. ಸರಕಾರ ದಾಖಲೆ ನೀಡದೆ ಬರೇ ಆರೋಪ ಮಾಡುವುದು ಖಂಡನೀಯ ಎಂದರು.

ಹೀಗಿರುವಾಗ ಬಿಜೆಪಿ ಅಧ್ಯಕ್ಷರ ಆರೋಪವು, ಚುನಾವಣೆ ಬರುವಾಗ  ಕಾಂಗ್ರೆಸ್ ಪಕ್ಷದ ಬಗ್ಗೆ ಜನತೆಯಲ್ಲಿ ತಪ್ಪು ಅಭಿಪ್ರಾಯ ಮೂಡಿಸುವ ಷಡ್ಯಂತ್ರದ ಭಾಗವಾಗಿದೆ ಎಂದು ಆರೋಪಿಸಿದರು.

share
Next Story
X