Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಎಪ್ರಿಲ್ 1ರಿಂದ ಟೋಲ್ ದರ ಹೆಚ್ಚಳ:...

ಎಪ್ರಿಲ್ 1ರಿಂದ ಟೋಲ್ ದರ ಹೆಚ್ಚಳ: ರಾಜ್ಯಾದ್ಯಂತ ಟೋಲ್ ಪ್ಲಾಝಾಗಳ ಎದುರು ಪ್ರತಿಭಟನೆಗೆ ಹೋರಾಟ ಸಮಿತಿ ಮನವಿ

21 March 2023 10:54 AM IST
share
ಎಪ್ರಿಲ್ 1ರಿಂದ ಟೋಲ್ ದರ ಹೆಚ್ಚಳ: ರಾಜ್ಯಾದ್ಯಂತ ಟೋಲ್ ಪ್ಲಾಝಾಗಳ ಎದುರು ಪ್ರತಿಭಟನೆಗೆ ಹೋರಾಟ ಸಮಿತಿ ಮನವಿ

ಮಂಗಳೂರು, ಮಾ.21:  ಎಪ್ರಿಲ್ ಒಂದರಿಂದ ದೇಶಾದ್ಯಂತ ಟೋಲ್ ದರಗಳನ್ನು 5ರಿಂದ 10 ಶೇ.ದ ವರಗೆ ಏರಿಸಲು ರಾಷ್ಟೀಯ ಹೆದ್ದಾರಿ ಪ್ರಾಧಿಕಾರ ನಿರ್ಧರಿಸಿದೆ. ಇದು ಏಕಪಕ್ಷೀಯ, ಅನೈತಿಕ ನಿಲುವಾಗಿದ್ದು, ವಾಹನ ಸವಾರರ ಮೇಲೆ ವಿಪರೀತ ಹೊರೆಬೀಳಲಿದೆ. ಕೇಂದ್ರ ಸರಕಾರದ ಈ ನಿರ್ದಯ ಸುಲಿಗೆ ನೀತಿಯನ್ನು ವಿರೋಧಿಸಿ ಎಪ್ರಿಲ್ ಒಂದರಂದು ರಾಜ್ಯಾದ್ಯಂತ ಟೋಲ್ ಗೇಟ್ ಗಳ ಮುಂಭಾಗ ಜನಪರ ಸಂಘಟನೆಗಳು ಪ್ರತಿಭಟನೆ ನಡೆಸುವಂತೆ ಸುರತ್ಕಲ್ 'ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಮನವಿ ಮಾಡಿದೆ.

ಈಗಾಗಲೆ ಬೆಲೆಯೇರಿಕೆ, ನಿರುದ್ಯೋಗ, ಆದಾಯ ಕುಸಿತದಿಂದ ಜನತೆ ಕಂಗೆಟ್ಟಿದ್ದಾರೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆಯು ಸಾರ್ವಕಾಲಿಕ ಕುಸಿತ ಕಂಡಿದ್ದರೂ ಭಾರತದಲ್ಲಿ ಪೆಟ್ರೋಲ್, ಡೀಸೆಲ್ ದರ ವಿಪರೀತ ಹೆಚ್ಚಿದೆ. ಇದರಿಂದ ಸರಕು ಸಾಗಣೆ ದುಬಾರಿಯಾಗಿ ಜನತೆಯ ಜೇಬಿಗೆ ಕತ್ತರಿ ಬಿದ್ದಿದೆ. ರಸ್ತೆಗಳಲ್ಲಿ ವಾಹನಗಳ ಓಡಾಟದ ಹೆಚ್ಚಳದಿಂದ ಟೋಲ್ ಕಂಪೆನಿಗಳು ದೊಡ್ಡ ಮಟ್ಟದ ಲಾಭ ಗಳಿಸುತ್ತಿವೆ. ಅವರ ಹೂಡಿಕೆಯ ಬಂಡವಾಳ ನಿರೀಕ್ಷೆಗಿಂತ ಹೆಚ್ಚಿನ ಪ್ರಮಾಣದಲ್ಲಿ ವಾಪಸ್ ಬರುತ್ತಿದೆ. ಫಾಸ್ಟ್ ಟ್ಯಾಗ್ ನಿಯಮದಿಂದ ಟೋಲ್ ಕಂಪೆನಿಗಳ ನಿರ್ವಹಣೆ ವೆಚ್ಚವೂ ಕಡಿಮೆಯಾಗಿದೆ. ಹಾಗಿರುವಾಗ ವರ್ಷದಿಂದ ವರ್ಷಕ್ಕೆ ಟೋಲ್ ಸುಂಕದಲ್ಲಿ ಕಡಿತ ಆಗಬೇಕಿತ್ತು. ಅದರ ಬದಲಿಗೆ ಪ್ರತಿವರ್ಷ ಎಪ್ರಿಲ್ ನಲ್ಲಿ ಕಡ್ಡಾಯ ಎಂಬಂತೆ ಟೋಲ್ ದರವನ್ನು ಹೆಚ್ಚಿಸುತ್ತಾ ಬರಲಾಗುತ್ತಿದೆ. ಇದು ಅಕ್ರಮ ಮಾತ್ರ ಅಲ್ಲ, ಸಂಕಷ್ಟದಲ್ಲಿ ಇರುವ ಜನರಿಂದ ಅಧಿಕಾರದ ಬಲದ ಮೂಲಕ ಬಲವಂತವಾಗಿ ನಡೆಸುವ ಸುಲಿಗೆ ಎಂದು ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ವರ್ಷದಿಂದ ವರ್ಷಕ್ಕೆ ಟೋಲ್ ಸುಂಕ ವಿಧಿಸುವ ರಸ್ತೆಗಳ ಸಂಖ್ಯೆ ಏರುತ್ತಿದೆ. ರಾಜ್ಯ ಹೆದ್ದಾರಿಗಳಿಗೂ ಟೋಲ್ ಗೇಟ್ ಗಳನ್ನು ಅಳವಡಿಸಲಾಗುತ್ತಿದೆ. ವಾಹನ ಸವಾರರು ರಸ್ತೆಗೆ ಇಳಿಯಲು ಭಯಪಡುವಂತಾಗಿದೆ. ಇಂತಹ ಸಂದರ್ಭದಲ್ಲಿ ಟೋಲ್ ದರದ ಹೆಚ್ಚಳವನ್ನು ಮೌನವಾಗಿ ಸಹಿಸಿದರೆ ಮುಂದಿನ ದಿ‌ನಗಳಲ್ಲಿ ರಸ್ತೆಗಳ ಬಳಕೆಯೇ ಜನಸಾಮಾನ್ಯರಿಗೆ ಅಸಾಧ್ಯ ಆಗಲಿದೆ. ಈ ಎಲ್ಲ ಕಾರಣಗಳಿಗೆ ಟೋಲ್ ದರ ಹೆಚ್ಚಳವನ್ನು ನಾಗರಿಕ ಸಮಾಜ ಬಲವಾಗಿ ವಿರೋಧಿಸಬೇಕಿದೆ. ಎಪ್ರಿಲ್ ಒಂದರಂದು ಟೋಲ್ ದರ ಹೆಚ್ಚಳದ ಸಂದರ್ಭದಲ್ಲೇ ಆಯಾಯ ಭಾಗದ ‌‌ನಾಗರಿಕ ಸಂಘಟನೆಗಳು ರಾಜ್ಯದ ಟೋಲ್ ಗೇಟ್ ಗಳ ಮುಂಭಾಗದಲ್ಲಿ ಸ್ವಯಂ ಪ್ರೇರಣೆಯಿಂದ ಪ್ರತಿಭಟನೆ ನಡೆಸುವ ಮೂಲಕ ಸರಕಾರಗಳಿಗೆ ಪ್ರಬಲ ಎಚ್ಚರಿಕೆಯನ್ನು ರವಾನಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

share
Next Story
X