Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ‘ವಾರ್ತಾಭಾರತಿ’ಯ ಹಂಝ ಮಲಾರ್ ಸಹಿತ 12...

‘ವಾರ್ತಾಭಾರತಿ’ಯ ಹಂಝ ಮಲಾರ್ ಸಹಿತ 12 ಮಂದಿಗೆ ದತ್ತಿನಿಧಿ ಪ್ರಶಸ್ತಿ ಪ್ರಕಟ

21 March 2023 7:27 PM IST
share
‘ವಾರ್ತಾಭಾರತಿ’ಯ ಹಂಝ ಮಲಾರ್ ಸಹಿತ 12 ಮಂದಿಗೆ ದತ್ತಿನಿಧಿ ಪ್ರಶಸ್ತಿ ಪ್ರಕಟ

ಮಂಗಳೂರು: ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ದತ್ತಿನಿಧಿ ಪ್ರಶಸ್ತಿ ಪ್ರಕಟಗೊಂಡಿದ್ದು, ‘ವಾರ್ತಾಭಾರತಿ’ ದೈನಿಕದ ವರದಿಗಾರ ಹಂಝ ಮಲಾರ್ ಸಹಿತ 12 ಮಂದಿಗೆ ಪ್ರಶಸ್ತಿಯನ್ನು ಘೋಷಿಸಲಾಗಿದೆ.

ಹಾಸನದ ಜೆ.ಆರ್. ಕೆಂಚೇಗೌಡ ಅವರು ನೀಡುವ ‘ಪ್ರಚೊದಯ’ ದತ್ತಿನಿಧಿ ಪ್ರಶಸ್ತಿಗೆ ಹಂಝ ಮಲಾರ್ ಆಯ್ಕೆಯಾಗಿದ್ದಾರೆ. ಉಳಿದಂತೆ ಹಿರಿಯ ಪತ್ರಕರ್ತರಾದ ಮನೋಹರ ಪ್ರಸಾದ್, ಯು.ಕೆ.ಕುಮಾರನಾಥ್, ಕೀರ್ತಿಶೇಖರ್ ಕಾಸರಗೋಡು, ರಾಜೇಶ್ ರೈ ಚಟ್ಲ, ಬದ್ರುದ್ದೀನ್ ಕೆ. ಮಾಣಿ, ವಿಕ್ರಂ ಕಾಂತಿಕೆರೆ, ರೋನ್ಸ್ ಬಂಟ್ವಾಳ, ಅಜ್ಜಮಾಡ ರಮೇಶ್ ಕುಟ್ಟಪ್ಪ, ದಯಾಸಾಗರ್ ಚೌಟ, ಪ್ರವೀಣ್ ಕುಮಾರ್ ಬೇಕಲ್, ದೇವದಾಸ ಪಾರೆಕಟ್ಟೆ ವಿವಿಧ ದತ್ತಿನಿಧಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಸಂಘದ ಅಧ್ಯಕ್ಷ ಎ.ಆರ್.ಸುಬ್ಬಯ್ಯ ಕಟ್ಟೆ ತಿಳಿಸಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಸುಬ್ಬಯ್ಯ ಕಟ್ಟೆ ಅವರು, ‘ಎಡನೀರು ಕೇಶವಾನಂದ ಭಾರತಿ ಸ್ವಾಮೀಜಿಯವರ ನೆನಪಿಗಾಗಿ ಶ್ರೀ ಮಠವು ನೀಡುವ ದತ್ತಿನಿಧಿ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಅವರನ್ನು, ಅವ್ವ ಸೇವಾ ಟ್ರಸ್ಟ್‍ನ ಸಂಸ್ಥಾಪಕ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಹೊರಟ್ಟಿಯವರು ನೀಡುವ ದತ್ತಿನಿಧಿ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಯು.ಕೆ.ಕುಮಾರನಾಥ್ ಅವರನ್ನು ಆಯ್ಕೆ ಮಾಡಲಾಗಿದೆ. 

ಹವ್ವಾ ಹಸನ್ ಫೌಂಡೇಶನ್ ಕುದ್ಕೋಳಿ ಸಂಸ್ಥಾಪಕ ಹಾಗೂ ಹಿರಿಯ ಆರ್ಥಿಕ ತಜ್ಞ ಅಬ್ದುಲ್ಲ ಮಾದುಮೂಲೆ ಕೊಡ ಮಾಡುವ ದತ್ತಿನಿಧಿ ಪ್ರಶಸ್ತಿಗೆ ಹಿರಿಯ ಪತ್ರಕರ್ತೆ ಕೀರ್ತಿಶೇಖರ್ ಕಾಸರಗೋಡು ಅವರನ್ನು, ಕರ್ನಾಟಕ ಗಡಿಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ.ಸೋಮಶೇಖರ ಕೊಡ ಮಾಡುವ ದತ್ತಿನಿಧಿ ಪ್ರಶಸ್ತಿಗೆ ಪತ್ರಕರ್ತ ರಾಜೇಶ್ ರೈ ಚಟ್ಲ ಅವರನ್ನು ಆಯ್ಕೆ ಮಾಡಲಾಗಿದೆ. 

ಕೆ.ವಿ.ಆರ್ ಠ್ಯಾಗೋರ್ ಸ್ಮರಣಾರ್ಥ ನಿವೃತ್ತ ಅಧಿಕಾರಿ ಟಿ.ತಿಮ್ಮೆಗೌಡ ಹಾಗೂ ಡಾ.ವೆಂಕಟೇಶ್ ತುಪ್ಪಿಲ್ ಕೊಡ ಮಾಡುವ ದತ್ತಿನಿಧಿ ಪ್ರಶಸ್ತಿಗೆ ಬದ್ರುದ್ದೀನ್ ಕೆ.ಮಾಣಿ ಅವರನ್ನು, ಹೇರಂಭ ಇಂಡಸ್ಟ್ರೀಸ್ ಆಡಳಿತ  ನಿರ್ದೇಶಕ ಕುಳೂರು ಕನ್ಯಾನ ಸದಾಶಿವ ಶೆಟ್ಟಿಯವರು ನೀಡುವ ದತ್ತಿನಿಧಿ ಪ್ರಶಸ್ತಿಗೆ ವಿಕ್ರಂ ಕಾಂತಿಕೆರೆ ಅವರನ್ನು ಆಯ್ಕೆ ಮಾಡಲಾಗಿದೆ.

ಪತ್ರಕರ್ತ ಜೆ.ಆರ್ ಕೆಂಚೇಗೌಡ ಹಾಸನ ಇವರು ನೀಡುವ ಪ್ರಜೋದಯ ದತ್ತಿನಿಧಿ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಹಂಝ ಮಲಾರ್ ಅವರನ್ನು, ನ್ಯಾಯವಾದಿ ಮೊಹಮ್ಮದ್ ಇಬ್ರಾಹಿಂ ಪಾರ ಸ್ಮರಣಾರ್ಥ ನ್ಯಾಯವಾದಿ ಇಬ್ರಾಹಿಂ ಖಲೀಲ್ ಅರಿಮಲ ದುಬೈ ನೀಡುವ ದತ್ತಿನಿಧಿ ಪ್ರಶಸ್ತಿಗೆ ಪತ್ರಕರ್ತ ರೋನ್ಸ್ ಬಂಟ್ವಾಳ್ ಅವರನ್ನು ಆಯ್ಕೆ ಮಾಡಲಾಗಿದೆ. 

ಹಿರಿಯ ಸಾಹಿತಿ ಸಂಘಟಕ ಪ್ರಭಾಕರ ಕಲ್ಲೂರಾಯ ಬನದಗದ್ದೆಯವರು ನೀಡುವ ದತ್ತಿನಿಧಿ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಅಜ್ಜಮಾಡ ರಮೇಶ್ ಕುಟ್ಟಪ್ಪ ಅವರನ್ನು, ಮೊಗರೋಡಿ ಗೋಪಾಲಕೃಷ್ಣ ಮೇಲಾಂಟ ಸ್ಮರಣಾರ್ಥ ಹರ್ಷ ಮೇಲಾಂಟ ಹಾಗೂ ಕುಟುಂಬ ನೀಡುವ ದತ್ತಿನಿಧಿ ಪ್ರಶಸ್ತಿಗೆ ದಯಾಸಾಗರ್ ಚೌಟ ಅವರನ್ನು ಆಯ್ಕೆ ಮಾಡಲಾಗಿದೆ. 

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಬೆಂಗಳೂರು ನೀಡುವ ದತ್ತಿನಿಧಿ ಪ್ರಶಸ್ತಿಗೆ ಪತ್ರಕರ್ತ ಪ್ರದೀಪ್ ಕುಮಾರ್ ಬೇಕಲ್, ಹಿರಿಯ ಪತ್ರಕರ್ತ ದೇವದಾಸ ಪಾರೆಕಟ್ಟೆ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಹೇಳಿದರು. 

ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಕೇರಳದ ಕೈಗಾರಿಕ ಸಚಿವ ಪಿ.ರಾಜೀವ್, ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ಗಡಿನಾಡ ಪ್ರಾಧಿಕಾರದ ಸಿ.ಸೋಮಶೇಖರ್ ಉಪಸ್ಥಿತರಿರುತ್ತಾರೆ ಎಂದು ಅವರು ಹೇಳಿದರು.

share
Next Story
X