ಮಾ.25ರಂದು ರೈತ ಸಂಘದಿಂದ ಪ್ರತಿಭಟನೆ
-

ಮಂಗಳೂರು : ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದ ಮಿತ್ತೂರು ನಿವಾಸಿ ವೀರಪ್ಪ ಗೌಡ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಪಡೆದ ಕೃಷಿ ಅಭಿವೃದ್ಧಿ ಸಾಲ ವಸೂಲಾತಿ ಒತ್ತಡದಿಂದಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ ಇದನ್ನು ಸಾಲಕ್ಕಾಗಿ ರೈತ ಆತ್ಮ ಹತ್ಯೆ ಮಾಡಿರುವ ಪ್ರಕರಣವನ್ನುಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ಇದನ್ನು ಖಂಡಿಸಿ ಮತ್ತು ರೈತರ ಇತರ ಸಮಸ್ಯೆಗಳನ್ನು ಪರಿಹಾರಕ್ಕೆ ಅಗ್ರಹಿಸಿ ಮಾ.25ರ ಬೆಳಗ್ಗೆ 11ಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನಾ ಧರಣಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಓಸ್ವಾಲ್ಡ್ ಪ್ರಕಾಶ್ ಫೆರ್ನಾಂಡಿಸ್ ತಿಳಿಸಿದ್ದಾರೆ.
ನಗರದ ಲೇಡಿಹಿಲ್ ಪತ್ರಿಕಾ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯನ್ನುದ್ದೇಶಿ ಮಾತನಾಡಿದ ಅವರು, ಪ್ರಾಕೃತಿಕ ವಿಕೋಪ ಹಾಗೂ ಜಲಸ್ಫೋಟದ ಸಂತ್ರಸ್ತರಿಗೆ ವೈಜ್ಞಾನಿಕ ಪರಿಹಾರ ಹಾಗೂ ಮೂಲಭೂತ ಸೌಕರ್ಯಗಳನ್ನು ನೀಡುವಲ್ಲಿ ಸರಕಾರ ಹಿಂದೇಟು ಹಾಕುತ್ತಿದೆ. ಕಳೆದ 5 ವರ್ಷದಿಂದ ಮನೆ ನಿರ್ಮಾಣಕ್ಕಾಗಿ ಅರ್ಜಿ ಹಾಕುತ್ತಿದ್ದೇವೆ, ಬಿಜೆಪಿ ಸರಕಾರ ಬಂದ ಮೇಲೆ ಅವೈಜ್ಞಾನಿಕ ತೆರಿಗೆ ನೀತಿ,ವಿದೇಶದಿಂದ ಅಡಿಕೆ ಅಮದು, ತೆಂಗಿನಕಾಯಿಯ ಬೆಲೆ ಏರಿಕೆ ಹಾಗೂ ಇತರ ಅಗತ್ಯ ವಸ್ತು ಗಳ ಬೆಲೆ ಗಗನಕ್ಕೆ ಏರಿದೆ ಇದಕ್ಕೆ ಸರಕಾರದ ನೀತಿ ಕಾರಣ ಎಂದು ಅವರು ಆರೋಪಿಸಿದರು.
ಬೆಳ್ತಂಗಡಿ ಭಾಗದ ಆದಿವಾಸಿಗಳ ಸಮಸ್ಯೆಯನ್ನು ನಿರ್ಲಕ್ಷೀಸಲಾಗಿದೆ. ಬಡವರಿಗೆ ಮತ್ತು ಅರ್ಥಿಕವಾಗಿ ಹಿಂದುಳಿದವರಿಗೆ ಮೂಲಭೂತ ಹಕ್ಕುಗಳಾದ ನೀರು, ವಿದ್ಯುತ್ ಹಾಗೂ ಮನೆ ಸೌಕರ್ಯಕ್ಕೆ ನೀಡಿದ ಅರ್ಜಿಯನ್ನು ವಿಲೇವಾರಿ ಮಾಡುತ್ತಿಲ್ಲ. ಅಡಿಕೆ ಎಲೆ ಹಳದಿ ರೋಗ, ಚುಕ್ಕಿರೋಗ ಸಂತ್ರಸ್ಥರನ್ನು ನಿರ್ಲಕ್ಷ ಮಾಡಿ, ಹವಾಮಾನ ಆಧಾರಿತ ಬೆಳೆ ವಿಮೆಯ ಹೆಸರಿನಲ್ಲಿ ರೈತರನ್ನು ವಂಚಿಸಿದೆ. ಜಿಲ್ಲಾಡಳಿತದ ವಿಫಲತೆಯಿಂದ ವಿಮಾ ಕಂಪನಿಗಳು ಸರಕಾರದ ಖಜಾನೆಯಿಂದ ಕೋಟಿಗಟ್ಟಲೆ ಹಣವನ್ನು ಲೂಟಿ ಮಾಡುತ್ತಿದೆ. ಇದರಿಂದ ಬಡಜನತೆ ಮೂಲಭೂತ ಸೌಕರ್ಯದಿಂದ ವಂಚಿತರಾಗುತ್ತಿದ್ದಾರೆ. ರೈತ ಆತ್ಮಹತ್ಯೆಯ ಸಾಮಾಜಿಕ ಪಿಡುಗು ನಮ್ಮ ಶ್ರೀಮಂತ ದ.ಕ ಜಿಲ್ಲೆಯಲ್ಲಿ ಮರುಕಳಿಸುತ್ತಿದೆ. ಲಂಚ ಪಡೆದುಕೊಳ್ಳುವ ಕ್ಷೇತ್ರಕ್ಕೆ ಶಾಸಕರು ಅಧ್ಯಕ್ಷರಾಗಿದ್ದಾರೆ. ಬಡವರ ಅರ್ಜಿಯನ್ನು ವಿಲೇವಾರಿ ಮಾಡದೇ, ಲಂಚ ನೀಡಿದವರಿಗೆ ಪ್ರಥಮ ಆದ್ಯತೆಯನ್ನು ನೀಡುತ್ತಿದ್ದಾರೆ. ಅಲ್ಲದೆ, ಜಿಲ್ಲೆಯ ಸಹಾಕರಿ ಸಂಘಗಳಲ್ಲಿ ಭ್ರಷ್ಟಚಾರ ಹೆಚ್ಚಾಗುತ್ತಿದೆ. ರಾಜ್ಯ ಸರಕಾರವು ಜನರಿಗೆ ಪೊಳ್ಳು ಭರವಸೆಗಳನ್ನು ನೀಡಿ ಮತವನ್ನು ಗಳಿಸಿ ಮೋಸ ಮಾಡುತ್ತಿದೆ. ಮುಂದಿನ ದಿನಗಳಲ್ಲಿ ರೈತ ಸಂಘವು ಸರಕಾರಕ್ಕೆ ಎಚ್ಚರಿಕೆ ನೀಡಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ ಪುಣಚ, ಸಂಘದ ಸದಸ್ಯ ಸನ್ನಿ ಡಿಸೋಜಾ ಹಾಗೂ ಸಂಘದ ರಾಜ್ಯ ಸಂಚಾಲಕ ಆದಿತ್ಯ ಕೊಲಾಜೆ ಉಪಸ್ಥಿತರಿದ್ದರು.
‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ?
ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ
The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request.
Help us delete comments that do not follow these guidelines by informing us (vbwebdesk@gmail.com). Let's work together to keep the conversation civil.
www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು ' ವಾರ್ತಾ ಭಾರತಿ' ಕಾದಿರಿಸಿದೆ.
ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ. ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.