-

ಕರಾವಳಿ ಪ್ರಜಾಧ್ವನಿ ಯಾತ್ರೆ ಕಾರ್ಯಕ್ರಮ

ಈ ಬಾರಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿಶ್ಚಿತ: ರೋಜಿ ಎಂ ಜಾನ್

-

ಬಂಟ್ವಾಳ : ಆಡಳಿತಾರೂಢ ಬಿಜೆಪಿ ಸರಕಾರ ಶೇಕಡಾ 40 ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಈ ಸರಕಾರವನ್ನು ಕಿತ್ತೊಗೆಯಲು ಕರ್ನಾಟಕದ ಜನ ನಿರ್ಧರಿಸಿ ಆಗಿದೆ. ಈ ಬಾರಿ ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ನಿಶ್ಚಿತ ಎಂದು ಎಐಸಿಸಿ ಕಾರ್ಯದರ್ಶಿ ರೋಜಿ ಎಂ ಜಾನ್ ಹೇಳಿದರು.

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಗ್ಗ - ಕಾರಿಂಜ ಕ್ರಾಸ್ ಬಳಿ ನಡೆದ ಕರಾವಳಿ ಪ್ರಜಾಧ್ವನಿ ಯಾತ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಮೋದಿ ಸರಕಾರದ  ಎರಡನೇ ಅವಧಿ ಕೂಡಾ ಮುಗಿಯುತ್ತಾ ಬಂದಿದ್ದು, ಮೋದಿ ಹೇಳಿದ ಅಚ್ಚೇ ದಿನ್ ಇನ್ನೂ ಬಂದಿಲ್ಲ. ಹದಿನೈದು ಲಕ್ಷವೂ ಇಲ್ಲ,  ಕಪ್ಪು ಹಣವೂ ಇಲ್ಲ, ಪೆಟ್ರೋಲ್ ಡೀಸೆಲ್ ನೂರರ ಗಡಿ ದಾಟಿ ಆಗಿದೆ. ಇದೇನಾ ಅಚ್ಚೆ ದಿನ ಎಂದವರು ಪ್ರಶ್ನಿಸಿದರು. 

ರಾಹುಲ್ ಗಾಂಧಿ ವಿಷಯದಲ್ಲಿ ಅನುಸರಿಸಿದ ನೀತಿ ವಿರುದ್ಧ ಕಾಂಗ್ರೆಸ್ ಹೋರಾಟ ಮುಂದುವರಿಸಲಿದೆ.  ಈ ಬಾರಿಯ ಚುನಾವಣಾ ಪ್ರಥಮ ಪಟ್ಟಿಯಲ್ಲೇ ರಮಾನಾಥ ರೈ ಉಮೇದುವಾರಿಕೆ ಘೋಷಣೆಯಾಗಿರುವುದು ಬಂಟ್ವಾಳ ಕ್ಷೇತ್ರದ ಜನರ ಪಾಲಿನ ಮೊದಲ ಮುನ್ನಡೆಯಾಗಿದೆ.  ಕಾಂಗ್ರೆಸ್ ಪಕ್ಷದ ಬದ್ಧತೆ ಅರ್ಥ ಮಾಡಿಕೊಳ್ಳಲು ಗತ ಇತಿಹಾಸ ಅಧ್ಯಯನ ಮಾಡಬೇಕಾಗಿಲ್ಲ. ಕೇವಲ ಸಿದ್ದರಾಮಯ್ಯರ ಯುಗವನ್ನೊಮ್ಮೆ ತಿರುಗಿ ನೋಡಿದರೆ ಸಾಕು ಎಂದು ನೆನಪಿಸಿದರು.

ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಬಂಟ್ವಾಳ ಕೆಂಪಯ್ಯ ಹರಿಪ್ರಸಾದ್ ಅವರು ಮಾತನಾಡಿ, ಬಿಜೆಪಿ ಅವಧಿಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ ಶಿಕ್ಷಣ ಕ್ಷೇತ್ರದ ಫಲಿತಾಂಶದಲ್ಲೂ ಹಿಂದೆ ಬಿದ್ದಿದೆ. ಫಲಿತಾಂಶ ಪಟ್ಟಿಯಲ್ಲಿ ಪ್ರಥಮ, ದ್ವಿತೀಯ ಸ್ಥಾನದಲ್ಲಿ  ಬರುತ್ತಿದ್ದ ಅವಳಿ ಜಿಲ್ಲೆಗಳು ಇದೀಗ ಹದಿನೆಂಟನೇ ಸ್ಥಾನಕ್ಕೂ ಕೆಳಗಿಳಿದಿದೆ. ಅಂದರೆ ಶಿಕ್ಷಣ ಕ್ಷೇತ್ರವನ್ನೂ ಬಿಜೆಪಿ ಸರಕಾರ ಬಾಧಿಸಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬಹುದು ಎಂದರು.

ಆಹಾರ, ವಸತಿ, ಉಡುಗೆ, ಆರೋಗ್ಯ, ಶಿಕ್ಷಣ ಇದನ್ನು ಸಮಾನವಾಗಿ ಕೊಡುವುದು ಚುನಾಯಿತ ಸರಕಾರದ ಆದ್ಯತೆಯಾಗಿದ್ದು, ಬಿಜೆಪಿ ಸರಕಾರದಲ್ಲಿ ಇದು ಮರೀಚಿಕೆ ಯಾಗಿದೆ  ಎಂದ ಬಿ ಕೆ ಹರಿಪ್ರಸಾದ್ ಮೋದಿ ಭರವಸೆ ನೀಡಿದ ವರ್ಷಕ್ಕೆ ಎರಡು ಕೋಟಿ ಉದ್ಯೋಗ ಎಲ್ಲಿಗೆ ಹೋಗಿದೆ ಎಂದು ಪ್ರಶ್ನಿಸಿದ ಅವರು ಕಾಂಗ್ರೆಸ್ ಪಕ್ಷ ಉಳುವವನೇ ಒಡೆಯನಾಗಿ ಮಾಡಿದರೆ, ಬಿಜೆಪಿ ಉಳ್ಳವನೇ ಒಡೆಯ ಎಂದು ಮಾಡ್ತಾ ಇದೆ ಎಂದು ಟೀಕಿಸಿದರು.

ಇದೇ ವೇಳೆ ಮಾತನಾಡಿದ ಮಾಜಿ ಸಚಿವ, ಬಂಟ್ವಾಳ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಿ ರಮಾನಾಥ ರೈ, ಒಂಭತ್ತನೇ ಬಾರಿಗೆ ಸ್ಪರ್ಧಿಸಲು ಅವಕಾಶ ನೀಡಿದ ಪಕ್ಷಕ್ಕೆ ಚಿರಋಣಿ. ಇದಕ್ಕೆ ಕಾರಣಕರ್ತರಾದ ಪಕ್ಷದ ಕಾರ್ಯಕರ್ತರು, ಮತದಾರರನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದರು.

ವಿಧಾನಪರಿಷತ್ ಸದಸ್ಯ, ದ ಕ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ರಾಜ್ಯಸಭಾ ಮಾಜಿ ಸದಸ್ಯ ಬಿ ಇಬ್ರಾಹಿಂ, ಕೆಪಿಸಿಸಿ ಸದಸ್ಯರಾದ ಪಿಯೂಸ್ ಎಲ್ ರೋಡ್ರಿಗಸ್, ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕಾಧ್ಯಕ್ಷ ಕೆ ಕೆ ಶಾಹುಲ್ ಹಮೀದ್, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಮಾಣಿ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಿ ಸಿ ರೋಡು, ಪಂಚಾಯತ್ ರಾಜ್ ಒಕ್ಕೂಟದ ದ ಕ ಜಿಲ್ಲಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರುಗಳಾದ ಸುರೇಶ್ ಪೂಜಾರಿ ಜೋರಾ, ಇಬ್ರಾಹಿಂ ನವಾಝ್ ಬಡಕಬೈಲು, ಬಂಟ್ವಾಳ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಲವೀನಾ ವಿಲ್ಮಾ ಮೊರಾಸ್, ಹಿರಿಯ ನಾಯಕ ಜಿನರಾಜ ಅರಿಗ, ಕಾವಳ ಮೂಡೂರು ಗ್ರಾ.ಪಂ. ಅಧ್ಯಕ್ಷೆ ರಜನಿ ವೇದಿಕೆಯಲ್ಲಿದ್ದರು.
ಇದೇ ವೇಳೆ ಬಂಟ್ವಾಳ ಬ್ಲಾಕ್ ವ್ಯಾಪ್ತಿಯ ಹಲವು ಮಂದಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.

ಜಿ ಪಂ ಮಾಜಿ ಸದಸ್ಯ ಬಿ ಪದ್ಮಶೇಖರ ಜೈನ್, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಕೆ ಮಾಯಿಲಪ್ಪ ಸಾಲ್ಯಾನ್, ಬಂಟ್ವಾಳ ಪುರಸಭಾ ಸದಸ್ಯರಾದ ಅಬೂಬಕ್ಕರ್ ಸಿದ್ದೀಕ್, ಲೋಲಾಕ್ಷ ಶೆಟ್ಟಿ, ಬಿ ವಾಸು ಪೂಜಾರಿ, ಜನಾರ್ದನ ಚೆಂಡ್ತಿಮಾರ್, ಮುಹಮ್ಮದ್ ನಂದರಬೆಟ್ಟು, ಪ್ರಮುಖರಾದ ಸಂಪತ್ ಕುಮಾರ್ ಶೆಟ್ಟಿ, ಉಮೇಶ್ ಕುಲಾಲ್ ನಾವೂರು, ಸುದರ್ಶನ ಜೈನ್, ರಾಜೇಶ್ ರೋಡ್ರಿಗಸ್, ಪ್ರವೀಣ್ ರೋಡ್ರಿಗಸ್ ವಗ್ಗ, ವೆಂಕಪ್ಪ ಪೂಜಾರಿ, ಬಿ ಮೋಹನ್, ಕೆ ಪದ್ಮನಾಭ ರೈ, ಚಂದ್ರಶೇಖರ ಪೂಜಾರಿ, ರಿಯಾಝ್ ಹುಸೈನ್ ಬಂಟ್ವಾಳ, ಸಂಜೀವ ಪೂಜಾರಿ ಬೊಳ್ಳಾಯಿ, ಅರ್ಶದ್ ಸರವು, ಶಬೀರ್ ಸಿದ್ದಕಟ್ಟೆ, ರಝಾಕ್ ಬಾಂಬಿಲ ಮೊದಲಾದವರು ಭಾಗವಹಿಸಿದ್ದರು.

ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೇಬಿ ಕುಂದರ್ ಸ್ವಾಗತಿಸಿ, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಪ್ರಸ್ತಾವನೆಗೈದರು. ಚಂದ್ರಶೇಖರ ಕರ್ಣ ವಂದಿಸಿ, ರಾಜೀವ್ ಶೆಟ್ಟಿ ಎಡ್ತೂರು ಹಾಗೂ ಜಗದೀಶ್ ಕೊಯಿಲ ಕಾರ್ಯಕ್ರಮ ನಿರೂಪಿಸಿದರು.

 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

The views expressed in comments published on www.varthabharati.in are those of the comment writers alone. They do not represent the views or opinions of varthabharati.in or its staff, nor do they represent the views or opinions of  Vartha Bharati Group, or any entity of, or affiliated with, Vartha Bharati Group. varthabharati.in reserves the right to take any or all comments down at any time.
 

Refrain from posting comments that are obscene, defamatory or inflammatory, and do not indulge in personal attacks, name calling or inciting hatred against any community. It is obligatory on www.varthabharati.in to provide the IP address and other details of senders of such comments, to the authority concerned upon request. 

Help us delete comments that do not follow these guidelines by informing us (vbwebdesk@gmail.com). Let's work together to keep the conversation civil. 

www.varthabharati.in ನ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಆ ಕಮೆಂಟ್ ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು  www.varthabharati.in ನ ಅಥವಾ ಅದರ ಸಿಬ್ಬಂದಿಯ, ಅಥವಾ 'ವಾರ್ತಾ ಭಾರತಿ' ಬಳಗಕ್ಕೆ ಸೇರಿದ ಯಾರದ್ದೇ ಅಭಿಪ್ರಾಯಗಳಲ್ಲ. ಈ ಕಮೆಂಟ್ ಗಳನ್ನು ಯಾವುದೇ ಸಂದರ್ಭದಲ್ಲಿ ತೆಗೆದುಹಾಕುವ ಹಕ್ಕನ್ನು  ' ವಾರ್ತಾ ಭಾರತಿ' ಕಾದಿರಿಸಿದೆ. 

ಅಶ್ಲೀಲ, ಮಾನಹಾನಿಕರ ಅಥವಾ ಪ್ರಚೋದನಕಾರಿ ಕಮೆಂಟ್ ಗಳನ್ನು ಹಾಗು ಯಾವುದೇ ವ್ಯಕ್ತಿ, ಸಂಸ್ಥೆ , ಸಮುದಾಯಗಳ ವಿರುದ್ಧ ಹಿಂಸೆ ಪ್ರಚೋದಿಸುವಂತಹ ಕಮೆಂಟ್ ಗಳನ್ನು ಹಾಕಬೇಡಿ. ಅಂತಹ ಕಮೆಂಟ್ ಹಾಕಿದವರ ಐಪಿ ಅಡ್ರೆಸ್ ಹಾಗು ಇತರ ವಿವರಗಳನ್ನು ಸಂಬಂಧಪಟ್ಟ ಅಧಿಕಾರಿಗಳು ಕೇಳಿದಾಗ  ನೀಡುವುದು 'ವಾರ್ತಾ ಭಾರತಿ' ಗೆ ಕಡ್ದಾ ಯವಾಗಿರುತ್ತದೆ.  ಆ ರೀತಿಯ ಯಾವುದೇ ಕಮೆಂಟ್ ಗಳು ಕಂಡು ಬಂದಲ್ಲಿ ಕೂಡಲೇ ನಮಗೆ ತಿಳಿಸಿ (vbwebdesk@gmail.com) ಅದನ್ನು ತೆಗೆದು ಹಾಕಲು ನೇರವಾಗಿ. ಆರೋಗ್ಯಕರ ಚರ್ಚೆಗೆ ಸಹಕರಿಸಿ.

Back to Top