ರಾಜ್ಯದ 224 ವಿಧಾನ ಸಭಾ ಕ್ಷೇತ್ರದಲ್ಲಿ ಕೆಆರ್ಎಸ್ ಸ್ಪರ್ಧಿಸಲಿದೆ: ಗಂಗಾಧರ್
ಮಂಗಳೂರು, ಮಾ.27: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರಕ್ಕೆ ದಯಾನಂದ, ಮಂಗಳೂರು ಉತ್ತರಕ್ಕೆ ಯಶೋಧ ಹಾಗೂ ಮಂಗಳೂರು ದಕ್ಷಿಣಕ್ಕೆ ವಿನ್ನಿ ಪಿಂಟೋ ಅವರನ್ನು ಕೆಆರ್ಎಸ್ ಪಕ್ಷದ ಅಭ್ಯರ್ಥಿಗಳನ್ನಾಗಿ ಘೋಷಿಸಲಾಗಿದೆ ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಗಂಗಾಧರ್ ಕರೀಕೆರೆ ತಿಳಿಸಿದ್ದಾರೆ.
ನಗರದ ಪತ್ರಿಕಾ ಭವನದಲ್ಲಿ ಅವರು ಸೋಮವಾರ ಸುದ್ದಿಗೋಷ್ಠಿಯನ್ನು ದ್ದೇಶಿಸಿ ಮಾತನಾಡಿದರು.
ರಾಜ್ಯದ 224 ವಿಧಾನ ಸಭಾ ಕ್ಷೇತ್ರಗಳಲ್ಲಿ ಕೆಆರ್ಎಸ್ ಪಕ್ಷ ಸ್ಪರ್ಧಿಸಲಿದೆ. ಉಳಿದ ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿಯನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇವೆ. ಪಕ್ಷವು ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ರೂಪಿಸಿದೆ. ರಾಜ್ಯದಲ್ಲಿ ಭ್ರಷ್ಟಚಾರ ಮಿತಿಮೀರಿದೆ ಹಾಗೂ ಆಡಳಿತ ಯಂತ್ರ ಸಂಪೂರ್ಣವಾಗಿ ಕುಸಿದಿದೆ. ವಿವಿಧ ಇಲಾಖೆಗಳಲ್ಲಿ ಲಂಚದ ಪ್ರಕರಣ ಹೆಚ್ಚುತ್ತಿದ್ದು, ಜನರು ತಮ್ಮ ಜಮೀನು, ಕೆಲಸ ಹಾಗೂ ಇತರ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇಂತಹ ಅವ್ಯವ ಸ್ಥೆಯನ್ನು ತೊಲಗಿಸಿ ದಕ್ಷ ಮತ್ತು ಪ್ರಮಾಣಿಕ ವ್ಯವಸ್ಥೆ ಯನ್ನು ನಿರ್ಮಿಸಲು ಕೆಆರ್ಎಸ್ ಪಕ್ಷ ಕಣಕ್ಕಿಳಿದಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಮೂಡಬಿದಿರೆ ಕ್ಷೇತ್ರದ ಅಭ್ಯರ್ಥಿ ದಯಾನಂದ, ಮಂಗಳೂರು ಉತ್ತರದ ಅಭ್ಯರ್ಥಿ ಯಶೋಧ, ಮಂಗ ಳೂರು ದಕ್ಷಿಣದ ಅಭ್ಯರ್ಥಿ ವಿನ್ನಿ ಪಿಂಟೋ ಹಾಗೂ ಪಕ್ಷದ ಜಿಲ್ಲಾ ಸಂಚಾಲಕ ಪ್ರಕಾಶ್ ಉಪಸ್ಥಿತರಿದ್ದರು.