Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ಲೇಖನಗಳು
  4. ಹದ್ದು ಮೀರಿ ಹೋಗುತ್ತಿರುವ ರಾಜ್ಯಪಾಲರು

ಹದ್ದು ಮೀರಿ ಹೋಗುತ್ತಿರುವ ರಾಜ್ಯಪಾಲರು

ವಾರ್ತಾಭಾರತಿವಾರ್ತಾಭಾರತಿ3 July 2023 12:07 AM IST
share
ಹದ್ದು ಮೀರಿ ಹೋಗುತ್ತಿರುವ ರಾಜ್ಯಪಾಲರು
ಬಿಜೆಪಿಯೇತರ ರಾಜ್ಯ ಸರಕಾರಗಳಿಗೆ ರಾಜ್ಯಪಾಲರು ಯಾವ ಪರಿ ಕಿರುಕುಳ ನೀಡುತ್ತಾರೆಂದರೆ ಆ ರಾಜ್ಯಗಳ ವಿಧಾನಸಭೆಗಳು ಅನುಮೋದನೆ ನೀಡಿದ ವಿಧೇಯಕಗಳಿಗೆ ಒಪ್ಪಿಗೆ ನೀಡಲು ವಿನಾಕಾರಣ ವಿಳಂಬ ಮಾಡುತ್ತಾರೆ. ತಮಿಳುನಾಡಿನ ರಾಜ್ಯಪಾಲ ಆರ್.ಎನ್ .ರವಿ ಮತ್ತು ಕೇರಳದ ರಾಜ್ಯಪಾಲ ಆರೀಫ್ ಮುಹಮ್ಮದ್ ಖಾನ್ ಈ ರೀತಿ ಕಿರುಕುಳ ನೀಡುವುದಕ್ಕೆ ಹೆಸರಾಗಿದ್ದಾರೆ.

ಒಂಭತ್ತು ವರ್ಷಗಳ ಹಿಂದೆ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದ ನಂತರ ಭಾರತದ ಒಕ್ಕೂಟ ವ್ಯವಸ್ಥೆಯ ಆಧಾರ ಸ್ತಂಭಗಳ ಮೇಲೆ ನಿರಂತರ ಹಲ್ಲೆ ನಡೆದಿದೆ. ಬಿಜೆಪಿಯಲ್ಲದ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಚುನಾಯಿತ ಸರಕಾರಗಳಿಗೆ ಕಿರುಕುಳ ಕೊಡುವ, ಅವುಗಳನ್ನು ಬುಡಮೇಲು ಮಾಡುವ ಸಂವಿಧಾನ ವಿರೋಧಿ ದುಷ್ಕೃತ್ಯಗಳು ಅವ್ಯಾಹತವಾಗಿ ನಡೆದಿವೆ.

ಇದಕ್ಕಾಗಿ ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಮಾತ್ರವಲ್ಲ ರಾಜಭವನಗಳೆಂಬ ಸೋಮಾರಿಗಳ ಅಡ್ಡೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತದೆ. ಪದೇ ಪದೇ ಇಂಥ ಘಟನೆಗಳು ಮರುಕಳಿಸುತ್ತಿರುವುದರಿಂದ ರಾಜ್ಯಪಾಲರ ಹುದ್ದೆಯ ಔಚಿತ್ಯದ ಬಗ್ಗೆ ಸಹಜವಾಗಿ ಪ್ರಶ್ನೆಗಳು ಉದ್ಭವವಾಗಿವೆ.

ಬಿಜೆಪಿಯೇತರ ಪ್ರತಿಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಚುನಾಯಿತ ಸರಕಾರದ ಕಣ್ಗಾವಲು ಇಡಲು ಮತ್ತು ಅವುಗಳನ್ನು ಅಸ್ಥಿರಗೊಳಿಸಲು ರಾಜ್ಯಪಾಲರು ಕೇಂದ್ರ ಸರಕಾರದ ಎಜಂಟರಂತೆ ಕೆಲಸ ಮಾಡುತ್ತಿದ್ದಾರೆ ಎಂಬುದ ಬರೀ ಆರೋಪವಾಗಿ ಉಳಿದಿಲ್ಲ.

ಇದಕ್ಕೆ ತಾಜಾ ಉದಾಹರಣೆ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಮಾಡಿದ ಅವಾಂತರ. ಈ ರಾಜ್ಯಪಾಲ ತನಗಿರುವ ಸಂವಿಧಾನದ ಲಕ್ಷ್ಮಣ ರೇಖೆ ದಾಟಿ ಡಿಎಂಕೆ ಸರಕಾರದ ಹಿರಿಯ ಸಚಿವ ಸೆಂಥಿಲ್ ಬಾಲಾಜಿ ಅವರನ್ನು ಏಕಾಏಕಿ ಸಂಪುಟದಿಂದ ವಜಾಗೊಳಿಸಿದರು. ಇದು ವಿವಾದದ ಅಲೆ ಎಬ್ಬಿಸುತ್ತಿದ್ದಂತೆ ಮಧ್ಯಪ್ರವೇಶ ಮಾಡಿದ ಕೇಂದ್ರ ಗೃಹ ಸಚಿವಾಲಯದ ಆದೇಶದ ಮೇರೆಗೆ ತಾವು ಮುಂಚೆ ಮಾಡಿದ ಆದೇಶವನ್ನು ತಡೆ ಹಿಡಿದರು. ಈ ಸಚಿವರನ್ನು ವಜಾ ಮಾಡಲು ರಾಜ್ಯಪಾಲರು ಕೊಟ್ಟ ಕಾರಣ ಸಾರಿಗೆ ಇಲಾಖೆಯ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇವರನ್ನು ಬಂಧಿಸಿತ್ತು. ಇದನ್ನೇ ನೆಪ ಮಾಡಿಕೊಂಡು ರಾಜ್ಯಪಾಲ ರವಿ ಅನಗತ್ಯವಾಗಿ ಮೂಗು ತೂರಿಸಿ ತಮ್ಮ ಅಧಿಕಾರ ವ್ಯಾಪ್ತಿಯನ್ನು ಮೀರಿ ಸಂಪುಟದಿಂದ ರವಿ ಅವರನ್ನು ವಜಾ ಮಾಡಿದ್ದರು. ಈ ರೀತಿ ಮಂತ್ರಿಯೊಬ್ಬರನ್ನು ವಜಾ ಮಾಡುವ ಅಧಿಕಾರ ರಾಜ್ಯಪಾಲರಿಗಿಲ್ಲ. ಯಾವುದೇ ಮಂತ್ರಿಯನ್ನು ನೇಮಕ ಮಾಡಿಕೊಳ್ಳುವ ಮತ್ತು ವಜಾ ಮಾಡುವ ವಿವೇಚನಾಧಿಕಾರ ಮುಖ್ಯಮಂತ್ರಿಗೆ ಮಾತ್ರವಿದೆ.

ಅಕ್ರಮ ಹಣ ವರ್ಗಾವಣೆಯಲ್ಲಿ ಬಂಧನಕ್ಕೆ ಒಳಗಾಗಿ ತಿಹಾರ್ ಜೈಲನ್ನು ಸೇರಿದ್ದ ದಿಲ್ಲಿ ಸರಕಾರದ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಪ್ರಕರಣದಲ್ಲೂ ದಿಲ್ಲಿ ರಾಜ್ಯಪಾಲರು ಸಚಿವ ಸಂಪುಟದಿಂದ ವಜಾ ಮಾಡುವ ದುಡುಕಿನ ತೀರ್ಮಾನ ಕೈಗೊಂಡಿರಲಿಲ್ಲ.

ಅದರಲ್ಲೂ ನರೇಂದ್ರ ಮೋದಿಯವರ ನೇತೃತ್ವದ ಬಿಜೆಪಿ ಸರಕಾರ ಬಂದ ನಂತರ ಏಕ ದೇಶ, ಏಕ ಧರ್ಮ, ಏಕ ಸಂಸ್ಕೃತಿ, ಏಕ ಭಾಷೆಯನ್ನು ಹೇರುವ ಭರದಲ್ಲಿ ರಾಜ್ಯಪಾಲರ ಮೂಲಕ ರಾಜ್ಯಗಳಲ್ಲಿನ ಪ್ರತಿಪಕ್ಷಗಳ ಚುನಾಯಿತ ಸರಕಾರಕ್ಕೆ ಕಿರುಕುಳ ನೀಡುತ್ತಾ ಬರಲಾಗಿದೆ.

ರಾಜ್ಯಪಾಲರಿಗಿರುವ ಅಧಿಕಾರದ ಬಗ್ಗೆ ಸಂವಿಧಾನದಲ್ಲಿ ಸ್ಪಷ್ಟ ಉಲ್ಲೇಖವಿದೆ. ಸಂವಿಧಾನದ 153 ವಿಧಿಯಿಂದ 217 ವಿಧಿಯವರೆಗೆ ರಾಜ್ಯಪಾಲರಿಗೆ ಕೆಲವು ಅಧಿಕಾರಗಳನ್ನು ಸಂವಿಧಾನ ನೀಡಿದೆ. ಆ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಪ್ರತಿಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳ ಸರಕಾರಗಳನ್ನು ಉರುಳಿಸಿದ ಪ್ರಕರಣಗಳು ಹಿಂದೆ ನಡೆದಿವೆ.

1994 ಮಾರ್ಚ್ ತಿಂಗಳಲ್ಲಿ ಎಸ್.ಆರ್.ಬೊಮ್ಮಾಯಿಯವರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಚಾರಿತ್ರಿಕವಾಗಿದೆ. ರಾಜ್ಯಪಾಲರಿಗಿರುವ ಅಧಿಕಾರ ವ್ಯಾಪ್ತಿಯ ಬಗ್ಗೆ ಖಚಿತವಾಗಿ ಹೇಳಿದೆ. ಆದರೂ ರಾಜ್ಯಪಾಲರು ತಮ್ಮನ್ನು ನೇಮಕ ಮಾಡಿದ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಪಕ್ಷವನ್ನು ಒಲೈಸಲು ಸಂವಿಧಾನದ ವಿಧಿ ವಿಧಾನಗಳನ್ನು ಗಾಳಿಗೆ ತೂರಿ ಮನ ಬಂದಂತೆ ವರ್ತಿಸುತ್ತಾ ಬಂದಿದ್ದಾರೆ.

ರಾಜ್ಯಪಾಲರಿಗೆ ಹಲವಾರು ಮಂದಿ ಕಾನೂನು ಸಲಹೆಗಾರರಿರುತ್ತಾರೆ. ಯಾವುದೇ ವಿವಾದಾತ್ಮಕ ತೀರ್ಮಾನ ಕೈಗೊಳ್ಳುವ ಮುನ್ನ ಅಟರ್ನಿ ಜನರಲ್ ಹಾಗೂ ಕೇಂದ್ರ ಗೃಹ ಸಚಿವಾಲಯದ ಜೊತೆಗೆ ಸಮಾಲೋಚನೆ ಮಾಡಬೇಕು. ಈ ವಿಷಯದಲ್ಲಿ ತಮಿಳುನಾಡು ರಾಜ್ಯಪಾಲರು ಎಡವಿದ್ದಾರೆ. ಅವರನ್ನು ತಕ್ಷಣ ವಜಾ ಮಾಡಬೇಕೆಂಬ ಬಗ್ಗೆ ಪ್ರತಿಪಕ್ಷಗಳ ಬೇಡಿಕೆ ನ್ಯಾಯ ಸಮ್ಮತವಾಗಿದೆ.

ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿದ್ದ ಜಗದೀಪ ಧನ್ಕರ್ ಅಲ್ಲಿನ ಮಮತಾ ಬ್ಯಾನರ್ಜಿಯವರ ನೇತೃತ್ವದ ತೃಣಮೂಲ ಕಾಂಗ್ರೆಸ್ ಸರಕಾರಕ್ಕೆ ಕೊಟ್ಟ ಕಿರುಕುಳ ಅಷ್ಟಿಷ್ಟಲ್ಲ. ಪೌರತ್ವ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ ಕೇರಳ ಸರಕಾರ ನ್ಯಾಯಾಲಯಕ್ಕೆ ಹೋದಾಗ ಅಲ್ಲಿನ ರಾಜ್ಯಪಾಲ ಆರೀಫ್ ಮುಹಮ್ಮದ್ ಖಾನ್ ಅಪಸ್ವರ ತೆಗೆದಿದ್ದರು. ಕೆಲ ವಿಶ್ವವಿದ್ಯಾನಿಲಯಗಳ ಕುಲಪತಿಗಳ ನೇಮಕಾತಿ ವಿಷಯದಲ್ಲೂ ತಕರಾರು ಮಾಡಿದರು. ಇದರಿಂದ ರೋಸಿ ಹೋದ ಪಿಣರಾಯಿ ವಿಜಯನ್ ನೇತೃತ್ವದ ಎಡರಂಗ ಸರಕಾರ ವಿಶ್ವವಿದ್ಯಾನಿಲಯಗಳ ಕುಲಪತಿ ಅಧಿಕಾರವನ್ನು ರಾಜ್ಯಪಾಲರಿಂದ ತೆಗೆದು ಹಾಕುವ ಪರಿಸ್ಥಿತಿ ನಿರ್ಮಾಣ ವಾಯಿತು. ಭಾರತದ ರಾಜಧಾನಿ ದಿಲ್ಲಿಯಲ್ಲಂತೂ ಅಧಿಕಾರಿಗಳ ವರ್ಗಾವಣೆ ವಿವಾದ ದೊಡ್ಡ ಸುದ್ದಿಯಾಗಿದೆ.

ಸಂವಿಧಾನದ ನಿಯಮಾವಳಿ ಪ್ರಕಾರ ರಾಜ್ಯಗಳ ಶಾಸನ ಸಭೆಗಳು ಅನುಮೋದನೆ ನೀಡಿದ ವಿಧೇಯಕಗಳು ಜಾರಿಯಾಗಬೇಕೆಂದರೆ ರಾಜ್ಯಪಾಲರ ಅಂಕಿತ ಬೇಕು. ಈ ಸಂಬಂಧದಲ್ಲಿ ಸಂವಿಧಾನವು ರಾಜ್ಯಪಾಲರಿಗೆ ಮೂರು ಆಯ್ಕೆಯನ್ನು ನೀಡಿದೆ. ಮೊದಲನೆಯದು ವಿಧೇಯಕಕ್ಕೆ ಅಂಕಿತ ಹಾಕುವುದು, ಎರಡನೆಯದು ವಿಧೇಯಕವನ್ನು ರಾಷ್ಟ್ರಪತಿಯವರಿಗೆ ಕಳಿಸಿಕೊಡುವುದು, ಮೂರನೆಯದು ಅಂಕಿತ ಹಾಕದೇ ಈ ವಿಧೇಯಕವನ್ನು ತಮ್ಮ ಅಭಿಪ್ರಾಯಗಳ ಸಹಿತ ಸಂಬಂಧಿಸಿದ ಶಾಸನ ಸಭೆಗಳಿಗೆ ಸಾಧ್ಯವಾದಷ್ಟು ಬೇಗ ವಾಪಸ್ ಕಳಿಸುವುದು. ಹೀಗೆ ವಾಪಸ್ ಕಳಿಸಿದ ಸಂದರ್ಭದಲ್ಲಿ ಶಾಸನಸಭೆಯು ಈ ವಿಧೇಯಕಕಕ್ಕೆ ಮತ್ತೆ ಅನುಮೋದನೆ ನೀಡಿದರೆ ರಾಜ್ಯಪಾಲರು ಸದರಿ ವಿಧೇಯಕಕ್ಕೆ ಸಹಿ ಹಾಕಲೇಬೇಕು ಬೇರೆ ಆಯ್ಕೆಗಳಿಲ್ಲ.

ಶಾಸನಸಭೆಗಳು ಅಂಗೀಕರಿಸಿದ ವಿಧೇಯಕಗಳಿಗೆ ಅಂಕಿತ ಹಾಕದೇ ಸುಮ್ಮನೇ ಕುಳಿತುಕೊಳ್ಳುವುದು ರಾಜ್ಯಪಾಲರು ಶಾಸನ ಸಭೆಗಳನ್ನು ಅವಮಾನಿಸಿದಂತಲ್ಲದೆ ಬೇರೇನೂ ಅಲ್ಲ. ವಿಧೇಯಕಗಳು ಕಾಯ್ದೆಗಳಾಗದಂತೆ ತಡೆಯುವ ಮೂಲಕ ರಾಜ್ಯಪಾಲರು ರಾಜ್ಯದ ಆಡಳಿತದ ನಿರ್ವಹಣೆಗೆ ಅಡ್ಡಿಯುಂಟು ಮಾಡುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ ಯಾವುದೇ ಕಾನೂನು ರಾಜ್ಯಕ್ಕೆ ಉಪಯುಕ್ತ ಎಂಬುದನ್ನು ತೀರ್ಮಾನಿಸುವ ಅಧಿಕಾರ ಇರುವುದು ಅಲ್ಲಿನ ವಿಧಾನಸಭೆಗೆ ಮಾತ್ರ. ಯಾವುದೇ ಕಾಯ್ದೆಗಳನ್ನು ಜಾರಿಗೊಳಿಸುವುದು ಅಲ್ಲಿನ ಸರಕಾರದ ಹೊಣೆಗಾರಿಕೆ. ಇದರಲ್ಲಿ ರಾಜ್ಯಪಾಲರ ಹಸ್ತಕ್ಷೇಪ ಅನಗತ್ಯ.

ಬಿಜೆಪಿಯೇತರ ರಾಜ್ಯ ಸರಕಾರಗಳಿಗೆ ರಾಜ್ಯಪಾಲರು ಯಾವ ಪರಿ ಕಿರುಕುಳ ನೀಡುತ್ತಾರೆಂದರೆ ಆ ರಾಜ್ಯಗಳ ವಿಧಾನಸಭೆಗಳು ಅನುಮೋದನೆ ನೀಡಿದ ವಿಧೇಯಕಗಳಿಗೆ ಒಪ್ಪಿಗೆ ನೀಡಲು ವಿನಾಕಾರಣ ವಿಳಂಬ ಮಾಡುತ್ತಾರೆ. ತಮಿಳುನಾಡಿನ ರಾಜ್ಯಪಾಲ ಆರ್.ಎನ್ .ರವಿ ಮತ್ತು ಕೇರಳದ ರಾಜ್ಯಪಾಲ ಆರೀಫ್ ಮುಹಮ್ಮದ್ ಖಾನ್ ಈ ರೀತಿ ಕಿರುಕುಳ ನೀಡುವುದಕ್ಕೆ ಹೆಸರಾಗಿದ್ದಾರೆ.

ಕೇಂದ್ರದ ಅಧಿಕಾರ ಸೂತ್ರವನ್ನು ಹಿಡಿದ ಪಕ್ಷಗಳು ರಾಜ್ಯಪಾಲರನ್ನು ಬಳಸಿಕೊಂಡು ಭಿನ್ನ ಪಕ್ಷದ ಸರಕಾರಕ್ಕೆ ಕಿರುಕುಳ ನೀಡುತ್ತ ಬಂದಿರುವುದು ಎಲ್ಲರಿಗೂ ತಿಳಿದ ಸಂಗತಿಯಾಗಿದೆ. ನರೇಂದ್ರ ಮೋದಿಯವರ ನೇತೃತ್ವದ ಸರಕಾರ ಕೇಂದ್ರದಲ್ಲಿ ಬಂದ ನಂತರ ಇಂಥ ಕಿರುಕುಳ ಹೆಚ್ಚಾಗಿದೆ. ಸರಕಾರದ ದೈನಂದಿನ ಕಾರ್ಯನಿರ್ವಹಣೆಯಲ್ಲಿ ರಾಜ್ಯಪಾಲರ ಹಸ್ತಕ್ಷೇಪದ ವಿರುದ್ಧ ರಾಜ್ಯ ಸರಕಾರಗಳು ಒಕ್ಕೊರಲಿನಿಂದ ಧ್ವನಿಯೆತ್ತಬೇಕಾಗಿದೆ.

ವಾಸ್ತವವಾಗಿ ರಾಜ್ಯಪಾಲರ ಹುದ್ದೆಯೇ ಬೊಕ್ಕಸಕ್ಕೆ ಭಾರವಾಗಿದೆ. ರಾಜಭವನಗಳು ನಿವೃತ್ತ ಇಲ್ಲವೇ ಅತೃಪ್ತ ರಾಜಕಾರಣಿಗಳ ಗಂಜಿ ಕೇಂದ್ರಗಳಾಗಿವೆ. ಕೇಂದ್ರದಲ್ಲಿ ಇರುವ ಸರಕಾರದ ಏಜೆಂಟರಂತೆ ರಾಜ್ಯಪಾಲರು ವರ್ತಿಸುತ್ತ ಬಂದಿದ್ದಾರೆ. ಅಂತಲೇ ಈ ಹುದ್ದೆಯ ಔಚಿತ್ಯದ ಬಗ್ಗೆ ಅನೇಕ ಬಾರಿ ಚರ್ಚೆಗಳು ನಡೆದಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X