ಲಾರಿ ಢಿಕ್ಕಿ: ಸೈಕಲ್ ಸವಾರ ಮೃತ್ಯು
ಗಂಗೊಳ್ಳಿ, ಡಿ.9: ಲಾರಿಯೊಂದು ಸೈಕಲ್ಗೆ ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಮೃತಪಟ್ಟ ಘಟನೆ ಡಿ.9ರಂದು ಬೆಳಗ್ಗೆ 8:30ರ ಸುಮಾರಿಗೆ ತ್ರಾಸಿ ಜಂಕ್ಷನ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.
ಮೃತರನ್ನು ಆನಂದ ಹೆಬ್ಬಾರ್(69) ಎಂದು ಗುರುತಿಸಲಾಗಿದೆ. ಇವರು ದೇವರ ಪೂಜಾ ಸಾಮಾಗ್ರಿ ಸಂಗ್ರಹಿಸಲು ಮರವಂತೆ ಕಡೆಯಿಂದ ತ್ರಾಸಿ ಜಂಕ್ಷನ್ ಕಡೆಗೆ ಸೈಕಲ್ನಲ್ಲಿ ಬರುತ್ತಿದ್ದಾಗ ಕುಂದಾಪುರ ಕಡೆಯಿಂದ ಬೈಂದೂರು ಕಡೆಗೆ ಹೋಗುತ್ತಿದ್ದ ಲಾರಿ ಢಿಕ್ಕಿ ಹೊಡೆಯಿತು. ಇದರಿಂದ ಸೈಕಲ್ ಸವಾರ ಆನಂದ ಹೆಬ್ಬಾರ್ ಗಂಭೀರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಗೆ ಸಾಗಿಸುವಾಗ ಬೆಳಗ್ಗೆ 9:30ರ ಸುಮಾರಿಗೆ ದಾರಿ ಮಧ್ಯೆ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story