ಉಡುಪಿಯಲ್ಲಿ ಬಿಜೆಪಿ ಸಂಭ್ರಮಾಚರಣೆ
ಉಡುಪಿ, ಡಿ.18: ಹಿಮಾಚಲ ಪ್ರದೇಶ ಮತ್ತು ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಡೆದ ಅಭೂತಪೂರ್ವ ಜಯದ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಸೋಮವಾರ ಕಚೇರಿ ಮುಂಭಾಗ ಪಟಾಕಿ ಸಿಡಿಸಿ ಸಂಭ್ರಾಮಚರಣೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಆಡಳಿತ ವ್ಯವಸ್ಥೆ ಅಭಿವೃದ್ಧಿ ವಿಚಾರದಲ್ಲಿ ಪ್ರಾಮಾಣಿಕವಾಗಿ ತೊಡಗಿಸಿ ಕೊಂಡಾಗ ಜನರು ಹೇಗೆ ಜೊತೆಯಾಗುತ್ತಾರೆ ಎಂಬುದಕ್ಕೆ ಗುಜರಾತ್ ಚುನಾವಣೆ ಫಲಿತಾಂಶವೇ ಸಾಕ್ಷಿ ಎಂದರು.ಎರಡು ರಾಜ್ಯಗಳ ಚುನಾವಣಾ ಫಲಿತಾಂಶ, ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ ಫಲಿತಾಂಶದ ಮೇಲೂ ಪರಿಣಾಮ ಬೀರಲಿದ್ದು ಬಿಜೆಪಿ ಜಯಭೇರಿ ಭಾರಿಸಲಿದೆ ಎಂದು ಆಶಾವಾದ ವ್ಯಕ್ತಪಡಿಸಿದರು.
ವಿಜಯೋತ್ಸವದಲ್ಲಿ ಬಿಜೆಪಿ ಮುಖಂಡರಾದ ಯಶಪಾಲ್ ಸುವರ್ಣ, ನಯನ ಗಣೇಶ್, ಕಟಪಾಡಿ ಶಂಕರಪೂಜಾರಿ, ದಿನಕರ ಬಾಬು, ಶ್ಯಾಮಲ ಕುಂದರ್, ಕುತ್ಯಾರು ನವೀನ್ ಶೆಟ್ಟಿ, ಶ್ರೀಶ ನಾಯಕ್, ಸುರೇಶ್ ನಾಯಕ್ ಕುಯಿಲಾಡಿ, ಗೀತಾಂಜಲಿ ಸುವರ್ಣ, ರಶ್ಮಿತ ಬಾಲಕೃಷ್ಣ, ಸಂದ್ಯ ರಮೇಶ್, ಸುಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.