ಸುಳ್ಯ: ಬಸ್ಸಿನಡಿಗೆ ಬಿದ್ದು ಶಾಲಾ ವಿದ್ಯಾರ್ಥಿನಿ ಮೃತ್ಯು
ಸುಳ್ಯ, ಫೆ.13: ಚಾಲಕನ ನಿರ್ಲಕ್ಷ್ಯದಿಂದ ಶಾಲಾ ಬಸ್ಸಿನಡಿಗೆ ಬಿದ್ದು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಒಂದನೇ ತರಗತಿ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಸುಳ್ಯದ ಅರಂತೋಡು ಗ್ರಾಮದ ಬಿಳಿಯಾರು ಎಂಬಲ್ಲಿ ನಡೆದಿದೆ.
ಅರಂತೋಡು ನಿವಾಸಿ ಅಪ್ಪಚ್ಚು ಕುಂಞಿ ಎಂಬವರ ಪುತ್ರಿ ಅಗ್ನೇಯ ಬಾಲು ಮೃತ ವಿದ್ಯಾರ್ಥಿನಿ. ಸುಳ್ಯ ಕೆವಿಜಿ ಇಂಟರ್ ನ್ಯಾಶನಲ್ ಸ್ಕೂಲ್ ವಿದ್ಯಾರ್ಥಿನಿಯಾಗಿದ್ದ ಈಕೆ ಸೋಮವಾರ ಸಂಜೆ ಶಾಲೆಯಿಂದ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಬಾಲಕಿ ಸ್ಕೂಲ್ ಬಸ್ಸಿನಿಂದ ಇಳಿದ ವೇಳೆ ಚಾಲಕ ನಿರ್ಲಕ್ಷ್ಯದಿಂದ ಏಕಾಏಕಿ ಬಸ್ ಚಲಾಯಿಸಿದ ಪರಿಣಾಮ ಆಕೆ ಬಸ್ಸಿನಡಿಗೆ ಬಿದ್ದು ಗಂಭೀರ ಗಾಯಗೊಂಡಿದ್ದಳು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಅಗ್ನೇಯಬಾಲು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.
ಘಟನೆಗೆ ಸಂಬಂಧಿಸಿ ಬಸ್ ಚಾಲಕ ಧನಂಜಯ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದ್ದು, ಆತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Next Story