ಸಾಲೆತ್ತೂರು: ಎಸ್.ಡಿ.ಪಿ.ಐ. ಕಾರ್ಯಕರ್ತರ ಸಭೆ
ವಿಟ್ಲ, ಎ.9: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ(ಎಸ್.ಡಿ.ಪಿ.ಐ.) ಕೊಲ್ನಾಡು ಗ್ರಾಮ ಸಮಿತಿಯ ವತಿಯಿಂದ ಚುನಾವಣಾ ಪೂರ್ವ ತಯಾರಿಯ ಅಂಗವಾಗಿ ಕಾರ್ಯಕರ್ತರ ಸಭೆಯು ಸಾಲೆತ್ತೂರಿನಲ್ಲಿ ನಡೆಯಿತು
ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಿಯಾಝ್ ಫರಂಗಿಪೇಟೆ, ಪಿ.ಎಫ್.ಐ. ಬಂಟ್ವಾಳ ತಾಲೂಕು ಅಧ್ಯಕ್ಷ ಇಜಾಝ್ ಅಹ್ಮದ್ ಮಾತನಾಡಿದರು.
ಸಭೆಯಲ್ಲಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಅಶ್ರಫ್ ಮಂಚಿ ಪ್ರಾಸ್ತಾವಿಕ ಮಾತನಾಡಿದರು. ಮುಖಂಡರಾದ ಬಶೀರ್ ಕೊಲ್ನಾಡ್, ರಫೀಕ್ ಮಂಚಿ ಉಪಸ್ಥಿತರಿದ್ದರು ಖಲಂದರ್ ಪರ್ತಿಪ್ಪಾಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.
Next Story