ಉಡುಪಿ : ಮತದಾನ ಜಾಗೃತಿಗಾಗಿ ಜಾಥಾ
ಉಡುಪಿ, ಎ.17: ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ, ಜಿಲ್ಲೆಯಲ್ಲಿ ಮತದಾನ ಜಾಗೃತಿ ಅಭಿಯಾನದ ಅಂಗವಾಗಿ ಅಂಗನವಾಡಿ, ಆಶಾ ಕಾರ್ಯಕರ್ತೆಯರು ಹಾಗೂ ಸ್ತ್ರೀ ಶಕ್ತಿಸಂಘಗಳ ಸದಸ್ಯರಿಂದ ಕಾಪುವಿನಲ್ಲಿ ಇಂದು ಜಾಥಾ, ಮಾನವ ಸರಪಳಿ ರಚನೆ ಹಾಗೂ ಮೈಮ್ ಶೋ ಮುಖಾಂತರ ಮತದಾನ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾಪು ವೀರಭದ್ರ ದೇವಸ್ಥಾನದ ಸರ್ಕಲ್ನಿಂದ ಲಕ್ಷ್ಮಿಜನಾರ್ಧನ ದೇವಸ್ಥಾನ ದವರೆಗೆ ಚೆಂಡೆಯೊಂದಿಗೆ ನಡೆದ ಜಾಥಾದಲ್ಲಿ ಸುಮಾರು 400ಕ್ಕೂ ಅಧಿಕ ಮಂದಿ ಅಂಗನವಾಡಿ,ಆಶಾ ಕಾರ್ಯಕರ್ತೆಯರು ಹಾಗೂ ಸ್ತ್ರೀ ಶಕ್ತಿ ಗುಂಪುಗಳ ಸದಸ್ಯರು ಭಾಗವಹಿಸಿದ್ದರು. ಜಾಥಾದಲ್ಲಿ ಮತದಾನದ ಬಗ್ಗೆ ಪ್ಲೆ ಕಾರ್ಡ್ ಮತ್ತು ಮಾಹಿತಿ ಫಲಕಗಳು, ಆಯೋಗದಿಂದ ನೀಡಿದ ಜಾಗೃತಿ ಗೀತೆಗಳು ಮೊಳಗಿದವು. ಮಾನವ ಸರಪಳಿ ರಚಿಸುವ ಮೂಲಕ ಎಲ್ಲರೂ ಮತದಾನದಲ್ಲಿ ಪಾಲ್ಗೊಳ್ಳಿ ಎಂಬ ಸಂದೇಶವನ್ನುಕಾಪುವಿನಲ್ಲಿಂದು ಬಿತ್ತರಿಸಲಾಯಿತು.
ನಂತರ ಲಕ್ಷ್ಮಿಜನಾರ್ಧನ ದೇವಸ್ಥಾನದ ಸಭಾಂಗಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಮತದಾನದ ಕುರಿತು ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾ ಡಿದ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಹಾಗೂ ಜಿಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶಿವಾನಂದ ಕಾಪಶಿ, ಈ ಬಾರಿ ಚುನಾವಣಾ ಆಯೋಗವು ನೈತಿಕ ಮತದಾನಕ್ಕೆ ಹೆಚ್ಚಿನ ಮಹತ್ವ ನೀಡಿದ್ದು, ಪ್ರತಿಯೊಬ್ಬ ಮತದಾರರು ಯಾವುದೇ ಆಸೆ,ಆಮಿಷ, ಒತ್ತಡ, ಪ್ರಲೋನೆಗಳಿಗೆ ಒಳಗಾಗದೇ ತಮ್ಮ ಸ್ವಂತ ವಿವೇಚನೆಯನ್ನು ಬಳಸಿ ಯೋಗ್ಯ ಅಭ್ಯರ್ಥಿಗೆ ಮತದಾನ ಮಾಡುವಂತೆ ತಿಳಿಸಿದರು. ಯಾವುದೇ ಭಯ, ಒತ್ತಡ, ಸಮಸ್ಯೆಗಳಿದ್ದಲ್ಲಿ ಜಿಲ್ಲಾಡಳಿತದ ಗಮನಕ್ಕೆ ತರುವಂತೆ ತಿಳಿಸಿದರು.
ಈ ಬಾರಿಯ ಚುನಾವಣೆಯಲ್ಲಿ ಬಳಸುವ ವಿವಿ ಪ್ಯಾಟ್ ಯಂತ್ರದ ಕುರಿತಂತೆ ರಾಜ್ಯ ಸಂಪನ್ಮೂಲ ವ್ಯಕ್ತಿ ಅಶೋಕ್ ಕಾಮತ್ ಪ್ರಾತ್ಯಕ್ಷಿಕೆ ತೋರಿಸಿದರು. ಮತದಾನ ಜಾಗೃತಿ ಕುರಿತಂತೆ ಏರ್ಪಡಿಸಿದ್ದ ಮೈಮ್ ಶೋ ಯಶಸ್ವಿಯಾಯಿತು.ಈ ಬಾರಿಯ ಚುನಾವಣೆಯಲ್ಲಿ ಬಳಸುವ ವಿವಿ ಪ್ಯಾಟ್ ಯಂತ್ರದ ಕುರಿತಂತೆ ರಾಜ್ಯ ಸಂಪನ್ಮೂಲ ವ್ಯಕ್ತಿ ಅಶೋಕ್ ಕಾಮತ್ ಪ್ರಾತ್ಯಕ್ಷಿಕೆ ತೋರಿಸಿದರು.
ಮತದಾನ ಜಾಗೃತಿ ಕುರಿತಂತೆ ಏರ್ಪಡಿಸಿದ್ದ ಮೈಮ್ ಶೋ ಯಶಸ್ವಿಯಾಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪ ನಿರ್ದೇಶಕಿ ಗ್ರೇಸಿ ಗೊನ್ಸಾಲ್ವಿಸ್, ಉಡುಪಿ ತಾಪಂ ಕಾರ್ಯ ನಿರ್ವಹಣಾಧಿಕಾರಿ ಮೋಹನ್ರಾಜ್, ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಕೆ. ಉಪಸ್ಥಿತರಿದ್ದರು.
ತಾಲೂಕು ಶಿಶು ಅಭಿವೃದ್ದಿ ಯೋಜನಾಧಿಕಾರಿ ವೀಣಾ ಸ್ವಾಗತಿಸಿದರು. ಪಿಡಿಓ ಮಹೇಶ್ ಕಾರ್ಯಕ್ರಮ ನಿರೂಪಿಸಿದರು.