ಅಕ್ರಮ ಗಾಂಜಾ ಮಾರಾಟ: ಓರ್ವನ ಸೆರೆ
ಉಡುಪಿ, ಮೇ 21: ಉಡುಪಿ ಶ್ರೀಕೃಷ್ಣ ಮಠದ ಪಾರ್ಕಿಂಗ್ ಸ್ಥಳದ ಬಳಿ ಮೇ 21ರಂದು ಅಕ್ರಮವಾಗಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ಓರ್ವನನ್ನು ಉಡುಪಿ ಡಿಸಿಐಬಿ ಪೊಲೀಸರು ಬಂಧಿಸಿದ್ದಾರೆ.
ಮೂಲ ಶೃಂಗೇರಿ ತಾಲೂಕಿನ ಪ್ರಸ್ತುತ ಶಿವಮೊಗ್ಗ ರೈಲ್ವೆ ನಿಲ್ದಾಣ ಹಿಂಬದಿ ನಿವಾಸಿ ಫಜಲೂರ್ ರೆಹಮಾನ್ ಯಾನೆ ಮುನ್ನಾ(37) ಬಂಧಿತ ಆರೋಪಿ. ಈತನಿಂದ 35ಸಾವಿರ ರೂ. ಮೌಲ್ಯದ 1.140 ಕೆ.ಜಿ. ತೂಕದ ಗಾಂಜಾ ಹಾಗೂ ಎರಡು ಮೊಬೈಲ್ಗಳನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಉಡುಪಿ ನಗರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ಬ.ನಿಂಬರ್ಗಿ ನಿರ್ದೇಶನದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕುಮಾರ ಚಂದ್ರ ಮತ್ತು ಉಡುಪಿ ಡಿವೈಎಸ್ಪಿ ಟಿ.ಆರ್.ಜೈಶಂಕರ್ ಮಾರ್ಗದರ್ಶನದಲ್ಲಿ, ಉಡುಪಿ ಡಿಸಿಐಬಿ ನಿರೀಕ್ಷಕ ಸಂಪತ್ ಕುಮಾರ್ ನೇತೃತ್ವದಲ್ಲಿ ಡಿಸಿಐಬಿ ಎಎಸ್ಸೈ ರವಿಚಂದ್ರ ಹಾಗೂ ಸಿಬ್ಬಂದಿ ಗಳಾದ ಸುರೇಶ, ಸಂತೋಷ ಕುಂದರ್, ಚಂದ್ರ ಶೆಟ್ಟಿ, ರಾಮು ಹೆಗ್ಡೆ, ರಾಘವೇಂದ್ರ ಉಪ್ಪುಂದ, ಪ್ರವೀಣ್, ರಾಜ್ ಕುಮಾರ್, ದಯಾನಂದ ಪ್ರಭು, ಶಿವಾನಂದ ಹಾಗೂ ಚಾಲಕ ರಾಘವೇಂದ್ರ ಈ ಕಾರ್ಯಾಚರಣೆ ನಡೆಸಿದ್ದಾರೆ.