ಪಾಣೆಮಂಗಳೂರು: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು
ಬಂಟ್ವಾಳ, ಮಾ. 4: ಆಕಸ್ಮಿಕವಾಗಿ ತೆಂಗಿನ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಪಾಣೆಮಂಗಳೂರು ಎಂಬಲ್ಲಿ ಸೋಮವಾರ ನಡೆದಿದೆ.
ಬಂಟ್ವಾಳ ತಾಲೂಕಿನ ಬೊಂಡಾಲ ನಿವಾಸಿ ಕೇಶವ ಪೂಜಾರಿ (60) ಮೃತಪಟ್ಟವರು. ಪಾಣೆಮಂಗಳೂರಿನ ಗುಂಡೂರು ಆತ್ಮರಂಜನ್ ಎಂಬವರ ತೆಂಗಿನತೋಟದಲ್ಲಿ ಕಾಯಿ ತೆಗೆಯುವ ಸಂದರ್ಭದಲ್ಲಿ ಮರದಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಇವರನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಬಂಟ್ವಾಳ ನಗರ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.
Next Story