ಪುತ್ತೂರು ಸಖಾಫಿ ಕೌನ್ಸಿಲ್ ವತಿಯಿಂದ ಹಜ್ ಯಾತ್ರಾರ್ಥಿಗಳಿಗೆ ಬೀಳ್ಕೊಡುಗೆ
ಪುತ್ತೂರು: ಈ ಬಾರಿಯ ಹಜ್ ಯಾತ್ರೆ ನಿರ್ವಹಿಸಲಿರುವ ಪುತ್ತೂರು ತಾಲೂಕು ಸಖಾಫಿ ಕೌನ್ಸಿಲ್ ಇದರ ಪ್ರಮುಖರಿಗೆ ಬೀಳ್ಕೊಡುಗೆ ಸಮಾರಂಭ ಪುತ್ತೂರು ತಾಲೂಕು ಸಖಾಫಿ ಕೌನ್ಸಿಲ್ ವತಿಯಿಂದ ಪುತ್ತೂರಿನ ಸುನ್ನೀ ಸೆಂಟರ್ನಲ್ಲಿ ಇತ್ತೀಚೆಗೆ ನಡೆಯಿತು.
ಪುತ್ತೂರು ತಾಲೂಕು ಸಖಾಫಿ ಕೌನ್ಸಿಲ್ ಅಧ್ಯಕ್ಷ ಅಬ್ದುಲ್ ಅಝೀಝ್ ಸಖಾಫಿ ಅಧ್ಯಕ್ಷತೆ ವಹಿಸಿದ್ದರು. ಅಬ್ದುಲ್ ಮಜೀದ್ ಸಖಾಫಿ ಉದ್ಘಾಟಿಸಿ ಶುಭ ಹಾರೈಸಿದರು. ಇಬ್ರಾಹಿಂ ಸಖಾಫಿ ಕಬಕ ಅಬಿನಂದನಾ ಭಾಷಣ ಮಾಡಿದರು.
ಈ ಸಂದರ್ಭದಲ್ಲಿ ಹಜ್ ಯಾತ್ರಾರ್ಥಿಗಳಾದ ಕಾವು ಬದ್ರಿಯಾ ಟ್ರಸ್ಟ್ನ ಕನ್ವೀನರ್ ಅಬ್ದುಲ್ ಲತೀಫ್ ಸಖಾಫಿ ಮಾಢನ್ನೂರು, ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಶರೀಅತ್ ಕಾಲೇಜ್ನ ಆಡಳಿತ ಮಂಡಳಿಯ ಕೋಶಾಧಿಕಾರಿ ಬಶೀರ್ ಹಾಜಿ ಶೇಖಮಲೆ, ಕಮ್ಮಾಯಿ ಬದ್ರಿಯಾ ಜುಮ್ಮಾ ಮಸೀದಿಯ ಮಾಜಿ ಕಾರ್ಯದರ್ಶಿಗಳಾದ ಅಬ್ದುಲ್ ಲತೀಫ್ ಹಾಜಿ, ಅಬ್ದುಲ್ ರಹಿಮಾನ್ ಹಾಜಿ ಅರಮನೆ ಇವರನ್ನು ಶಾಲು ಹೊದಿಸಿ, ಸ್ಮರಣಿಕೆ ನೀಡಿ ಬೀಳ್ಕೊಡಲಾಯಿತು.
ಕಾರ್ಯಕ್ರಮದಲ್ಲಿ ಅಬ್ದುರ್ರಹ್ಮಾನ್ ಸಖಾಫಿ ಬೀಟಿಗೆ, ರಝ್ಹಾಕ್ ಸಖಾಫಿ ಮಠ, ರಹಿಂ ಸಖಾಫಿ ಸಾಜ, ಶಮೀರ್ರ ಸಖಾಫಿ ಬೈತಡ್ಕ ಉಪಸ್ಥಿತರಿದ್ದರು.
ಪುತ್ತೂರು ತಾಲೂಕು ಸಖಾಫಿ ಕೌನ್ಸಿಲ್ ಪ್ರಧಾನ ಕಾರ್ಯದರ್ಶಿ ನಾಸಿರ್ ಸಖಾಫಿ ಕಟ್ಟತ್ತಾರು ಸ್ವಾಗತಿಸಿದರು. ಹಮೀದ್ ಸಖಾಫಿ ಪಾಣಾಜೆ ವಂದಿಸಿದರು.