ವರ್ಕಾಡಿ: ಹಾಡಹಗಲೇ ಕಾಲೇಜು ವಿದ್ಯಾರ್ಥಿಯ ಅಪಹರಣ
ಮಂಜೇಶ್ವರ, ಜು.22: ಪಿಯು ಕಾಲೇಜು ವಿದ್ಯಾರ್ಥಿಯೊಬ್ಬನನ್ನು ಕಾರಿನಲ್ಲಿ ಬಂದ ತಂಡವೊಂದು ಹಾಡಹಗಲೇ ಅಪಹರಿಸಿದ ಘಟನೆ ಇಂದು ಬೆಳಗ್ಗೆ ಮಂಜೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ವರ್ಕಾಡಿಯ ಕಳಿಯೂರು ಎಂಬಲ್ಲಿ ನಡೆದಿರುವುದು ವರದಿಯಾಗಿದೆ.
ಕಳಿಯೂರು ಪದವು ನಿವಾಸಿ ಹಸನ್ ಕುಂಞಿ ಎಂಬವರ ಪುತ್ರ ಹಾರಿಸ್(17) ಅಪಹರಣಕ್ಕೊಳಗಾದ ವಿದ್ಯಾರ್ಥಿ. ತೊಕ್ಕೊಟ್ಟಿನ ಖಾಸಗಿ ಕಾಲೇಜೊಂದರ ಪಿಯು ವಿದ್ಯಾರ್ಥಿಯಾಗಿರುವ ಹಾರಿಸ್ ತನ್ನ ಸಹೋದರಿಯೊಂದಿಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಕಾರೊಂದರಲ್ಲಿ ಬಂದ ತಂಡ ಕೋಳಿಯೂರು ಪದವಿನಲ್ಲಿರುವ ಆಡಿಟೋರಿಯಂ ಬಳಿ ಹಾರಿಸ್ ಸಂಚರಿಸುತ್ತಿದ್ದ ದ್ವಿಚಕ್ರ ವಾಹನವನ್ನು ಅಡ್ಡಗಟ್ಟಿ ಆತನನ್ನು ಅಪಹರಿಸಿದೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಲಾಗಿದೆ.
ಮಂಜೇಶ್ವರ ಪೊಲೀಸರು ಈ ನಿಟ್ಟಿನಲ್ಲಿ ತನಿಖೆ ಆರಂಭಿಸಿದ್ದು, ಆರೋಪಿಗಳಿಗಾಗಿ ಶೋಧ ಮುಂದುವರಿಸಿದ್ದಾರೆ.
Next Story